B. Saroja Devi 's last rites will be performed with state honours: Cmsiddaramaiah

ಸರ್ಕಾರಿ ಗೌರವದೊಂದಿಗೆ ಬಿ.ಸರೋಜಾದೇವಿ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿ.ಸರೋಜಾದೇವಿ (B.Saroja Devi) ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಮಲ್ಲೇಶ್ವರಂನ 11 ನೇ ಅಡ್ಡ ರಸ್ತೆಯಲ್ಲಿರುವ ಬಹುಭಾಷಾ ತಾರೆ ಹಿರಿಯ ನಟಿ ದಿವಂಗತ ಪದ್ಮಭೂಷಣ ಶ್ರೀ ಮತಿ ಬಿ ಸರೋಜ ದೇವಿ ಇವರ ಪ್ರಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಎಲ್ಲಾ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು.ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ದೇವ್ ಆನಂದ್, ಎಂ.ಜಿ.ಆರ್, ಎನ್.ಟಿ.ಆರ್, ಶಿವಾಜಿ ಗಣೇಶನ್, ರಾಜ್ ಕುಮಾರ್ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದರು ಎಂದರು.

ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆ

ಯಾವುದೇ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಖಾಸಗಿ ಜೀವನದಲ್ಲಿಯೂ ಶಿಸ್ತುಬದ್ಧ ಜೀವನವನ್ನು ನಡೆಸಿದವರು. ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರ ಸಾವಿನಿಂದ ಚಿತ್ರರಂಗಕ್ಕೆ ಅಪಾರವಾದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು. ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು.

ದೊಡ್ಡ ವ್ಯಕ್ತಿತ್ವವಿದ್ದ ನಟಿ

ಅನೇಕ ಬಾರಿ ಸರೋಜಾದೇವಿಯವರನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಆತ್ಮೀಯವಾಗಿ, ಪ್ರೀತಿಯಿಂದ ಮಾತನಾಡುತ್ತಿದ್ದರು. ದೊಡ್ಡ ವ್ಯಕ್ತಿತ್ವವಿದ್ದ ನಟಿ ಅವರು ಎಂದು ತಿಳಿಸಿದರು. ಅವರ ಸಿನಿಮಾಗಳಲ್ಲಿ ಮಲ್ಲಮ್ಮನ ಪವಾಡ, ಕಿತ್ತೂರು ಚೆನ್ನಮ್ಮ, ಭಾಗ್ಯವಂತರು, ಬಬ್ರುವಾಹನ, ನ್ಯಾಯವೇ ದೇವರು ಸೇರಿದಂತೆ ಅನೇಕ ಚಿತ್ರಗಳನ್ನು ನೋಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ರಸ್ತೆಗೆ ಸರೋಜಾದೇವಿ ಹೆಸರು: ಬಿಬಿಎಂಪಿ ಯೊಂದಿಗೆ ಚರ್ಚೆ

ಸರೋಜಾದೇವಿಯವರ ಹೆಸರನ್ನು ಅವರು ವಾಸಿಸುತ್ತಿದ್ದ ರಸ್ತೆಗೆ ಇಡಬೇಕೆಂಬ ಆಸೆಯಿತ್ತು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ಬಿಬಿಎಂಪಿ ಯೊಂದಿಗೆ ಚರ್ಚಿಸುವುದಾಗಿ ಹೇಳಿದರು.

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!