ಹರಿತಲೇಖನಿ ದಿನಕ್ಕೊಂದು ಕಥೆ; ತುಳಸಿ ದಳವೊಂದಕ್ಕೆ ತೂಗಿದ ಕೃಷ್ಣ..!

Krishna weighed on a basil leaf

Harithalekhani: ಒಮ್ಮೆ ಸತ್ಯಭಾಮೆಯು ನಾರದರನ್ನು ಕುರಿತು “ಮಹರ್ಷಿಗಳೇ, ಜನ್ಮಜನ್ಮಾಂತರಕ್ಕೂ ಶ್ರೀಕೃಷ್ಣನೇ ನನಗೆ ಗಂಡನಾಗಬೇಕೆಂಬ ಹಂಬಲವಿದೆ; ಅದು ಈಡೇರಲು ಏನಾದರೂ ದಾರಿಯಿದೆಯೆ” ಎಂದು ಕೇಳಿದಳು.

ಅದಕ್ಕೆ ನಾರದರು, “ಓಹೋ, ಇದೆ ತಾಯೆ, ನೀನು ಪುಣ್ಯಕವೆಂಬ ವ್ರತವನ್ನಾಚರಿಸಿ, ಅದರ ಮುಕ್ತಾಯದಲ್ಲಿ ಶ್ರೀಕೃಷ್ಣನನ್ನು ಯಾರಾದರೂ ಬ್ರಾಹ್ಮಣರಿಗೆ ದಾನವಾಗಿ ಕೊಟ್ಟುಬಿಡು. ಆಗ ನಿನ್ನ ಹಂಬಲಕ್ಕೆ ಬೆಂಬಲ ದೊರಕುತ್ತದೆ” ಎಂದರು.

ಸರಿ ಆ, ವ್ರತ ನಡೆದೆ ಹೋಯಿತು. ಆ ಹೊತ್ತಿಗೆ ಸರಿಯಾಗಿ ಅಲ್ಲಿಗೆ ಬಂದ ನಾರದರಿಗೆ ಪತಿದೇವರನ್ನು ದಾನಮಾಡಿದ್ದೂ ಆಗಿ ಹೋಯಿತು.

ಆಗ ಶ್ರೀಕೃಷ್ಣನು ನಾರದರನ್ನು ಕುರಿತು, “ಈಗ ನಾನು ಏನು ಮಾಡಬೇಕು ಸ್ವಾಮಿ” ಎಂದು ಕೇಳಿದನು. ಅದಕ್ಕೆ ನಾರದರು, “ಏನು ಮಾಡಬೇಕು ಎನ್ನುತ್ತೀಯಲ್ಲಪ್ಪಾ, ಇನ್ನು ಅರಮನೆಯಲ್ಲಿ ಇರು ವಂತಿಲ್ಲ, ಹಿಡಿದುಕೋ ಈ ತಂಬೂರಿ, ನಡೆ ಹಾಡುತ್ತ ನನ್ನ ಹಿಂದೆ, ನೀನಿನ್ನು ನನ್ನ ಅನುಚರನಲ್ಲವೆ”? ಎಂದರು.

ಆಗ ಸತ್ಯಭಾಮೆಗೆ ಸಿಡಿಲೆರಗಿದಂತಾಯಿತು, ದಿಕ್ಕು ತೋರದಾಯಿತು.

“ಇದೆಂತಹ ಕೆಲಸ ಮಾಡಿಬಿಟ್ಟೆ” ಎಂದು ತನ್ನ ತಪ್ಪಿನ ಅರಿವಾಯಿತು. “ಈಗ ನೀವೇ ಏನಾದರೂ ಮಾರ್ಗವನ್ನು ತೋರಿಸಿ ನಾರದರೇ, ಸ್ವಾಮಿಯನ್ನು ಕಳೆದುಕೊಳ್ಳಲುಂಟೇ” ಎಂದು ಅಂಗಲಾಚಿದಳು.

ಆಗ ನಾರದರು “ನಾನೇನೋ ಕೃಷ್ಣನನ್ನು ನಿನಗೇ ಮರಳಿಸಿಬಿಡುತ್ತೇನೆ. ಆದರೆ ದಾನವಾಗಿ ಕೊಟ್ಟುದನ್ನು ಮರಳಿ ಪಡೆದರೆ ‘ದತ್ತಾಪಹಾರ’ ಎಂಬ ದೋಷ ನಿನಗೆ ಅಂಟಿಕೊಳ್ಳುತ್ತದೆಯಲ್ಲ, ಅದಕ್ಕೇನು ಮಾಡುತ್ತೀಯೆ ತಾಯೆ” ಎಂದರು.

“ಅದಕ್ಕೂ ನೀವೇ ಏನಾದರೂ ಪರಿಹಾರ ಸೂಚಿಸಬೇಕು ನಾರದರೆ” ಎಂದು ಸತ್ಯಭಾಮೆ ಅವರಿಗೆ ಶರಣಾದಳು.

ಆಗ ನಾರದರು “ತಾಯೆ, ತುಲಾಭಾರದ ಮೂಲಕ ಕೃಷ್ಣನ ತೂಕಕ್ಕೆ ಸಮನಾಗುವ ನಿನ್ನ ಆಭರಣಗಳನ್ನು ತೂಗಿಸಿ ನನಗೆ ದಾನಮಾಡು, ನಾನು ನಿನಗೆ ಕೃಷ್ಣನನ್ನು ಹಿಂದಕ್ಕೆ ಕೊಡುತ್ತೇನೆ. ಆಗ ದೋಷವೆಲ್ಲ ಪರಿಹಾರವಾಗುತ್ತದೆ” ಎಂದು ಸಲಹೆ ಕೊಟ್ಟರು.

ಸತ್ಯಭಾಮೆಗೆ ಹೋದಜೀವ ಬಂದಂತಾಯಿತು. ಲಗುಬಗೆಯಿಂದ ಕೃಷ್ಣನನ್ನು ತಕ್ಕಡಿಯ ಒಂದು ತಟ್ಟೆಯಲ್ಲಿ ಕೂರಿಸಿ, ತನ್ನ ಆಭರಣಗಳನ್ನೆಲ್ಲ ತಂದು ಇನ್ನೊಂದು ತಟ್ಟೆಗೆ ಅಡಕಿದಳು. ಅವಳ ಆಭರಣವೆಲ್ಲ ಬರಿದಾಯಿತೇ ಹೊರತು, ಕೃಷ್ಣನ ತೂಕಕ್ಕೆ ಅದು ಸಮನಾಗಲಿಲ್ಲ.

“ಈಗ ನೀವೇ ಏನಾದರೂ ಮಾಡಬೇಕು ನಾರದರೇ” ಎಂದು ಸತ್ಯಭಾಮೆಯು ತಲೆಯ ಮೇಲೆ ಕೈಹೊತ್ತು ಕುಳಿತುಬಿಟ್ಟಳು.

ಆಗ ನಾರದರು, “ರುಕ್ಮಿಣಿಯನ್ನೊಮ್ಮೆ ಕೇಳಿ ನೋಡು ತಾಯೆ, ಅವಳ ಆಭರಣಗಳನ್ನೂ ತೂಗಿಸು” ಎಂದರು. ಸತ್ಯಭಾಮೆಗೆ ಅದು ಇಷ್ಟವಿಲ್ಲದಿದ್ದರೂ ಪತಿದೇವರನ್ನು ಕಳೆದುಕೊಳ್ಳಬೇಕಲ್ಲಾ ಎಂಬ ಸಂಕಟದಿಂದ ಅಸಹಾಯಕಳಾಗಿ “ನೀನೂ ಬಾ ರುಕ್ಮಿಣಿ, ಸಹಾಯ ಮಾಡು” ಎಂದಳು.

ಆಗ ರುಕ್ಮಿಣಿಯು “ಹದಿನಾಲ್ಕು ಲೋಕಗಳ ಸಂಪತ್ತನ್ನೆಲ್ಲ ತಂದು ಸುರಿದರೂ ಈ ಸ್ವಾಮಿಗೆ ಸಮನಾಗಿ ಅದು ತೂಗಬಲ್ಲದೇ? ಅಕ್ಕ, ಜಗತ್ತಿಗೆಲ್ಲ ಸೇರಿದ ಅವನನ್ನು ನಾನೇ ಕಟ್ಟಿ ಹಾಕಿಕೊಳ್ಳುತ್ತೇನೆಂದರೆ, ಅದು ನಡೆಯುವುದುಂಟೆ? ಅಕ್ಕ, ಅದೆಲ್ಲ ಈಗ ಬೇಡ” ಎನ್ನುತ್ತ ರುಕ್ಮಿಣಿಯು ಒಂದು ತುಳಸಿ ದಳದ ಮೇಲೆ ‘ಶ್ರೀಕೃಷ್ಣ’ ಎಂದು ಬರೆದು, ಸತ್ಯಭಾಮೆಯ ತಟ್ಟೆಯೊಳಕ್ಕೆ ಹಾಕುತ್ತ “ದೇವ ದೇವೋತ್ತಮನೆ, ದೇವತಾ ಸಾರ್ವಭೌಮ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕನೇ ನನಗೆ ನಿನ್ನ ಮೇಲೆ ಭಕ್ತಿ ನನ್ನ ಹೃದಯದಲ್ಲೇನಾದರೂ ಇದ್ದರೆ, ನೀನು ಸಮನಾಗಿ ತೂಗಿಬಿಡು ಸ್ವಾಮಿ” ಎಂದು ನಮಸ್ಕರಿಸಿದಳು.

ಒಂದು ಕೃಷ್ಣನಾಮವೇ ಸಾಕಾಗಿ, ತಕ್ಕಡಿ ಸಮನಾಗಿ ತೂಗಿಬಿಟ್ಟಿತು, ಆಗಲೇ ಸತ್ಯಭಾಮೆಯ ಗರ್ವವು ಇಳಿಯಿತು, ಭಗವಂತನನ್ನು ಸಿರಿ ಸಂಪತ್ತಿನಿಂದ ತೂಗಲು ಎಂದು ಸಾಧ್ಯವಿಲ್ಲ ನಿಜ ಭಕ್ತಿಗೆ ಅವನು ಒಲಿಯುತ್ತಾನೆ ಎಂಬ ನಿಜ ವಾಸ್ತವ ಸತ್ಯಭಾಮೆಗೆ ಅಂದು ಅರ್ಥವಾಯಿತು.

ಕೃಪೆ: ವಂದಗದ್ದೆ ಗಣೇಶ (ಸಾಗರ) ಪೌರಾಣಿಕ ಕಥೆಗಳು

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]