I haven't been given a house for two years: R Ashoka

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ. ಆದರೆ ಯಾವುದೇ ಪತ್ರಕ್ಕೂ ಉತ್ತರ ಬಂದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ (R Ashoka) ತಿರುಗೇಟು ಹೇಳಿದ್ದಾರೆ ‌.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಮ್ಮ ಬಿಜೆಪಿ ಸರ್ಕಾರ ಇದ್ದಾಗ ಅಂದಿನ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯನವರಿಗೆ ಯಾವ ಮನೆ ಕೊಡಲಾಗಿತ್ತೋ ಅದೇ ಮನೆ ಕೊಡಿ ಎಂದು ಕೇಳಿದ್ದೇನೆ. ಅದರಲ್ಲಿ ತಪ್ಪೇನಿದೆ.

ಎರಡು ವರ್ಷ ಆದರೂ ಇದುವೆರಗೂ ವಿರೋಧ ಪಕ್ಷದ ನಾಯಕನಿಗೆ ಅಧಿಕೃತ ಸರ್ಕಾರಿ ಮನೆ ಕೊಟ್ಟಿಲ್ಲ. ಇದು ಕಾಂಗ್ರೆಸ್ ಪಕ್ಷ ಶಿಷ್ಟಾಚಾರ ಪಾಲನೆ ಮಾಡುವ ಪರಿ ಎಂದು ಟೀಕಿಸಿದ್ದಾರೆ.

ಸಿಗಂದೂರು ಸೇತುವೆ ಉಲ್ಲಂಘನೆ ಕಾರ್ಯಕ್ರಮದಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ,

ಸಿಎಂ ಸಿದ್ದರಾಮಯ್ಯ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿರುವುದು ಸರಿ ಅಲ್ಲ. ಸೇತುವೆ ನಿರ್ಮಾಣದ ಕ್ರೆಡಿಟ್ ಬಿಜೆಪಿಗೆ ಹೋಗುತ್ತಿದೆ ಎನ್ನುವ ಹತಾಶೆಯಿಂದ ಸಿಎಂ ಗೊಂದಲ ಸೃಷ್ಟಿ ಮಾಡಲು ಹೊರಟಿದ್ದಾರೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಗೆ ಆಹ್ವಾನ ಕೊಟ್ಟಿದ್ದಾರೆ, ಶಿಷ್ಟಾಚಾರದ ಪ್ರಕಾರ ಮುಖ್ಯಮಂತ್ರಿಗಳ ಹೆಸರು ಹಾಕಿದ್ದಾರೆ. ಮುಖ್ಯಮಂತ್ರಿಗಳಿಗೆ ಬೇರೆ ಪೂರ್ವ ನಿಗದಿತ ಕಾರ್ಯಕ್ರಮ ಇದ್ದರೆ, ಯಾವ ಕಾರ್ಯಕ್ರಮ ಮುಖ್ಯ, ಯಾವುದಕ್ಕೆ ಆದ್ಯತೆ ಕೊಡಬೇಕು ಅನ್ನೋದನ್ನ ಅವರೇ ನಿರ್ಧಾರ ಮಾಡಬೇಕು. ಅದು ಬಿಟ್ಟು ಮುಖ್ಯಮಂತ್ರಿಗಳನ್ನ ಕೇಳಿ ಕಾರ್ಯಕ್ರಮದ ದಿನಾಂಕ, ಸಮಯ ನಿಗದಿ ಮಾಡಬೇಕು ಅನ್ನೋದು ಸರಿಯಲ್ಲ.

ಇಷ್ಟಕ್ಕೂ ರಾಜ್ಯ ಸರ್ಕಾರ ಯಾವ್ಯಾವ ಕಾರ್ಯಕ್ರಮಗಳಿಗೆ ವಿರೋಧ ಪಕ್ಷದ ನಾಯಕರು ಹಾಗೂ ಶಾಸಕರ ಸಲಹೆ ಕೇಳಿದೆ. ಕಳೆದ ಎರಡು ವರ್ಷದಲ್ಲಿ ವಿಪಕ್ಷ ನಾಯಕನಾದ ನನಗೆ ಬೆಂಗಳೂರಿನಲ್ಲಿ ಜರುಗಿದ ಸೇರಿದಂತೆ ಯಾವ ಕಾರ್ಯಕ್ರಮಕ್ಕೂ ಸಲಹೆಯನ್ನೂ ಕೇಳಿಲ್ಲ, ಆಹ್ವಾನವನ್ನೂ ಕೊಟ್ಟಿಲ್ಲ. ರಾಜ್ಯ ಸರ್ಕಾರ ಮಾಡಿರೋದನ್ನೇ ಕೇಂದ್ರ ಸರ್ಕಾರ ಮಾಡಿದೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಾಗರದಲ್ಲಿ ಇದ್ದರೂ ಕಾರ್ಯಕ್ರಮಕ್ಕೆ ಹೋಗಿಲ್ಲ. ಮಾಧ್ಯಮದವರ ಮುಂದೆ ಕಾರ್ಯಕ್ರಮಕ್ಕೆ ಹೋಗುತ್ತೇನೆ ಎಂದು ಹೇಳಿ ಕಡೆ ಕ್ಷಣದಲ್ಲಿ ಗೈರು ಹಾಜರಾಗಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಶಿಷ್ಟಾಚಾರ ಪಾಲನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ, ಎಂದು ಹೇಳಿದ್ದಾರೆ.

ರಾಜಕೀಯ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ಎರಡು ವರ್ಷದಿಂದ ನನಗೆ ಮನೆ ಕೊಟ್ಟಿಲ್ಲ: ಆರ್ ಅಶೋಕ

ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ನನಗೆ ಅಧಿಕೃತ ಸರ್ಕಾರಿ ನಿವಾಸ ಕೊಡಿ ಎಂದು ಈವರೆಗೂ ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದಿದ್ದೇನೆ: ಆರ್ ಅಶೋಕ (R Ashoka)

[ccc_my_favorite_select_button post_id="111165"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!