ಸಣ್ಣ ವ್ಯಾಪಾರಿಗಳಿಗೆ GST ಬರೆ: ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

GST for small traders: BJP is trying to wipe our faces by eating bananas: DCM D.K. Shivakumar

ಬೆಂಗಳೂರು: “ಸಣ್ಣ ವ್ಯಾಪಾರಿಗಳಿಗೆ ಜಿಎಸ್‌ಟಿ (GST) ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿರುಗೇಟು ನೀಡಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

“ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ ನೀಡುವುದನ್ನು ಬಿಜೆಪಿ ಸರ್ಕಾರ ಹಿಂಪಡೆಯಬೇಕು. ತರಕಾರಿ, ಹಣ್ಣು, ಎಳನೀರು, ಹೂವಿನ ವ್ಯಾಪಾರಿ ಸೇರಿದಂತೆ ಸಣ್ಣಪುಟ್ಟ ವ್ಯಾಪಾರ ಮಾಡುವ ಲಕ್ಷಾಂತರ ಮಂದಿ ಇದ್ದಾರೆ. ಈಗಾಗಲೇ 14 ಸಾವಿರ ವ್ಯಾಪಾರಿಗಳಿಗೆ ನೋಟೀಸ್ ನೀಡಲಾಗಿದೆ. ಈ ಹಿಂದೆಯೇ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಜಿಎಸ್ ಟಿ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರದಲ್ಲಿ ಜನರಿಗೆ ಹೇಗೆ ನೆರವಾಗಬಹುದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ” ಎಂದು ತಿಳಿಸಿದರು.

ಈ ವಿಚಾರವಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೀರಾ ಎಂದು ಕೇಳಿದಾಗ, “ಖಂಡಿತವಾಗಿ ಬರೆಯುತ್ತೇವೆ. ನಮ್ಮ ಜನರಿಗೆ ನ್ಯಾಯ ಒದಗಿಸಿಕೊಡಬೇಕು. ಅತಿ ಹೆಚ್ಚು ಜಿಎಸ್ ಟಿ ತೆರಿಗೆ ಕಟ್ಟುತ್ತಿರುವ ರಾಜ್ಯ ನಮ್ಮದು. ನಮ್ಮ ಬಡ ಹಾಗೂ ಮಧ್ಯಮ ವ್ಯಾಪಾರಿಗಳಿಗೆ ಇದರಿಂದ ತೊಂದರೆ ಆಗುತ್ತಿದೆ” ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಟಾರ್ಗೆಟ್ ನೀಡಿರುವುದರಿಂದ ಈ ನೋಟೀಸ್ ನೀಡಲಾಗಿದೆ ಎಂದು ಕೇಳಿದಾಗ, “ಕೇಂದ್ರ ಜಿಎಸ್ ಟಿ ಕೌನ್ಸಿಲ್ ಯಾವ ನಿಯಮ ರೂಪಿಸುತ್ತಾರೋ ಅದರಂತೆ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ. ಕೇಂದ್ರದ ಸಮಿತಿಯ ಒತ್ತಡದ ಮೇರೆಗೆ ಈ ನೋಟೀಸ್ ನೀಡಲಾಗಿದೆ” ಎಂದು ಹೇಳಿದರು.

ಜಿಬಿಎ ಅಡಿಯಲ್ಲಿ 5 ಪಾಲಿಕೆ ಮಾಡುವುದನ್ನು ಪ್ರಶ್ನಿಸಿ ಪಿಐಎಲ್ ಅರ್ಜಿ ಹಾಕಿರುವ ಬಗ್ಗೆ ಕೇಳಿದಾಗ, “ಯಾರು ಬೇಕಾದರೂ ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಬಹುದು. ಇದರಲ್ಲಿ ತಪ್ಪೇನಿಲ್ಲ ಇದು ಅವರ ಹಕ್ಕು. ಅದನ್ನು ಮೊಟಕುಗೊಳಿಸಲು ಆಗುವುದಿಲ್ಲ. ನಾವು ಏನಾದರೂ ತಪ್ಪು ಮಾಡಿದ್ದಾರೆ ಅದನ್ನು ಸರಿಪಡಿಸಿಕೊಳ್ಳುತ್ತೇವೆ. ಬೆಂಗಳೂರಿನಲ್ಲಿ ಐದು ಪಾಲಿಕೆ ಮಾಡಲು ಸರ್ಕಾರ ಬದ್ಧವಾಗಿದೆ. ನಾನು ಬಿಜೆಪಿ ನಾಯಕರ ಸಭೆ ಕರೆದು ಚರ್ಚಿಸಿ ಸಲಹೆಗಳನ್ನು ಸ್ವೀಕರಿಸಿದ್ದೇನೆ. ಜಂಟಿ ಸದನ ಸಮಿತಿ ರಚಿಸಿ ಚರ್ಚೆ ಮಾಡಲಾಗಿದೆ. ಈಗಲೂ ಅವರು ತಮ್ಮ ಆಕ್ಷೇಪಣೆ ಸಲ್ಲಿಸಬಹುದು. ಅವರು ರಾಜಕೀಯ ಕಾರಣಕ್ಕೆ ಧ್ವನಿ ಎತ್ತುತ್ತಿದ್ದಾರೆ. ಬೆಂಗಳೂರಿನ ಹಿತಕ್ಕಾಗಿ ಐದು ಪಾಲಿಕೆ ಮಾಡಲು ಮುಂದಾಗಿದ್ದೇವೆ. ಮುಂದಿನ ಒಂದೆರಡು ದಿನಗಳಲ್ಲಿ ಮಾಧ್ಯಮಗೋಷ್ಠಿ ಕರೆದು ಎ ಖಾತಾ, ಬಿ ಖಾತಾ ವಿಚಾರ, ಇ-ಖಾತಾ ಅಭಿಯಾನ, ತೆರಿಗೆ ಹಾಗೂ ಪಾಲಿಕೆ ವಿಚಾರವಾಗಿ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದರು.

ಸುರ್ಜೆವಾಲ ಅವರು ಮತ್ತೆ ರಾಜ್ಯಕ್ಕೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “25ಕ್ಕೆ ನಾನು ಹಾಗೂ ಸಿಎಂ ದೆಹಲಿ ಪ್ರವಾಸ ಮಾಡುತ್ತಿದ್ದೇವೆ. ಇನ್ನು ಸಂಸತ್ ಅಧಿವೇಶನ ನಡೆಯುತ್ತಿದೆ. ನನಗೆ ಗೊತ್ತಿರುವ ಮಾಹಿತಿ ಇಷ್ಟೆ” ಎಂದು ತಿಳಿಸಿದರು.

ಎಸ್ ಐಟಿ ರಚನೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಪರ ವಿರೋಧ ಚರ್ಚೆ ಆಗುತ್ತಿದೆ. ಇದನ್ನು ಗೃಹ ಸಚಿವರು ನಿಭಾಯಿಸುತ್ತಿದ್ದು, ಬಹಳ ಹಿರಿಯ ಅಧಿಕಾರಿಗಳನ್ನು ಎಸ್ ಐಟಿ ತಂಡದಲ್ಲಿ ನಿಯೋಜಿಸಿದ್ದಾರೆ. ತನಿಖೆ ನಂತರ ಸತ್ಯಾಸತ್ಯತೆ ತಿಳಿಯುತ್ತದೆ” ಎಂದರು.

ವಿಷಯಾಂತರ ಮಾಡಲು ಎಸ್ ಐಟಿ ರಚಿಸಿದ್ದಾರೆ ಎಂದು ಕೇಳಿದಾಗ, “ನಾವು ಏನು ಮಾಡಿದರೂ ಬಿಜೆಪಿ ವಿರೋಧ ಮಾಡುತ್ತದೆ” ಎಂದರು.

ಸ್ಥಳೀಯ ಪೊಲೀಸ್ ತನಿಖೆ ನಂತರ ಎಸ್ ಐಟಿ ರಚನೆ ಬಗ್ಗೆ ತೀರ್ಮಾನ ಎಂದು ಸಿಎಂ ಹೇಳಿದ ಬೆನ್ನಲ್ಲೇ ದಿಢೀರನೆ ಎಸ್ ಐಟಿ ರಚನೆಯಾಗಿದೆ ಎಂದು ಕೇಳಿದಾಗ, “ಮಾಧ್ಯಮಗಳು ಈ ವಿಚಾರವನ್ನು ದೊಡ್ಡದಾಗಿ ಬಿಂಬಿಸಿದಾಗ ನಾವು ಮಾಧ್ಯಮಗಳಿಗೆ ಗೌರವ ನೀಡಬೇಕಲ್ಲವೇ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜಕ್ಕೆ ನ್ಯಾಯ ಒದಗಿಸುವಲ್ಲಿ ನಿಮಗೂ ನಮ್ಮಷ್ಟೇ ಜವಾಬ್ದಾರಿ ಇದೆ. ನಿಮ್ಮ ಹಾಗೂ ವಿರೋಧ ಪಕ್ಷಗಳ ಹಿತವಚನ, ನುಡಿಮುತ್ತುಗಳನ್ನು ನಾವು ಕೇಳಬೇಕು” ಎಂದು ತಿಳಿಸಿದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]