ಅಮೂಲ್ಯ ವಜ್ರಾಭರಣ ಕದ್ದ ಆರೋಪದಲ್ಲಿ ಖ್ಯಾತ ನಟ ಮೋಹನ್ ಲಾಲ್..!: ವಿಡಿಯೋದಲ್ಲಿ ಸಿಕ್ಕಿಬಿದ್ದಿದ್ದಾರೆ ನೋಡಿ

Famous actor Mohanlal accused of stealing diamond jewelry..!

ತಿರುವನಂತಪುರಂ: ಭಾರತೀಯ ಚಿತ್ರರಂಗದ ಅತ್ಯುತ್ತಮ ನಟರಲ್ಲಿ ಒಬ್ಬರು ಖ್ಯಾತ ನಟ ಮೋಹನ್ ಲಾಲ್ (Actor Mohanlal). ಆದರೆ ಅವರು ಕಳ್ಳತನದ ಆರೋಪಕ್ಕೆ ಗುರಿಯಾಗಿದ್ದಾರೆ.

ಮೋಹನ್ ಲಾಲ್ ಮಾಲಿವುಡ್ ಸಿನಿಮಾ ರಂಗ ಮಾತ್ರವಲ್ಲದೇ ಇಡೀ ದೇಶಕ್ಕೆ ಒಂದು ಹೆಮ್ಮೆಯ ನಟ ಎಂದರೆ ತಪ್ಪಾಗಲ್ಲ. ಅವರಿಗೆ ಯಾವುದೇ ಪಾತ್ರ ಕೊಟ್ಟರೂ ಸರಿ ಅದನ್ನ ಅದ್ಭುತವಾಗಿ ನಿಭಾಯಿಸುತ್ತಾರೆ.

ಆ ಪಾತ್ರಕ್ಕೊಂದು ಜೀವ ತುಂಬುವುದರಲ್ಲಿ ಮೋಹನ್ ಲಾಲ್ ಮೊದಲಿಗರು. ಆದರೆ ಇದೀಗ ಆಭರಣದ ಈ ಜಾಹೀರಾತಿನಲ್ಲಿ ಬೆಲೆಬಾಳುವ ವಜ್ರಾಭರಣವನ್ನು ಕದ್ದಿದ್ದಾರೆ.

ನಿಜ ಅಂದ್ಕೊಂಡ್ರಾ..? ಆತಂಕಕ್ಕೆ ಒಳಗಾಗಬೇಡಿ ಅದು ಇತ್ತೀಚೆಗೆ ಬಿಡುಗಡೆಯಾದ ಆಭರಣದ ಜಾಹೀರಾತಿನಲ್ಲಿ (Jewelry Advertisement) ಮೋಹನ್ ಲಾಲ್ ಅವರ ಅಭಿನಯವಾಗಿದೆ.

ಈ ಜಾಹೀರಾತನ್ನು ಜನಪ್ರಿಯ ಜಾಹೀರಾತು ನಿರ್ಮಾಪಕ ಪ್ರಕಾಶ್ ವರ್ಮಾ ನಿರ್ದೇಶಿಸಿದ್ದು, ಇದರಲ್ಲಿ ಭಾವಾಭಿವ್ಯಕ್ತಿಯ ಮೂಲಕ ಅವರು ಎಲ್ಲವನ್ನೂ ಹೇಳಿದ್ದಾರೆ ಎನ್ನಬಹುದು.

ಸುಮಾರು 2 ನಿಮಿಷಗಳ ಈ ಜಾಹೀರಾತಿನಲ್ಲಿ ಮೋಹನ್ ಲಾಲ್ ಕಾಣಿಸಿಕೊಂಡಿದ್ದು, ಬಹಳ ಅದ್ಭುತವಾಗಿ ಮೂಡಿ ಬಂದಿದೆ.

ಈ ಜಾಹೀರಾತಿನಲ್ಲಿ ಮೋಹನ್ ಲಾಲ್ ಪ್ರಕಾಶ್ ವರ್ಮಾ ಅವರ ಜೊತೆ ಶೂಟಿಂಗ್ ಮಾಡಲು ಬರುತ್ತಾರೆ. ಅಲ್ಲಿ ಅವರಿಗೆ ಒಂದು ಸುಂದರವಾದ ನೆಕ್ಸಸ್ ಸೆಟ್ ಕಾಣಿಸುತ್ತದೆ. ಅದನ್ನ ಯಾರಿಗೂ ತಿಳಿಯದಂತೆ ಎಗರಿಸಿಕೊಂಡು ಹೋಗಿದ್ದಾರೆ.

ಕ್ಯಾರಾವಾನ್ಗೆ ಹೋಗಿ ಆ ಆಭರಣಗಳನ್ನು ಧರಿಸಿ ಅದ್ಭುವಾಗಿ ಭಾವನೆಗಳ ಮೂಲಕ ಆಭರಣಗಳ ಮಹತ್ವವನ್ನ ವಿವರಿಸಿದ್ದು, ಅದನ್ನ ಧರಿಸಿ ಮಹಿಳೆಯರು ಯಾವ ರೀತಿ ಭಾವನೆಗಳನ್ನ ವ್ಯಕ್ತಪಡಿಸುತ್ತಾರೆ ಎಂಬುದನ್ನ ಸಹ ತೋರಿಸಿದ್ದಾರೆ.

ಸೊಗಸಾದ ನೃತ್ಯವನ್ನು ಸಹ ಪ್ರದರ್ಶಿಸುತ್ತಾರೆ. ಮೋಹನ್ ಲಾಲ್ ತಮ್ಮ ಮೌನ ಅಭಿನಯದಿಂದ ಪರದೆಯ ಮೇಲೆ ಮಿಂಚನ್ನ ಹರಿಸಿದ್ದಾರೆ. ಈ ಮೂಲಕ ಆಭರಣ ಜಾಹೀರಾತಿಗೆ ಹೊಸ ಆಯಾಮವನ್ನ ಕೊಟ್ಟಿದ್ದಾರೆ.

ಸಾಮಾನ್ಯವಾಗಿ ಆಭರಣಗಳ ಜಾಹೀರಾತಿನಲ್ಲಿ ಮಹಿಳೆಯರನ್ನ ತೋರಿಸಲಾಗುತ್ತದೆ. ಅವರಿಗೆ ಆಭರಣಗಳನ್ನ ಧರಿಸಿದರೇ ಎಷ್ಟು ಸಂತೋಷವಾಗುತ್ತದೆ ಎಂಬುದನ್ನ ಚಿತ್ರಿಸಲಾಗುತ್ತದೆ. ಆದರೆ ಈ ಬಾರಿ ಬಹಳ ವಿಭಿನ್ನವಾಗಿ ಮಾಡಿದ್ದು ಮೋಹನ್ ಲಾಲ್ ಹಾಗೂ ಪ್ರಕಾಶ್ ವರ್ಮಾ ಈ ಪ್ರಯತ್ನಕ್ಕೆ ಅನೇಕ ಜನರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಜಾಹೀರಾತು ಈಗ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು ಮೋಹನ್ ಲಾಲ್ ಅವರ ಪಾತ್ರಗಳನ್ನು ಸಲೀಸಾಗಿ ಬದಲಾಯಿಸುವ ಸಾಮರ್ಥ್ಯ ನೋಡಿ ಅನೇಕ ಜನರು ಪ್ರಭಾವಿತರಾಗಿದ್ದಾರೆ.

ಇನ್ನು ಅಭಿಮಾನಿಗಳು ಗ್ರೇಟೆಸ್ಟ್ ಆಫ್ ಆಲ್ ಟೈಮ್ ಎನ್ನುವ ಹ್ಯಾಷ್ ಟ್ಯಾಗ್ ಸಹ ಬಳಕೆ ಮಾಡುತ್ತಿದ್ದು, ನಟನನ್ನ ಹಾಡಿ ಹೊಗಳುತ್ತಿದ್ದಾರೆ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]