Karna broke the beautiful couch..!

ಹರಿತಲೇಖನಿ ದಿನಕ್ಕೊಂದು ಕಥೆ: ಸುಂದರವಾದ ಮಂಚವನ್ನೇ ಮುರಿದ ಕರ್ಣ..!

Harithalekhani: ಕರ್ಣನು ದುರ್ಯೋಧನನ ಸ್ನೇಹಿತನಾಗಿದ್ದನು. ಅವನು ಒಬ್ಬ ಶ್ರೇಷ್ಟ ದಾನಿ ಎಂದು ಪ್ರಸಿದ್ಧನಾಗಿದ್ದಾರೆ.

ಅವರ ಬಳಿ ಸಹಾಯ ಬೇಡಿ ಬಂದ ಯಾರನ್ನೂ ಅವನು ಬರಿಗೈಯಲ್ಲಿ ಕಳಿಸುತ್ತಿರಲಿಲ್ಲ. ಅವನು ಪ್ರತಿದಿನ ನದಿಗೆ ಸ್ನಾನ ಮಾಡಲು ಹೋಗುತ್ತಿದ್ದನು. ನೀರಿನಲ್ಲಿ ಇಳಿದು ಸೂರ್ಯನಿಗೆ ಅರ್ಘ್ಯವನ್ನು ನೀಡುತ್ತಿದ್ದನು ಮತ್ತು ಅವನ ಬಳಿ ಬಂದ ಯಾಚಕರಿಗೆ ಬೇಡಿದನ್ನು ನೀಡುತ್ತಿದ್ದನು.

ಒಂದು ಸಲ ಭಗವಾನ ಶ್ರೀಕೃಷ್ಣ ಮತ್ತು ಅರ್ಜುನ ಕುಳಿತು ಮಾತಾಡುತ್ತಿದ್ದರು. ಮಾತಾಡುತ್ತಾ ಮಾತಾಡುತ್ತಾ ಕರ್ಣನ ದಾನಶೂರತೆಯ ಬಗ್ಗೆ ಚರ್ಚೆಯಾಯಿತು. ಶ್ರೀ ಕೃಷ್ಣನು ಕರ್ಣನ ದಾನಶೂರತೆಯನ್ನು ಪ್ರಶಂಸಿಸಿದನು. ಶ್ರೀಕೃಷ್ಣನು ಹೇಳಿದನು, “ಕರ್ಣನಂತ ಉದಾರಿ ವ್ಯಕ್ತಿಯು ಯಾರೂ ಇಲ್ಲ.”

ಇದನ್ನು ಕೇಳಿ ಅರ್ಜುನನು ಆಶ್ಚರ್ಯಚಕಿತನಾದನು ಮತ್ತು ಹೇಳಿದನು, “ಶ್ರೀಕೃಷ್ಣಾ, ಧರ್ಮರಾಜ ಕೂಡ ದಾನವೀರನೇ ಇದ್ದಾನೆ”. ಹಾಗಿದ್ದರೆ ಯಾರು ಹೆಚ್ಚು ದಾನವೀರರಿದ್ದಾರೆ ಎಂದು ಅವರು ಚರ್ಚಿಸಲು ಪ್ರಾರಂಭಿಸಿದರು. ಆಗ ಶ್ರೀಕೃಷ್ಣನು, “ಸರಿ ಹಾಗಿದ್ದರೆ, ನಾಳೆಯೇ ನಾವು ಕರ್ಣ ಮತ್ತು ಧರ್ಮರಾಜರ ಬಳಿ ಹೋಗಿ ಪರೀಕ್ಷಿಸೋಣ” ಎಂದು ಹೇಳಿದರು.

ಆಗ ಮಳೆಗಾಲವಿತ್ತು. ಮರುದಿನ ಸೂರ್ಯನು ಉದಯಿಸುತ್ತಿದ್ದಂತೆಯೇ ಶ್ರೀಕೃಷ್ಣ ಮತ್ತು ಅರ್ಜುನರು ಧರ್ಮರಾಜರ ಬಳಿಗೆ ಹೋದರು. ಅವರನ್ನು ನೋಡಿ ಧರ್ಮರಾಜನಿಗೆ ತುಂಬಾ ಆನಂದವಾಯಿತು. ಅವರನ್ನು ಆದರದಿಂದ ಸತ್ಕರಿಸಿದನು ಮತ್ತು ಅಲ್ಲಿಗೆ ಆಗಮಿಸಿದ ಕಾರಣವನ್ನು ಕೇಳಿದನು. ಆಗ ಶ್ರೀಕೃಷ್ಣನು ಹೇಳಿದನು, “ರಾಜ್ಯದಲ್ಲಿ ತಕ್ಷಣ ಒಂದು ಬೃಹತ್ ನಿರ್ಮಾಣ ಕಾರ್ಯ ಮಾಡಬೇಕಿದೆ. ಅದಕ್ಕಾಗಿ ಕಟ್ಟಿಗೆ ಬೇಕಾಗಿದೆ”. ತಕ್ಷಣ ಧರ್ಮರಾಯನು ತನ್ನ ಸೇವಕರನ್ನು ಕರೆದನು ಮತ್ತು ನಿರ್ಮಾಣಕ್ಕಾಗಿ ಅತ್ಯಂತ ಒಳ್ಳೆಯ ಗುಣಮಟ್ಟದ ಕಟ್ಟಿಗೆಯನ್ನು ತನ್ನಿರಿ ಎಂದು ಆಜ್ಞಾಪಿಸಿದನು. ತುಂಬಾ ಹೊತ್ತಾದರೂ ಸೇವಕರು ಹಿಂತಿರುಗಲಿಲ್ಲ.

ಸ್ವಲ್ಪ ಸಮಯದ ನಂತರ ಸೇವಕರು ತಲೆಯನ್ನು ಬಗ್ಗಿಸಿ ಖಾಲಿ ಕೈಯಲ್ಲಿ ಹಿಂತಿರುಗಿದರು. ಆಗ ಧರ್ಮರಾಜನು ಕೇಳಿದನು, “ಏನಾಯಿತು? ಕಟ್ಟಿಗೆಯು ಸಿಗಲಿಲ್ಲವೇ?”. ಸೇವಕರು ಹೇಳಿದರು, “ಮಳೆಯ ಕಾರಣದಿಂದಾಗಿ ಎಲ್ಲಾ ಕಟ್ಟಿಗೆಗಳು ಒದ್ದೆಯಾಗಿ ಬಿಟ್ಟಿದೆ. ಹಾಗಾಗಿ ನಾವು ಕಟ್ಟಿಗೆಯನ್ನು ತರಲಿಲ್ಲ”. ಧರ್ಮರಾಯನು ವಿಧಿ ಇಲ್ಲದೇ ಅರ್ಜುನ ಮತ್ತು ಕೃಷ್ಣನಿಗೆ ಕಟ್ಟಿಗೆ ಸಿಗಲಿಲ್ಲ ಎಂದು ತಿಳಿಸಿದನು.

ಅರ್ಜುನ ಮತ್ತು ಕೃಷ್ಣ ಹಿಂತಿರುಗಿದರು. ನಂತರ ಅವರು ಕರ್ಣನ ಬಳಿ ಹೋದರು. ಕರ್ಣನು ಅವರಿಗೆ ಆದರದಿಂದ ಕೂರಲು ಹೇಳಿದನು ಮತ್ತು ಅವರ ಕ್ಷೇಮ ಸಮಾಚಾರ ವಿಚಾರಿಸಿಕೊಂಡನು. ಆಗ ಅರ್ಜುನನು ಕಟ್ಟಿಗೆಯ ಕುರಿತು ಹೇಳಿದನು. ಆಗ ಕರ್ಣನು, “ಇಷ್ಟೇ ತಾನೇ? ಇದರಲ್ಲಿ ಇಷ್ಟು ಚಿಂತೆ ಮಾಡಲು ಏನಿದೆ?” ಎಂದು ಹೇಳುತ್ತಾ ತನ್ನ ಸೇವಕರನ್ನು ಕಟ್ಟಿಗೆ ತರಲು ಕಳಿಸಿದನು.

ಸ್ವಲ್ಪ ಸಮಯದಲ್ಲಿ ಆ ಸೇವಕರು ಹಿಂತಿರುಗಿದರು ಮತ್ತು ಹೇಳಿದರು, “ಮಳೆಯಲ್ಲಿ ಎಲ್ಲಾ ಕಟ್ಟಿಗೆಯು ಒದ್ದೆಯಾದ ಕಾರಣ ಯಾವುದೇ ಕಟ್ಟಿಗೆ ಸಿಗಲಿಲ್ಲ”.

ಇದನ್ನು ಕೇಳಿದ ಕರ್ಣನು ಅರಮನೆಯ ಒಳಗೆ ಹೋದನು ಮತ್ತು ಎಷ್ಟು ಹೊತ್ತಾದರೂ ಹೊರಗೆ ಬರದಿದ್ದಾಗ ಶ್ರೀಕೃಷ್ಣನು ಅರ್ಜುನನನ್ನು ಕರೆದುಕೊಂಡು ಒಳಗೆ ಹೋದನು. ಅಲ್ಲಿ ನೋಡಿದರೆ ಕರ್ಣನು ತನ್ನ ಮಂಚದ ಮರವನ್ನು ಕಡಿಯುತ್ತಿದ್ದನು. ಅಕ್ಕಪಕ್ಕದಲ್ಲಿ ಅನೇಕ ಮರದ ಸಾಮಾನು ಮುರಿದು ಇಡಲಾಗಿತ್ತು.

ಆಗ ಅವರಿಗೆ ತಿಳಿಯಿತು ಕರ್ಣ ಇಷ್ಟು ಹೊತ್ತು ಏನು ಮಾಡುತ್ತಿದ್ದನೆಂದು. ಅರ್ಜುನನು ಕೇಳಿದನು, “ಕರ್ಣಾ, ಇಷ್ಟು ಸಣ್ಣ ವಿಷಯಕ್ಕಾಗಿ ನೀನು ಚಂದನದ ಮರದ, ಕರಕುಶಲ ಕೆತ್ತನೆಯನ್ನು ಮಾಡಲಾಗಿರುವ, ಸುಂದರವಾದ ಮಂಚವನ್ನೇಕೆ ಮುರಿದೆ?”.

ಆಗ ಕರ್ಣನು ಹೇಳಿದನು, “ಈ ವಸ್ತುಗಳನ್ನು ಪುನಃ ಮಾಡಿಸಿಕೊಳ್ಳಬಹುದು ಆದರೆ ಯಾರಿಗಾದರು ಸಹಾಯ ಮಾಡುವಂತಹ ಅವಕಾಶವನ್ನು ಕಳೆದುಕೊಂಡರೆ ಅದಕ್ಕಿಂತ ದುಃಖದ ವಿಷಯವೇನಿದೆ?”.

ಕೃಪೆ. ಹಿಂದೂ ಜಾಗೃತಿ (ಸಾಮಾಜಿಕ ಜಾಲತಾಣ)

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!