CRPF jawan attacked; Kanwar pilgrim arrested

CRPF ಯೋಧನ ಮೇಲೆ ಹಲ್ಲೆ; ಕನ್ವರ್ ಯಾತ್ರಿಕರ ಬಂಧನ: VIDEO

ಲಕ್ಕೋ: ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜವಾನನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ 7 ಮಂದಿ ಕನ್ವಾರಿಯರನ್ನು ಬಂಧಿಸಿರುವ ಘಟನೆ ಮಿರ್ಜಾಪುರ ರೈಲು ನಿಲ್ದಾಣದಲ್ಲಿ ನಡೆದಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೀರ ಯೋಧನ ಮೇಲೆ ಹಲ್ಲೆ ಕೃತ್ಯವನ್ನು ಖಂಡಿಸಲಾಗುತ್ತಿದೆ.

ವರದಿಯನ್ವಯ ಸಿಆರ್‌ಪಿಎಫ್ ಜವಾನ ಗೌತಮ್ ಮಿರ್ಜಾಪುರದಿಂದ ಮಣಿಪುರಕ್ಕೆ ತೆರಳಲು ಬ್ರಹ್ಮಪುತ್ರ ರೈಲಿಗಾಗಿ ಕಾಯುತ್ತಿದ್ದರು. ಈ ಸಮಯದಲ್ಲಿ ಪ್ಲಾಟ್‌ಫಾರ್ಮ್‌ಗೆ ಬಂದ ಕೆಲವು ಕನ್ವಾರಿಯರೊಂದಿಗೆ ಅವರು ವಾಗ್ವಾದ ನಡೆಸಿದರು. ಇದಾದ ಬಳಿಕ ಕನ್ವಾರಿಯರು ಜವಾನ ಗೌತಮ್‌ ಅವನ್ನು ಬೆನ್ನಟ್ಟಿ ನೆಲಕ್ಕೆ ಎಸೆದು ಕಾಲಿನಿಂದ ಒದ್ದು ಮನಬಂದಂತೆ ಥಳಿಸಿದ್ದಾರೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕೇಸರಿ ಬಟ್ಟೆ ಧರಿಸಿದ ಕನ್ವಾರಿಯರ ಗುಂಪೊಂದು CRPF ಸಿಬ್ಬಂದಿಯ ಮೇಲೆ ದಾಳಿ ಮಾಡಿ ಥಳಿಸುತ್ತಿರುವುದು ಕಂಡುಬಂದಿದೆ.

ಗಲಾಟೆಯ ದೃಶ್ಯಗಳನ್ನು ರೈಲ್ವೆ ನಿಲ್ದಾಣದಲ್ಲಿದ್ದ ಇತರ ಪ್ರಯಾಣಿಕರು ನೋಡುತ್ತಾ ನಿಂತಿದ್ದರೆ ಹೊರತು ಜನರಾಗಲಿ ಅಥವಾ ಭದ್ರತಾ ಸಿಬ್ಬಂದಿಯಾಗಲಿ ಯಾರೂ ಅವರನ್ನು ರಕ್ಷಿಸುವ ಪ್ರಯತ್ನ ಮಾಡಿಲ್ಲ.

ಈ ಘಟನೆಯ ನಂತರ, ಸಿಆರ್‌ಪಿಎಫ್ ಜವಾನ ಗೌತಮ್ ರೈಲು ಹತ್ತಿ ತನ್ನ ಗಮ್ಯಸ್ಥಾನಕ್ಕೆ ತೆರಳಿದರು ಎನ್ನಲಾಗಿದೆ.

ಇನ್ನೂ ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಗೆ ಮಾಹಿತಿ ನೀಡಲಾಗಿದ್ದು, ಅವರು ತಕ್ಷಣ ಸ್ಥಳಕ್ಕೆ ದೌಡಾಯಿಸಿದರು. ದಾಳಿಯಲ್ಲಿ ಭಾಗಿಯಾಗಿದ್ದ ಕನ್ವಾರಿಯಾಗಳ ವಿರುದ್ಧ ಆರ್‌ಪಿಎಫ್ ಪ್ರಕರಣ ದಾಖಲಿಸಿದೆ. ಸಂಪೂರ್ಣ ತನಿಖೆಯ ನಂತರ, ಸಿಆರ್‌ಪಿಎಫ್ ಜವಾನನನ್ನು ಥಳಿಸಿದ ಆರೋಪದ ಮೇಲೆ ಅವರಲ್ಲಿ ಏಳು ಜನರನ್ನು ಬಂಧಿಸಲಾಯಿತು.

ಈ ಸಂಬಂಧ ಆರ್‌ಪಿಎಫ್ ಉಸ್ತುವಾರಿ ಇನ್ಸ್‌ಪೆಕ್ಟ‌ರ್ ಚಮನ್ ಸಿಂಗ್ ತೋಮರ್ ಅವರು ಪ್ರತಿಕ್ರಿಯಿಸಿ, ಸಿಆರ್‌ಪಿಎಫ್ ಜವಾನನನ್ನು ಥಳಿಸಿದ ಪ್ರಕರಣದಲ್ಲಿ ಏಳು ಕನ್ವಾರಿಯಾಗಳನ್ನು ಬಂಧಿಸಲಾಗಿದೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕನ್ವರ್ ಯಾತ್ರೆಯು ಕನ್ವಾರಿಯಾ ಅಥವಾ ಭೋಲೆ ಎಂದು ಕರೆಯಲ್ಪಡುವ ಶಿವ ಭಕ್ತರು ಪ್ರತಿ ವರ್ಷ ಆಚರಿಸುವ ವಾರ್ಷಿಕ ಹಿಂದೂ ತೀರ್ಥಯಾತ್ರೆಯಾಗಿದೆ.

ಈ ಯಾತ್ರೆಯು ಶ್ರಾವಣ ಮಾಸದಲ್ಲಿ ನಡೆಯುವುದಾಗಿದ್ದು, ಈ ವರ್ಷ ಜುಲೈ 11 ರಿಂದ ಪ್ರಾರಂಭವಾಗಿದೆ. ಸಂದರ್ಭದಲ್ಲಿ ಕನ್ವಾರಿಯರು ಶಿವನಿಗೆ ನೀರು ತುಂಬಿಸಿ ಅರ್ಪಿಸಲಿದ್ದಾರೆ.

ಈ ನಡುವೆ ಅನೇಕ ಕಡೆಗಳಿಂದ ಹೊಡೆದಾಟದ ಸುದ್ದಿಗಳು ಬರುತ್ತಿವೆ. ಅಂತೆಯೇ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದ ಹೊಡೆದಾಟದ ವೀಡಿಯೋವ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!