ಬಹು ಪತಿತ್ವ ಪದ್ದತಿ: ಒಬ್ಬಳನ್ನೇ ವರಿಸಿದ ಇಬ್ಬರು ಸೋದರರು!

Polygamy: Two brothers marrying the same woman!

ಶಿಮ್ಲಾ: ಬುಡಕಟ್ಟು ಸಮುದಾಯಗಳಲ್ಲೊಂದಾದ ‘ಹಟ್ಟಿ ಸಮುದಾಯ’ ಶತಮಾನಗಳಷ್ಟು ಹಳೆಯ ಬಹು ಪತಿತ್ವ (Polygamy) ಪದ್ಧತಿಯನ್ನು ಈಗಲೂ ಮುಂದುವರಿಸಿಕೊಂಡು ಬರುತ್ತಿದ್ದ ಬರುತ್ತಿದೆ.

ಹಟ್ಟಿ ಬುಡಕಟ್ಟು ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಹಿಮಾಚಲ ಪ್ರದೇಶದ ರಾಜ್ಯದ ಶಿಕ್ಷೆ ಗ್ರಾಮದಲ್ಲಿ ಸೋದರರಿಬ್ಬರು ಒಬ್ಬಳೇ ಯುವತಿಯನ್ನು ವರಿಸಿದ್ದಾರೆ.

ಈ ವರೆಗೂ ಖಾಸಗಿಯಾಗಿಯೇ ನಡೆಯುತ್ತಿದ್ದ ಬಹು ಪತಿತ್ವ ಪದ್ಧತಿಯ ವಿವಾಹಗಳು ಈ ಬಾರಿ ಬಹಿರಂಗವಾಗಿ, ಭಾರೀ ಅದ್ದೂರಿಯಾಗಿ ಬಲು ಸಾಂಪ್ರದಾಯಿಕವಾಗಿ ಒಂದೇ ಮುಹೂರ್ತದಲ್ಲಿ ನಡೆದಿದೆ.

ಶಿಲೈ ಗ್ರಾಮದ ಸೋದರರಾದ ಪ್ರದೀಪ್ ಮತ್ತು ಕಪಿಲ್ ಹಾಗೂ ಸುನೀತಾರ ವಿಶಿಷ್ಟ ವಿವಾಹಕ್ಕೆ ಸಾವಿರಾರು ಬಂಧು ಮಿತ್ರರು, ಗ್ರಾಮಸ್ಥರು ಸಾಕ್ಷಿಯಾಗಿದ್ದಾರೆ. ಪ್ರದೀಪ್ ಸರಕಾರಿ ನೌಕರಿಯಲ್ಲಿದ್ದರೆ, ಕಿರಿಯ ಸೋದರ ಕಪಿಲ್ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ.

ಒಬ್ಬಳೇ ಪತ್ನಿಯನ್ನು ಹಲವು ಸೋದರರು ವಿವಾಹವಾಗುವ ಪದ್ಧತಿ ಮೊದಲಿನಿಂದಲೂ ನಮ್ಮ ಪಂಗಡದಲ್ಲಿದೆ. ಈ ವಿವಾಹದ ನಿರ್ಧಾರವನ್ನು ನಾವು ಮೂವರು ಒಟ್ಟಿಗೆ ಸೇರಿ ತೆಗೆದುಕೊಂಡಿದ್ದೇವೆ. ನಮ್ಮ ಸಮುದಾಯದ ಪದ್ಧತಿ ಮುಂದುವರಿಸಿಕೊಂಡು ಹೋಗುವ ವಿಚಾರದಲ್ಲಿ ನಮಗೆ ಹೆಮ್ಮೆಯಿದೆ. ಅದಕ್ಕೆಂದೇ ಬಹಿರಂಗವಾಗಿಯೇ ವಿವಾಹವಾಗಿದ್ದೇವೆ ಎಂದು ವರ ಪ್ರದೀಪ್ ಹೇಳಿದ್ದಾರೆ.

‘ನಾನು ವಿದೇಶದಲ್ಲಿ ಇರಬಹುದು. ಆದರೆ, ಮೂವರು ಒಂದಾಗಿ ಸಂಸಾರ ತೂಗಿಸಿಕೊಂಡು ಹೋಗುತ್ತೇವೆ. ಸಂಪ್ರದಾಯ ಉಳಿಸುವ ಪಯಣದಲ್ಲಿ ಪರಸ್ಪರ ಸಹಕಾರಿಯಾಗಿರುತ್ತೇವೆ’ ಎಂದು ಕಪಿಲ್ ಹೇಳಿದ್ದಾರೆ.

ನನಗೂ ನಮ್ಮ ಪಂಗಡ ಸಂಪ್ರದಾಯದ ಬಗ್ಗೆ ಹೆಮ್ಮೆ ಇದೆ. ಇಬ್ಬರು ಪತಿಯನ್ನು ವರಿಸುವುದು ಸಂಪೂರ್ಣ ನನ್ನದೇ ತೀರ್ಮಾನ. ಯಾರ ಒತ್ತಾಯವೂ ಇಲ್ಲ ಎಂದು ವಧು ಸುನೀತಾ ಹೇಳಿದ್ದಾರೆ.

ಜು.12ರಂದು ಆರಂಭವಾದ ವಿವಾಹ ಸಂಪ್ರದಾಯ ಬದ್ದವಾಗಿ 3 ದಿನ ಕಾಲ ನಡೆದಿದೆ. ಸ್ಥಳೀಯ ಜಾನಪದ ಗೀತೆ ತಂಡಗಳು ಮತ್ತು ನೃತ್ಯ ತಂಡಗಳು ಮದುವೆ ಸಮಾರಂಭಕ್ಕೆ ಮೆರುಗು ತಂದವು. ವಿವಾಹದ ವಿಡಿಯೊ ವೈರಲ್ ಆಗಿವೆ.”

ಮೊದಲಯದೇನು ಅಲ್ಲ..!

ಇದೇನು ಮೊದಲ ವಿವಾಹವಲ್ಲ. ಇಂಥ ಮದುವೆಗಳು ನಮ್ಮ ಹಳ್ಳಿಯಲ್ಲಿ ಸದ್ದಿಲ್ಲದೇ ನಡೆಯುತ್ತವೆ.

ಇಬ್ಬರು-ಮೂವರು ಸೋದರರು ಒಬ್ಬಳನ್ನೇ ವರಿಸಿದ್ದಾರೆ. ಪೂರ್ವಜರ ಭೂಮಿ ವಿಭಜನೆಯಾಗದಂತೆ ತಡೆಯಲು, ಹೆಣ್ಣು ವಿಧವೆಯಾಗುವುದನ್ನು ತಪ್ಪಿಸುವುದಕ್ಕೆ ಪೂರ್ವಜರು ಕಂಡುಕೊಂಡ ಮಾರ್ಗವಿದು ಎಂದು ಶಿಲೈ ಗ್ರಾಮದ ನಿವಾಸಿ ಬಿಶನ್ ತೋಮ‌ರ್ ಹೇಳಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]