Krishna weighed on a basil leaf

ಹರಿತಲೇಖನಿ ದಿನಕ್ಕೊಂದು ಕಥೆ; ತುಳಸಿ ದಳವೊಂದಕ್ಕೆ ತೂಗಿದ ಕೃಷ್ಣ..!

Harithalekhani: ಒಮ್ಮೆ ಸತ್ಯಭಾಮೆಯು ನಾರದರನ್ನು ಕುರಿತು “ಮಹರ್ಷಿಗಳೇ, ಜನ್ಮಜನ್ಮಾಂತರಕ್ಕೂ ಶ್ರೀಕೃಷ್ಣನೇ ನನಗೆ ಗಂಡನಾಗಬೇಕೆಂಬ ಹಂಬಲವಿದೆ; ಅದು ಈಡೇರಲು ಏನಾದರೂ ದಾರಿಯಿದೆಯೆ” ಎಂದು ಕೇಳಿದಳು.

ಅದಕ್ಕೆ ನಾರದರು, “ಓಹೋ, ಇದೆ ತಾಯೆ, ನೀನು ಪುಣ್ಯಕವೆಂಬ ವ್ರತವನ್ನಾಚರಿಸಿ, ಅದರ ಮುಕ್ತಾಯದಲ್ಲಿ ಶ್ರೀಕೃಷ್ಣನನ್ನು ಯಾರಾದರೂ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟುಬಿಡು. ಆಗ ನಿನ್ನ ಹಂಬಲಕ್ಕೆ ಬೆಂಬಲ ದೊರಕುತ್ತದೆ” ಎಂದರು.

ಸರಿ ಆ, ವ್ರತ ನಡೆದೆ ಹೋಯಿತು. ಆ ಹೊತ್ತಿಗೆ ಸರಿಯಾಗಿ ಅಲ್ಲಿಗೆ ಬಂದ ನಾರದರಿಗೆ ಪತಿದೇವರನ್ನು ದಾನಮಾಡಿದ್ದೂ ಆಗಿ ಹೋಯಿತು.

ಆಗ ಶ್ರೀಕೃಷ್ಣನು ನಾರದರನ್ನು ಕುರಿತು, “ಈಗ ನಾನು ಏನು ಮಾಡಬೇಕು ಸ್ವಾಮಿ” ಎಂದು ಕೇಳಿದನು. ಅದಕ್ಕೆ ನಾರದರು, “ಏನು ಮಾಡಬೇಕು ಎನ್ನುತ್ತೀಯಲ್ಲಪ್ಪಾ, ಇನ್ನು ಅರಮನೆಯಲ್ಲಿ ಇರು ವಂತಿಲ್ಲ, ಹಿಡಿದುಕೋ ಈ ತಂಬೂರಿ, ನಡೆ ಹಾಡುತ್ತ ನನ್ನ ಹಿಂದೆ, ನೀನಿನ್ನು ನನ್ನ ಅನುಚರನಲ್ಲವೆ”? ಎಂದರು.

ಆಗ ಸತ್ಯಭಾಮೆಗೆ ಸಿಡಿಲೆರಗಿದಂತಾಯಿತು, ದಿಕ್ಕು ತೋರದಾಯಿತು.

“ಇದೆಂತಹ ಕೆಲಸ ಮಾಡಿಬಿಟ್ಟೆ” ಎಂದು ತನ್ನ ತಪ್ಪಿನ ಅರಿವಾಯಿತು. “ಈಗ ನೀವೇ ಏನಾದರೂ ಮಾರ್ಗವನ್ನು ತೋರಿಸಿ ನಾರದರೇ, ಸ್ವಾಮಿಯನ್ನು ಕಳೆದುಕೊಳ್ಳಲುಂಟೇ” ಎಂದು ಅಂಗಲಾಚಿದಳು.

ಆಗ ನಾರದರು “ನಾನೇನೋ ಕೃಷ್ಣನನ್ನು ನಿನಗೇ ಮರಳಿಸಿಬಿಡುತ್ತೇನೆ. ಆದರೆ ದಾನವಾಗಿ ಕೊಟ್ಟುದನ್ನು ಮರಳಿ ಪಡೆದರೆ ‘ದತ್ತಾಪಹಾರ’ ಎಂಬ ದೋಷ ನಿನಗೆ ಅಂಟಿಕೊಳ್ಳುತ್ತದೆಯಲ್ಲ, ಅದಕ್ಕೇನು ಮಾಡುತ್ತೀಯೆ ತಾಯೆ” ಎಂದರು.

“ಅದಕ್ಕೂ ನೀವೇ ಏನಾದರೂ ಪರಿಹಾರ ಸೂಚಿಸಬೇಕು ನಾರದರೆ” ಎಂದು ಸತ್ಯಭಾಮೆ ಅವರಿಗೆ ಶರಣಾದಳು.

ಆಗ ನಾರದರು “ತಾಯೆ, ತುಲಾಭಾರದ ಮೂಲಕ ಕೃಷ್ಣನ ತೂಕಕ್ಕೆ ಸಮನಾಗುವ ನಿನ್ನ ಆಭರಣಗಳನ್ನು ತೂಗಿಸಿ ನನಗೆ ದಾನಮಾಡು, ನಾನು ನಿನಗೆ ಕೃಷ್ಣನನ್ನು ಹಿಂದಕ್ಕೆ ಕೊಡುತ್ತೇನೆ. ಆಗ ದೋಷವೆಲ್ಲ ಪರಿಹಾರವಾಗುತ್ತದೆ” ಎಂದು ಸಲಹೆ ಕೊಟ್ಟರು.

ಸತ್ಯಭಾಮೆಗೆ ಹೋದಜೀವ ಬಂದಂತಾಯಿತು. ಲಗುಬಗೆಯಿಂದ ಕೃಷ್ಣನನ್ನು ತಕ್ಕಡಿಯ ಒಂದು ತಟ್ಟೆಯಲ್ಲಿ ಕೂರಿಸಿ, ತನ್ನ ಆಭರಣಗಳನ್ನೆಲ್ಲ ತಂದು ಇನ್ನೊಂದು ತಟ್ಟೆಗೆ ಅಡಕಿದಳು. ಅವಳ ಆಭರಣವೆಲ್ಲ ಬರಿದಾಯಿತೇ ಹೊರತು, ಕೃಷ್ಣನ ತೂಕಕ್ಕೆ ಅದು ಸಮನಾಗಲಿಲ್ಲ.

“ಈಗ ನೀವೇ ಏನಾದರೂ ಮಾಡಬೇಕು ನಾರದರೇ” ಎಂದು ಸತ್ಯಭಾಮೆಯು ತಲೆಯ ಮೇಲೆ ಕೈಹೊತ್ತು ಕುಳಿತುಬಿಟ್ಟಳು.

ಆಗ ನಾರದರು, “ರುಕ್ಮಿಣಿಯನ್ನೊಮ್ಮೆ ಕೇಳಿ ನೋಡು ತಾಯೆ, ಅವಳ ಆಭರಣಗಳನ್ನೂ ತೂಗಿಸು” ಎಂದರು. ಸತ್ಯಭಾಮೆಗೆ ಅದು ಇಷ್ಟವಿಲ್ಲದಿದ್ದರೂ ಪತಿದೇವರನ್ನು ಕಳೆದುಕೊಳ್ಳಬೇಕಲ್ಲಾ ಎಂಬ ಸಂಕಟದಿಂದ ಅಸಹಾಯಕಳಾಗಿ “ನೀನೂ ಬಾ ರುಕ್ಮಿಣಿ, ಸಹಾಯ ಮಾಡು” ಎಂದಳು.

ಆಗ ರುಕ್ಮಿಣಿಯು “ಹದಿನಾಲ್ಕು ಲೋಕಗಳ ಸಂಪತ್ತನ್ನೆಲ್ಲ ತಂದು ಸುರಿದರೂ ಈ ಸ್ವಾಮಿಗೆ ಸಮನಾಗಿ ಅದು ತೂಗಬಲ್ಲದೇ? ಅಕ್ಕ, ಜಗತ್ತಿಗೆಲ್ಲ ಸೇರಿದ ಅವನನ್ನು ನಾನೇ ಕಟ್ಟಿ ಹಾಕಿಕೊಳ್ಳುತ್ತೇನೆಂದರೆ, ಅದು ನಡೆಯುವುದುಂಟೆ? ಅಕ್ಕ, ಅದೆಲ್ಲ ಈಗ ಬೇಡ” ಎನ್ನುತ್ತ ರುಕ್ಮಿಣಿಯು ಒಂದು ತುಳಸಿ ದಳದ ಮೇಲೆ ‘ಶ್ರೀಕೃಷ್ಣ’ ಎಂದು ಬರೆದು, ಸತ್ಯಭಾಮೆಯ ತಟ್ಟೆಯೊಳಕ್ಕೆ ಹಾಕುತ್ತ “ದೇವ ದೇವೋತ್ತಮನೆ, ದೇವತಾ ಸಾರ್ವಭೌಮ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನೇ ನನಗೆ ನಿನ್ನ ಮೇಲೆ ಭಕ್ತಿ ನನ್ನ ಹೃದಯದಲ್ಲೇನಾದರೂ ಇದ್ದರೆ, ನೀನು ಸಮನಾಗಿ ತೂಗಿಬಿಡು ಸ್ವಾಮಿ” ಎಂದು ನಮಸ್ಕರಿಸಿದಳು.

ಒಂದು ಕೃಷ್ಣನಾಮವೇ ಸಾಕಾಗಿ, ತಕ್ಕಡಿ ಸಮನಾಗಿ ತೂಗಿಬಿಟ್ಟಿತು, ಆಗಲೇ ಸತ್ಯಭಾಮೆಯ ಗರ್ವವು ಇಳಿಯಿತು, ಭಗವಂತನನ್ನು ಸಿರಿ ಸಂಪತ್ತಿನಿಂದ ತೂಗಲು ಎಂದು ಸಾಧ್ಯವಿಲ್ಲ ನಿಜ ಭಕ್ತಿಗೆ ಅವನು ಒಲಿಯುತ್ತಾನೆ ಎಂಬ ನಿಜ ವಾಸ್ತವ ಸತ್ಯಭಾಮೆಗೆ ಅಂದು ಅರ್ಥವಾಯಿತು.

ಕೃಪೆ: ವಂದಗದ್ದೆ ಗಣೇಶ (ಸಾಗರ) ಪೌರಾಣಿಕ ಕಥೆಗಳು

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!