ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಆರ್.ಅಶೋಕ

Caste survey to create a gap between castes: R. Ashoka

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Cmsiddaramaiah) ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R.Ashoka) ಟೀಕಿಸಿದರು.

ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರ ಸರ್ಕಾರ ಕಾಟಾಚಾರಕ್ಕೆ ಜಾತಿ ಒಳಮೀಸಲು ಸಮೀಕ್ಷೆ ಮಾಡಿದೆ. ಈ ಹಿಂದಿನ ಜಾತಿ ಗಣತಿ ಬಿಡುಗಡೆಗೆ ಹತ್ತು ವರ್ಷವಾಗಿದೆ. ಆದರೆ ಈಗ ಮಾಡಿದ ಒಳಮೀಸಲು ಸಮೀಕ್ಷೆ ಕೇವಲ 15 ದಿನಗಳಲ್ಲಿ ಮುಗಿದಿದೆ.

ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಗೆ ಎಲ್ಲ ಕಡೆ ಮಾನ್ಯತೆ ಇದೆ. ಆದರೆ ರಾಜ್ಯ ಸರ್ಕಾರ ಮಾಡುವ ಸಮೀಕ್ಷೆಗೆ ಬೆಲೆ ಇಲ್ಲ. ಜಾತಿಗಳ ನಡುವೆ ಕಂದಕ ತಂದು ಬೇಳೆ ಬೇಯಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಈ ಹುನ್ನಾರ ಮಾಡಿದ್ದಾರೆ ಎಂದರು‌.

ಕಾಂಗ್ರೆಸ್ ಸರ್ಕಾರ ಮರಳಿ ಜಾತಿ ಗಣತಿ ಮಾಡಲಿದೆ ಎಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ. ಇದರಿಂದಾಗಿ ಸರ್ಕಾರಕ್ಕೆ ಮುಖಭಂಗವಾಗಿದೆ. ಕೇಂದ್ರ ಸರ್ಕಾರ ನಡೆಸುವ ಗಣತಿಗೆ ರಾಜ್ಯ ಸರ್ಕಾರ ಸಹಕಾರ ನೀಡಿದರೆ ಸಾಕು ಎಂದರು.

ರಾಜ್ಯ ಸರ್ಕಾರ ಎಲ್ಲರಿಗೂ ಮಾರ್ಗದರ್ಶನ ನೀಡಬೇಕು. ಆದರೆ ಇದೇ ಸರ್ಕಾರದ ಪಕ್ಷದ ನಾಯಕರು ಸಂಸತ್ತಿನಲ್ಲಿ ಎಲ್ಲದಕ್ಕೂ ಸಭಾತ್ಯಾಗ ಮಾಡುತ್ತಾರೆ‌. ಸಂಸತ್ತಿನಲ್ಲಿ ರಾಜ್ಯದ ವಿಷಯವನ್ನು ಚರ್ಚೆ ಮಾಡಬೇಕು. ನಮ್ಮ ಪಕ್ಷದ ಎಲ್ಲ ಸಂಸದರು ರಾಜ್ಯದ ನೆಲ, ಜಲ ವಿಚಾರವಾಗಿ ಮಾತಾಡುತ್ತಾರೆ ಎಂದರು.

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿರುವುದು ಸ್ವಾಗತಾರ್ಹ. ಶಾಸಕರ ಮನೆ ಸುಟ್ಟಿರುವ ಘಟನೆ ಇನ್ನೂ ಕಣ್ಣ ಮುಂದಿದೆ. ಪಿಎಫ್ ಐ ಸೇರಿದಂತೆ ಪಾಕಿಸ್ತಾನದ ಪರವಾಗಿರುವವರು ಅನೇಕರು ಇದರಲ್ಲಿ ಭಾಗಿಯಾಗಿದ್ದರು. ಅವರೆಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ನಾನು ಸಾರಿಗೆ ಸಚಿವನಾಗಿದ್ದಾಗ, ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿದ್ದೆ. ಈಗ ಕೂಡ ಸರ್ಕಾರ ಅವರ ಅಹವಾಲು ಆಲಿಸಬೇಕು. ನಾನು ಕೂಡ ಅದಕ್ಕೆ ಸ್ಪಂದಿಸುತ್ತೇನೆ‌. ಆಂಧ್ರಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಕೊಲೆಯಾಗಿರುವುದು ಖಂಡನೀಯ. ಇಲ್ಲಿನ ಸರ್ಕಾರ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ‌ ನೀಡುವಂತೆ ಸಲಹೆ, ಸೂಚನೆ ಕೊಡಬೇಕು ಎಂದರು.

ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಕಾಂಗ್ರೆಸ್ ಲೂಟಿ ಮಾಡುತ್ತಿದೆ. ಇದರ ತನಿಖೆಯಾಗಿ ಸತ್ಯ ಹೊರಬರಲಿ. ಇದರಲ್ಲಿ ಜನರಿಗೆ ನ್ಯಾಯ ಸಿಗಲು ಹೋರಾಟ ಮಾಡುತ್ತೇವೆ ಎಂದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]