2028ಕ್ಕೆ ಅವರೇ ಶಾಸಕರಾದ್ರೆ ನನ್ನ ಜೀವನದಲ್ಲಿ ಭದ್ರಾವತಿಗೆ ಕಾಲಿಡೋದಿಲ್ಲ: ನಿಖಿಲ್ ಕುಮಾರಸ್ವಾಮಿ ಸವಾಲ್

If he becomes an MLA in 2028, I will never set foot in Bhadravati in my lifetime: Nikhil Kumaraswamy

ಶಿವಮೊಗ್ಗ: ಭದ್ರಾವತಿ ತಾಲ್ಲೂಕು ರಾಕ್ಷಸರ ಕೈಗೆ ಹೋಗಿ ಸಿಲುಕಿದೆ. ದಯವಿಟ್ಟು ಇದನ್ನ ರಾಮ ರಾಜ್ಯ ಕ್ಷೇತ್ರವನ್ನಾಗಿ ಮಾಡಬೇಕು, ಆ ಪರಿವರ್ತನೆ ಮಾಡುವ ಶಕ್ತಿ ಕ್ಷೇತ್ರದ ಮಹಾಜನತೆಗೆ ಇದೆ ಎಂದು ಶಾಸಕ ಬಿ.ಕೆ ಸಂಗಮೇಶ್ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದರು.

ಭದ್ರಾವತಿಯಲ್ಲಿ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭದ್ರಾವತಿ ಶಾಸಕರ ಬಿ.ಕೆ ಸಂಗಮೇಶ್ ಅವರನ್ನ ತರಾಟೆಗೆ ತೆಗೆದುಕೊಂಡರು.

Mr. ಶಾಸಕರೇ ಇವತ್ತಿನ ದಿನಾಂಕ ಡೈರಿಯಲ್ಲಿ ಬರೆದಿಟ್ಟುಕೊಳ್ಳಿ. 2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ನೀವೇನಾದ್ರು ಶಾಸಕರಾದ್ರೆ ಭದ್ರಾವತಿಗೆ ನನ್ನ ಜೀವನದಲ್ಲಿ ಕಾಲಿಡೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಭದ್ರಾವತಿ ತಾಲ್ಲೂಕಿನಲ್ಲಿ ಆಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ. ಅಹಂಕಾರ ಇವೆಲ್ಲಾವನ್ನ ಮೆಟ್ಟಿ ನಿಲ್ಲುವಂತ ಶಕ್ತಿ ಕ್ಷೇತ್ರದ ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರಲ್ಲಿ ಕೊಟ್ಟಿದ್ದಾನೆ ಅಪ್ಪಾಜಿ ಗೌಡರು ಅದನ್ನ ಎಲ್ಲರ ರಕ್ತದ ಕಣ ಕಣದಲ್ಲೂ ರೂಡಿಸಿದ್ದಾರೆ ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ವಾಗ್ದಾಳಿ ನಡೆಸಿದರು.

ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಪಾರದರ್ಶಕ ವಾಗಿ ಕೆಲಸವನ್ನ ಮಾಡುವುದಕ್ಕೆ ಕೈಯನ್ನ ಕಟ್ಟಿಹಾಕಿ
ಕ್ಷೇತ್ರದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್, ಮಟ್ಕಾ ಇಂತಃಹ ದಂಧೆಗಳಿಗೆ ಯುವ ಸಮುದಾಯವನ್ನ ಅವರ ರಾಜಕಾರಣದ ಬೆಳೆ ಬೇಯಿಸಿಕೊಳ್ಳಲು ದಾರಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ ಎಂದು ಶಾಸಕ ಬಿ.ಕೆ ಸಂಗಮೇಶ್ ವಿರುದ್ದ ವಾಗ್ದಾಳಿ ನಡೆಸಿದರು.

ಕ್ಷೇತ್ರದಲ್ಲಿ ಅಪ್ಪಾಜಿಗೌಡರನ್ನ ಅನೇಕ ಬಾರಿ ಶಾಸಕರನ್ನಾಗಿ ಮಾಡಿದ್ದೀರಿ. ಕ್ಷೇತ್ರದಲ್ಲಿ ಒಬ್ಬ ಹೆಣ್ಣು ಮಗಳಿಗೆ ನೀವು ಧಮ್ಕಿ ಹಾಕಿದ್ರೆ ಮನೆಗೆ ಹೋಗಿ ಸೇರ್ಕೊಳ್ತಾರೆ ಅಂತ ನಿಮ್ಮ ಮನಸ್ಸಿನಲ್ಲಿ ಇದ್ರೆ ಅದು ನಿಮ್ಮ ಕನಸು, ಶಾರದಾ ಅಪ್ಪಾಜಿಗೌಡರ ಜೊತೆ ದೇವೇಗೌಡರು, ಕುಮಾರಣ್ಣ, ನಿಖಿಲ್ ಕುಮಾರಸ್ವಾಮಿ, ಇದಕ್ಕಿಂತ ಮಿಗಿಲಾಗಿ ಕ್ಷೇತ್ರದ ಜನತೆ ಇದ್ದಾರೆ ಎಂದು ತಿಳಿಸಿದರು.

ಜನತಾ ದಳ ಪಕ್ಷದ ಕಾರ್ಯಕರ್ತರು ಎದುರಿ ಹೋಗುವಂತ ಸಂಸ್ಕೃತಿ ನಮ್ಮದಲ್ಲ, ಕಾಂಗ್ರೆಸ್ ಪಕ್ಷ ಕಳೆದ ಎರಡು ವರ್ಷಗಳ ಆಡಳಿತದಲ್ಲಿ ಸ್ವತಂತ್ರ್ಯವಾಗಿ, ಪಾರದರ್ಶಕವಾಗಿ ಕೆಲಸ ಮಾಡುವಂತಹ ಸಂಸ್ಥೆಗಳನ್ನು ಕೈ ಕಟ್ಟಾಗಿ, ನಿಮಗೆ ಬೇಕಾದಂತಹ ರೀತಿಯಲ್ಲಿ ಬಳಕೆ ಮಾಡಿಕೊಂಡಿರುವ ಸಾಕಷ್ಟು ನಿದರ್ಶನ ನಮ್ಮ ಕಣ್ಮುಂದೆ ಇದೆ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

ಕುಮಾರಣ್ಣ ನಾಲ್ಕು ಬಾರಿ ರಾಮನಗರದಲ್ಲಿ ಶಾಸಕರಾಗಿದ್ದರು. ಜಿಲ್ಲೆಯಲ್ಲಿ ಕುಮಾರಣ್ಣ ಯಾವ ರೀತಿ ನಡೆದುಕೊಂಡರು ಅಂತ ಅಲ್ಲಿರುವ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ವನ್ನ ಕೇಳಿದ್ರೆ ಅರ್ಥಆಗುತ್ತೆ ಆದರೆ ಕಾಂಗ್ರೆಸ್ ಆಡಳಿತದಲ್ಲಿ ಟಾರ್ಗೆಟ್ ರಾಜಕೀಯ ಮಾಡಲಾಗುತ್ತೆ ಎಂದು ವಾಗ್ದಾಳಿ ನಡೆಸಿದರು.

ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದ ಸಂಖ್ಯಾ ಬಲ ಕುಸಿಯುತ್ತಿದೆ ಎಂದು ಸವಾಲು ಹಾಕಿದ್ದಾರೆ. ಅವರ ಸವಾಲನ್ನು ನಾವೆಲ್ಲರೂ ಪ್ರೀತಿಯಿಂದ ಸ್ವೀಕರಿಸಿ, ಮುಂಬರುವ 2028 ರ ಸಾರ್ವತ್ರಿಕ ಚುನಾವಣೆಯಲ್ಲಿ ಅತಿ ಹೆಚ್ಚು ಜೆಡಿಎಸ್ ಸ್ಥಾನಗಳನ್ನು ಗೆಲ್ಲುವ ಮೂಲಕ ಅವರಿಗೆ ತಕ್ಕ ಉತ್ತರ ಕೊಡೋಣ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.

ನನ್ನ ಗುರಿ ಪಕ್ಷದ ಕಾರ್ಯಕರ್ತರನ್ನ ದಡಮುಟ್ಟಿಸಬೇಕು. ಇದರಲ್ಲಿ ನನ್ನ ಸ್ವಾರ್ಥ ಏನು ಇಲ್ಲ. ಲಕ್ಷಾಂತರ ಜನ ಜೆಡಿಎಸ್ ಪಕ್ಷಕ್ಕೆ ನಿಸ್ವಾರ್ಥವಾಗಿ ಸೇವೆ ಮಾಡಿದ್ದಾರೆ. ಯಾವುದೇ ಫಲಪೇಕ್ಷೆ, ನಿರೀಕ್ಷೆಯಿಲ್ಲದೆ ಪಕ್ಷಕ್ಕಾಗಿ ದುಡಿದ್ದಿದಿರಾ ಎಂದು ಹೇಳಿದರು.

ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯವೋ ಭದ್ರಾವತಿಯಲ್ಲಿ ಶಾರದಾ ಅಪ್ಪಾಜಿಗೌಡರು ನಿಮ್ಮೆಲ್ಲರ ಸಹಕಾರದಿಂದ 2028ಕ್ಕೆ ಶಾಸಕರಾಗಿ ಆಯ್ಕೆ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ಶಿವಮೊಗ್ಗದಲ್ಲಿ ಇಬ್ಬರು ಶಾರದಮ್ಮನವರ ಗೆಲುವು ಕಟ್ಟಿಟ್ಟ ಬುತ್ತಿ ಎಂದು ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಭದ್ರಾವತಿ VISL ಕಾರ್ಖಾನೆಯನ್ನು ಮರು ನಿರ್ಮಾಣ ಮಾಡಲು ಕುಮಾರಣ್ಣ ಶಪಥ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ. ಅತೀ ಶೀಘ್ರದಲ್ಲಿ VISL ಕಾರ್ಖಾನೆ ಮರುಸ್ಥಾಪನೆ ಆಗುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಕುಮಾರಣ್ಣ ಕೇಂದ್ರದ ಸಚಿವರಾಗುತ್ತಿದ್ದಂತೆ ವಿಶೇಷ ಕಾಳಜಿ ವಹಿಸಿದ್ದಾರೆ. ನೂರಕ್ಕೆ ನೂರರಷ್ಟು ಇದಕ್ಕೆ ಮರು ಜೀವ ಕೊಡ್ತಾರೆ. ಜಿಲ್ಲೆಯ ಜನತೆಗೆ ಶಾಶ್ವತವಾಗಿ ಬದುಕು ಕಟ್ಟಿಕೊಳ್ಳುವುದಕ್ಕೆ ಈ ನಿರ್ಧಾರ ಮಾಡಿದ್ದಾರೆ ಎಂದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]