Krishna weighed on a basil leaf

ಹರಿತಲೇಖನಿ ದಿನಕ್ಕೊಂದು ಕಥೆ; ತುಳಸಿ ದಳವೊಂದಕ್ಕೆ ತೂಗಿದ ಕೃಷ್ಣ..!

Harithalekhani: ಒಮ್ಮೆ ಸತ್ಯಭಾಮೆಯು ನಾರದರನ್ನು ಕುರಿತು “ಮಹರ್ಷಿಗಳೇ, ಜನ್ಮಜನ್ಮಾಂತರಕ್ಕೂ ಶ್ರೀಕೃಷ್ಣನೇ ನನಗೆ ಗಂಡನಾಗಬೇಕೆಂಬ ಹಂಬಲವಿದೆ; ಅದು ಈಡೇರಲು ಏನಾದರೂ ದಾರಿಯಿದೆಯೆ” ಎಂದು ಕೇಳಿದಳು.

ಅದಕ್ಕೆ ನಾರದರು, “ಓಹೋ, ಇದೆ ತಾಯೆ, ನೀನು ಪುಣ್ಯಕವೆಂಬ ವ್ರತವನ್ನಾಚರಿಸಿ, ಅದರ ಮುಕ್ತಾಯದಲ್ಲಿ ಶ್ರೀಕೃಷ್ಣನನ್ನು ಯಾರಾದರೂ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟುಬಿಡು. ಆಗ ನಿನ್ನ ಹಂಬಲಕ್ಕೆ ಬೆಂಬಲ ದೊರಕುತ್ತದೆ” ಎಂದರು.

ಸರಿ ಆ, ವ್ರತ ನಡೆದೆ ಹೋಯಿತು. ಆ ಹೊತ್ತಿಗೆ ಸರಿಯಾಗಿ ಅಲ್ಲಿಗೆ ಬಂದ ನಾರದರಿಗೆ ಪತಿದೇವರನ್ನು ದಾನಮಾಡಿದ್ದೂ ಆಗಿ ಹೋಯಿತು.

ಆಗ ಶ್ರೀಕೃಷ್ಣನು ನಾರದರನ್ನು ಕುರಿತು, “ಈಗ ನಾನು ಏನು ಮಾಡಬೇಕು ಸ್ವಾಮಿ” ಎಂದು ಕೇಳಿದನು. ಅದಕ್ಕೆ ನಾರದರು, “ಏನು ಮಾಡಬೇಕು ಎನ್ನುತ್ತೀಯಲ್ಲಪ್ಪಾ, ಇನ್ನು ಅರಮನೆಯಲ್ಲಿ ಇರು ವಂತಿಲ್ಲ, ಹಿಡಿದುಕೋ ಈ ತಂಬೂರಿ, ನಡೆ ಹಾಡುತ್ತ ನನ್ನ ಹಿಂದೆ, ನೀನಿನ್ನು ನನ್ನ ಅನುಚರನಲ್ಲವೆ”? ಎಂದರು.

ಆಗ ಸತ್ಯಭಾಮೆಗೆ ಸಿಡಿಲೆರಗಿದಂತಾಯಿತು, ದಿಕ್ಕು ತೋರದಾಯಿತು.

“ಇದೆಂತಹ ಕೆಲಸ ಮಾಡಿಬಿಟ್ಟೆ” ಎಂದು ತನ್ನ ತಪ್ಪಿನ ಅರಿವಾಯಿತು. “ಈಗ ನೀವೇ ಏನಾದರೂ ಮಾರ್ಗವನ್ನು ತೋರಿಸಿ ನಾರದರೇ, ಸ್ವಾಮಿಯನ್ನು ಕಳೆದುಕೊಳ್ಳಲುಂಟೇ” ಎಂದು ಅಂಗಲಾಚಿದಳು.

ಆಗ ನಾರದರು “ನಾನೇನೋ ಕೃಷ್ಣನನ್ನು ನಿನಗೇ ಮರಳಿಸಿಬಿಡುತ್ತೇನೆ. ಆದರೆ ದಾನವಾಗಿ ಕೊಟ್ಟುದನ್ನು ಮರಳಿ ಪಡೆದರೆ ‘ದತ್ತಾಪಹಾರ’ ಎಂಬ ದೋಷ ನಿನಗೆ ಅಂಟಿಕೊಳ್ಳುತ್ತದೆಯಲ್ಲ, ಅದಕ್ಕೇನು ಮಾಡುತ್ತೀಯೆ ತಾಯೆ” ಎಂದರು.

“ಅದಕ್ಕೂ ನೀವೇ ಏನಾದರೂ ಪರಿಹಾರ ಸೂಚಿಸಬೇಕು ನಾರದರೆ” ಎಂದು ಸತ್ಯಭಾಮೆ ಅವರಿಗೆ ಶರಣಾದಳು.

ಆಗ ನಾರದರು “ತಾಯೆ, ತುಲಾಭಾರದ ಮೂಲಕ ಕೃಷ್ಣನ ತೂಕಕ್ಕೆ ಸಮನಾಗುವ ನಿನ್ನ ಆಭರಣಗಳನ್ನು ತೂಗಿಸಿ ನನಗೆ ದಾನಮಾಡು, ನಾನು ನಿನಗೆ ಕೃಷ್ಣನನ್ನು ಹಿಂದಕ್ಕೆ ಕೊಡುತ್ತೇನೆ. ಆಗ ದೋಷವೆಲ್ಲ ಪರಿಹಾರವಾಗುತ್ತದೆ” ಎಂದು ಸಲಹೆ ಕೊಟ್ಟರು.

ಸತ್ಯಭಾಮೆಗೆ ಹೋದಜೀವ ಬಂದಂತಾಯಿತು. ಲಗುಬಗೆಯಿಂದ ಕೃಷ್ಣನನ್ನು ತಕ್ಕಡಿಯ ಒಂದು ತಟ್ಟೆಯಲ್ಲಿ ಕೂರಿಸಿ, ತನ್ನ ಆಭರಣಗಳನ್ನೆಲ್ಲ ತಂದು ಇನ್ನೊಂದು ತಟ್ಟೆಗೆ ಅಡಕಿದಳು. ಅವಳ ಆಭರಣವೆಲ್ಲ ಬರಿದಾಯಿತೇ ಹೊರತು, ಕೃಷ್ಣನ ತೂಕಕ್ಕೆ ಅದು ಸಮನಾಗಲಿಲ್ಲ.

“ಈಗ ನೀವೇ ಏನಾದರೂ ಮಾಡಬೇಕು ನಾರದರೇ” ಎಂದು ಸತ್ಯಭಾಮೆಯು ತಲೆಯ ಮೇಲೆ ಕೈಹೊತ್ತು ಕುಳಿತುಬಿಟ್ಟಳು.

ಆಗ ನಾರದರು, “ರುಕ್ಮಿಣಿಯನ್ನೊಮ್ಮೆ ಕೇಳಿ ನೋಡು ತಾಯೆ, ಅವಳ ಆಭರಣಗಳನ್ನೂ ತೂಗಿಸು” ಎಂದರು. ಸತ್ಯಭಾಮೆಗೆ ಅದು ಇಷ್ಟವಿಲ್ಲದಿದ್ದರೂ ಪತಿದೇವರನ್ನು ಕಳೆದುಕೊಳ್ಳಬೇಕಲ್ಲಾ ಎಂಬ ಸಂಕಟದಿಂದ ಅಸಹಾಯಕಳಾಗಿ “ನೀನೂ ಬಾ ರುಕ್ಮಿಣಿ, ಸಹಾಯ ಮಾಡು” ಎಂದಳು.

ಆಗ ರುಕ್ಮಿಣಿಯು “ಹದಿನಾಲ್ಕು ಲೋಕಗಳ ಸಂಪತ್ತನ್ನೆಲ್ಲ ತಂದು ಸುರಿದರೂ ಈ ಸ್ವಾಮಿಗೆ ಸಮನಾಗಿ ಅದು ತೂಗಬಲ್ಲದೇ? ಅಕ್ಕ, ಜಗತ್ತಿಗೆಲ್ಲ ಸೇರಿದ ಅವನನ್ನು ನಾನೇ ಕಟ್ಟಿ ಹಾಕಿಕೊಳ್ಳುತ್ತೇನೆಂದರೆ, ಅದು ನಡೆಯುವುದುಂಟೆ? ಅಕ್ಕ, ಅದೆಲ್ಲ ಈಗ ಬೇಡ” ಎನ್ನುತ್ತ ರುಕ್ಮಿಣಿಯು ಒಂದು ತುಳಸಿ ದಳದ ಮೇಲೆ ‘ಶ್ರೀಕೃಷ್ಣ’ ಎಂದು ಬರೆದು, ಸತ್ಯಭಾಮೆಯ ತಟ್ಟೆಯೊಳಕ್ಕೆ ಹಾಕುತ್ತ “ದೇವ ದೇವೋತ್ತಮನೆ, ದೇವತಾ ಸಾರ್ವಭೌಮ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನೇ ನನಗೆ ನಿನ್ನ ಮೇಲೆ ಭಕ್ತಿ ನನ್ನ ಹೃದಯದಲ್ಲೇನಾದರೂ ಇದ್ದರೆ, ನೀನು ಸಮನಾಗಿ ತೂಗಿಬಿಡು ಸ್ವಾಮಿ” ಎಂದು ನಮಸ್ಕರಿಸಿದಳು.

ಒಂದು ಕೃಷ್ಣನಾಮವೇ ಸಾಕಾಗಿ, ತಕ್ಕಡಿ ಸಮನಾಗಿ ತೂಗಿಬಿಟ್ಟಿತು, ಆಗಲೇ ಸತ್ಯಭಾಮೆಯ ಗರ್ವವು ಇಳಿಯಿತು, ಭಗವಂತನನ್ನು ಸಿರಿ ಸಂಪತ್ತಿನಿಂದ ತೂಗಲು ಎಂದು ಸಾಧ್ಯವಿಲ್ಲ ನಿಜ ಭಕ್ತಿಗೆ ಅವನು ಒಲಿಯುತ್ತಾನೆ ಎಂಬ ನಿಜ ವಾಸ್ತವ ಸತ್ಯಭಾಮೆಗೆ ಅಂದು ಅರ್ಥವಾಯಿತು.

ಕೃಪೆ: ವಂದಗದ್ದೆ ಗಣೇಶ (ಸಾಗರ) ಪೌರಾಣಿಕ ಕಥೆಗಳು

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!