ಬಿಜೆಪಿಯವರು ಶುದ್ಧರೇ..? ಅವರ ಮೇಲೆ ಮಾತ್ರ ಇಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ?: ಡಿಸಿಎಂ ಡಿ.ಕೆ. ಶಿವಕುಮಾರ್

Are BJP members pure? Why is no ED case registered against them?: DCM D.K. Shivakumar

ಕನಕಪುರ: “ಇ.ಡಿ. ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar ಅವರು ತಿಳಿಸಿದರು.

ಕನಕಪುರದ ಕೋಡಿಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಮೂಡಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಡಿಗೆ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಕೇಳಿದಾಗ, “ನನ್ನ ಪ್ರಕರಣವನ್ನೇ ತೆಗೆದುಕೊಳ್ಳಿ. ನನ್ನ ಮೇಲೆ ಕೇಸ್ ಹಾಕಿ ತಿಹಾರ್ ಜೈಲಿಗೆ ಕಳುಹಿಸಿದರು. ನಂತರ ಆ ಕೇಸ್ ರದ್ದಾಯಿತು. ರಾಜಕೀಯ ಒತ್ತಡಕ್ಕೆ ಸಿಲುಕುವ ಬಗ್ಗೆ ಇಡಿ ಪರಿಶೀಲನೆ ನಡೆಸಬೇಕು. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ಬಳಿಕ ಮೇಲ್ಮನವಿ ಸಲ್ಲಿಸುವ ಪ್ರಶ್ನೆ ಇರಲಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಈ ರೀತಿ ಹೇಳಿರಬೇಕು” ಎಂದರು.

ಕೇಂದ್ರ ಸರ್ಕಾರ ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ ಎಂದು ಕೇಳಿದಾಗ, “ಈ ಕಾರಣಕ್ಕೆ ಈ ರೀತಿ ಮೇಲ್ಮನವಿ ಸಲ್ಲಿಸಲಾಗುತ್ತಿದೆ. ಬಿಜೆಪಿ ನಾಯಕರ ಮೇಲೆ ಮಾತ್ರ ಇಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ? ಕೇವಲ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಬರ್ಟ್ ವಾದ್ರಾ, ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಯಾಕೆ ಕೇಸ್ ಹಾಕಲಾಗುತ್ತಿದೆ. ಬಿಜೆಪಿಗೆ ಹೋದವರೆಲ್ಲಾ ಶುದ್ಧರೇ? ಇದೇ ಅಲ್ಲವೇ ಬಿಜೆಪಿ ವಾಷಿಂಗ್ ಮಷಿನ್” ಎಂದು ತಿಳಿಸಿದರು.

ಟನಲ್ ಕಾರಿಡಾರ್ ಅಗತ್ಯವಿದೆಯೇ ಎಂಬ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಕೇಳಿದಾಗ, “ಪಾಪ ಸಣ್ಣ ಹುಡುಗ, ಅವರ ಪಕ್ಷದಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರಲ್ಲಾ ಅವರ ಮೂಲಕ ಸದನದಲ್ಲಿ ಚರ್ಚೆ ಮಾಡಿಸಲಿ” ಎಂದು ತಿರುಗೇಟು ನೀಡಿದರು.

ನಾನು ಬಂದಮೇಲೆ ಯಾಕೆ ಹೋರಾಟ?

ಬಿಡದಿ ಟೌನ್ ಶಿಪ್ ಗೆ ಕೆಲವು ಪಂಚಾಯ್ತಿ ರೈತರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಈ ಯೋಜನೆ ನಾನು ಮಾಡಿದ್ದಲ್ಲ. ಕುಮಾರಸ್ವಾಮಿ ಅವರು ಮಾಡಿರುವುದು. ಅದನ್ನು ನಾನು ಡಿನೋಟಿಫಿಕೇಷನ್ ಮಾಡಲು ಬರಲ್ಲ. ರೈತರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡುತ್ತೇವೆ. ಅವತ್ತಿನಿಂದ ಹೋರಾಟ ಮಾಡದೇ, ನಾನು ಬಂದಾಗ ಮಾತ್ರ ಯಾಕೆ ಹೋರಾಟ ಮಾಡಬೇಕು? 9 ಸಾವಿರ ಎಕರೆ ಪೈಕಿ 1 ಸಾವಿರಕ್ಕೂ ಹೆಚ್ಚು ಜಮೀನು ಈಗಾಗಲೇ ಕೆಐಎಡಿಬಿಗೆ ನೀಡಲಾಗಿದೆ. ಅದಕ್ಕೆ ಪರಿಹಾರವನ್ನು ಪಡೆಯಲಾಗಿದೆ. ಆಗ ಹೋರಾಟ ಮಾಡದೆ ಈಗ ಯಾಕೆ? ಇದರಲ್ಲೂ 75% ಜನ ತಮಗೆ ಏನು ಪರಿಹಾರ ಬೇಕು ಎಂದು ಕೇಳಿದ್ದಾರೆ” ಎಂದು ತಿಳಿಸಿದರು.

ರೈತರನ್ನು ಕರೆದು ಚರ್ಚೆ ಮಾಡುತ್ತಿಲ್ಲ ಎಂದು ಕೇಳಿದಾಗ, “ರೈತರ ಜೊತೆ ಚರ್ಚೆ ಮಾಡುತ್ತೇನೆ. ಅವರನ್ನು ಕರೆಯುವುದಿಲ್ಲ. ನಾನೇ ಅವರ ಬಳಿ ಹೋಗಿ ಚರ್ಚೆ ಮಾಡುವೆ. ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಕೂಡ ನಮ್ಮ ರೈತರೆ” ಎಂದು ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಸಮಸ್ಯೆ ಏನು ಇಲ್ಲ. ನಮ್ಮ ಕಾರ್ಯಕರ್ತರು, ಸ್ಥಳೀಯ ನಾಯಕರು ಇಲ್ಲಿ ಜನರ ಸಂಪರ್ಕ ಸಾಧಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇಂದು ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರ ನೀಡುತ್ತೇವೆ. ಕೆಲವು ಅರ್ಜಿಗಳು ಪಿಂಚಣಿ, ಇ-ಖಾತಾ, ಜಿಎಸ್ ಟಿ ವಿಚಾರವಾಗಿ ಬಂದಿವೆ” ಎಂದು ತಿಳಿಸಿದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]