ನಿಮಿಷಾ ಪ್ರಿಯಾರನ್ನು ಕ್ಷಮಿಸಲ್ಲ; ಗಲ್ಲು ಶಿಕ್ಷೆಯನ್ನು ಜಾರಿಗೊಳಿಸುವಂತೆ ಮೃತನ ಕುಟುಂಬ ಪಟ್ಟು

Nimisha Priya's death sentence revoked

ನವದೆಹಲಿ: ಯೆಮನ್ ದೇಶದಲ್ಲಿ ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಣೆಯಾಗಿ, ಗಲ್ಲು ಶಿಕ್ಷೆ ವಿಧಿಸಲಾಗಿರುವ ಭಾರತದ ಕೇರಳ ಮೂಲದ ಶುಕ್ರೂಷಕಿ ನಿಮಿಷಾ ಪ್ರಿಯಾಗೆ (Nimisha Priya) ಕ್ಷಮಾದಾನ ನೀಡಲು ಯೆಮನ್ ನ ಸಂತ್ರಸ್ತ, ತಲಾಲ್ ಅಬೋ ಮಹಿ ಅವರ ಕುಟುಂಬ ಸ್ಪಷ್ಟವಾಗಿ ನಿರಾಕರಿಸಿದೆ.

ಅಲ್ಲದೇ, ನ್ಯಾಯಾಲಯದಿಂದ ನಿಗದಿಯಾಗಿರುವ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸಲೇಬೇಕು ಎಂದು ಪಟ್ಟುಹಿಡಿದಿದೆ.

ನಿಮಿಷಾ ಪ್ರಿಯಾ ಅಪರಾಧವನ್ನು ನಮ್ಮ ಕುಟುಂಬವು ಕ್ಷಮಿಸುವುದಿಲ್ಲ ಮತ್ತು ಯಾವುದೇ ಕಾರಣಕ್ಕೂ ಕ್ಷಮಾ ಪರಿಹಾರವನ್ನು (ಬ್ಲಡ್ ಮನಿ) ಸ್ವೀಕರಿಸುವುದಿಲ್ಲ ಎಂದು ನಿಮಿಷಾರಿಂದ ಹತ್ಯೆಯಾದ ಯೆಮನ್ ಪ್ರಜೆ ತಲಾಲ್ ಅಬ್ದು ಮೆಪ್ಪಿ ಸಹೋದರ ಅಬ್ದುಲ್ ಫತ್ತಾಹ್ ಹೇಳಿದ್ದಾರೆ.

ಬಿಬಿಸಿ ಅರೇಬಿಕ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಫತ್ತಾಹ್, ತಡ ಮಾಡದೇ ನಿಮಿಷಾ ಪ್ರಿಯಾರನ್ನು ಗಲ್ಲಿಗೇರಿ ಸಬೇಕು ಎಂದು ಒತ್ತಾಯಿಸಿದ್ದಾರೆ.

ಭಾರತದ ಮಾಧ್ಯಮಗಳು ಅಪರಾಧಿಯನ್ನು ಸಂತ್ರಸ್ತೆ ಎನ್ನುವ ರೀತಿ ಬಿಂಬಿಸುತ್ತಿವೆ. ನಿಮಿಷಾಳಿಗೆ ಮೆಹಿ ಕಿರುಕುಳ ನೀಡಿದ್ದನು ಮತ್ತು ಆಕೆಯ ಪಾಸ್‌ಪೋರ್ಟ್ ಇಟ್ಟುಕೊಂಡಿದ್ದನು ಎಂಬ ಸುಳ್ಳನ್ನು ಹರಡುತ್ತಿವೆ. ಈ ಸುಳ್ಳುಗಳಿಂದ ನಮ್ಮ ಕುಟುಂಬಕ್ಕೆ ಇನ್ನಷ್ಟು ನೋವಾಗಿದೆ ಎಂದು ಹೇಳಿದ್ದಾರೆ.

ಕೊಲೆ ಆರೋಪದ ಮೇಲೆ ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಅದರಂತೆ ಜುಲೈ 16 ರಂದು ಆಕೆಯನ್ನು ಗಲ್ಲಿಗೇರಿಸಬೇಕಿತ್ತು. ಈ ನಡುವೆ ಸುಪ್ರೀಂ ಕೋರ್ಟ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆಯ ಅರ್ಜಿ ಕೂಡ ಸಲ್ಲಿಕೆಯಾಗಿತ್ತು.

ಮರಣದಂಡನೆಯನ್ನು ಮಹತ್ವದ ಬೆಳವಣಿಗೆಯೊಂದರಲ್ಲಿ ಅಲ್ಲಿನ ನ್ಯಾಯಾಲಯ ಮುಂದಿನ ಆದೇಶದ ವರೆಗೆ ಮುಂದೂಡಿದೆ.

ಕೊಲೆ ಕೇಸ್: ಯೆಮೆನ್ ಪ್ರಜೆ ತಲಾಲ್ ಅಯ್ಯೋ ಮೆಹದಿ ಅವರನ್ನು ಕೊಲೆ ಮಾಡಿದ ಆರೋಪ ನಿಮಿಷಾ ಪ್ರಿಯ ಮೇಲಿದೆ. ಆಕೆ 3 ವರ್ಷಗಳಿಂದ ಜೈಲಿನಲ್ಲಿದ್ದಾಳೆ.

2008 ರಲ್ಲಿ ನಿಮಿಷಾ ಪ್ರಿಯಾ ನರ್ಸಿಂಗ್‌ಗಾಗಿ ಯೆಮೆನ್‌ಗೆ ಹೋಗಿದ್ದಳು. 2015 ರಲ್ಲಿ ತಲಾಲ್ ಅಬ್ಬೋ ಮತ್ತೆ ಅವರೊಂದಿಗೆ ಕ್ಲಿನಿಕ್ ಒಂದನ್ನು ಓಪನ್ ಮಾಡಿದಳು. ಬಳಿಕ ಮಹಿ ತನ್ನ ಪಾಸ್‌ಪೋರ್ಟ್ ಅನ್ನು ಕಸಿದುಕೊಂಡು ತನಗೆ ಸಾಕಷ್ಟು ಹಿಂಸೆ ನೀಡಿದರು. ಅಲ್ಲದೇ ಕ್ಲಿನಿಕ್‌ನಿಂದ ಬಂದಂತಹ ಆದಾಯವನ್ನು ಕೂಡ ಕಸಿದುಕೊಂಡರು ಎಂದು ನಿಮಿಷಾ ಆರೋಪಿಸಿದಾಳೆ.

ಇದಾದ ಬಳಿಕ 2017 ರಲ್ಲಿ ತನ್ನ ಪಾಸ್‌ಪೋರ್ಟ್ ಅನ್ನು ಮರಳಿ ಪಡೆಯುವ ಸಲುವಾಗಿ ಮಹಿ ಪ್ರಜ್ಞಾಹೀನರಾಗಲು ನಿಮಿಷಾ ಇಂಜೆಕ್ಷನ್ ನೀಡಿದಳು. ಆದರೆ ಓವರ್ ಡೋಸ್‌ನಿಂದಾಗಿ ಮೆಹದಿ ಸಾವನ್ನಪ್ಪಿದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]