Doddaballapura: Medicines and pills cannot be given to customers without an official certificate from a doctor.

ದೊಡ್ಡಬಳ್ಳಾಪುರ: ವೈಧ್ಯರ ಅಧಿಕೃತ ಚೀಟಿ ಇಲ್ಲದೆ ಗ್ರಾಹಕರಿಗೆ ಔಷಧಿ, ಮಾತ್ರೆಗಳನ್ನು ನೀಡುವಂತಿಲ್ಲ

ದೊಡ್ಡಬಳ್ಳಾಪುರ: ಯಾವುದೇ ನೋವು ನಿವಾರಕ ಔಷಧಿ, ಮಾತ್ರೆಗಳನ್ನು (Medicines and pills) ವೈಧ್ಯರ ಅಧಿಕೃತ ಸಲಹಾ ಚೀಟಿ ಇಲ್ಲದೆ ಗ್ರಾಹಕರಿಗೆ ನೀಡುವಂತಿಲ್ಲ. ಎಲ್ಲಾ ರೀತಿಯ ನೋವು ನಿವಾರಕ ಔಷಧಿಗಳು ಮಾದಕದ್ರವ್ಯ ನಿಷೇಧ ಕಾಯ್ದೆ ವ್ಯಾಪ್ತಿಗೆ ಬರಲಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಔಷಧ ನಿಯಂತ್ರಣ ಸಹಾಯಕ ನಿರ್ದೇಶಕ ಸಿ.ಗಣೇಶಬಾಬು (C. Ganeshbabu) ಹೇಳಿದರು.

ಅವರು ನಗರದಲ್ಲಿ ನಡೆದ ತಾಲ್ಲೂಕಿನ ಔಷಧಿ ವ್ಯಾಪಾರಿಗಳ ಕ್ಷೇಮಾಭವೃದ್ದಿ ಸಂಘದ ವಾರ್ಷಿಕ ಮಹಾ ಸಭೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ನೋವು ನಿವಾರಕ ಮಾತ್ರೆ,ಔಷಧಿಗಳನ್ನು ಅತಿಯಾಗಿ ಸೇವನೆ ಮಾಡುವುದರಿಂದ ಮಾದಕ ಧ್ರವ್ಯದಷ್ಟೇ ಪರಿಣಾಮವನ್ನು ದೇಹದ ಮೇಲೆ ಬೀರಲಿದೆ. ಹಾಗಾಗಿ ಔಷಧ ಮಾರಾಟಗಾರರು ಯಾವುದೇ ಔಷಧಿ,ಮಾತ್ರೆಗಳನ್ನು ಕೊಡುವಾಗ ಕಡ್ಡಾಯವಾಗಿ ವೈದ್ಯರ ಚೀಟಿಯನ್ನು ನೋಡಿಯೇ ನೀಡಬೇಕು. ಹಾಗೆಯೇ ಹಳೇಯ ದಿನಾಂಕ ಇರುವ ಔಷಧಿ ಚೀಟಿಗಳನ್ನು ಸಹ ಮಾನ್ಯ ಮಾಡುವಂತಿಲ್ಲ ಎಂದರು.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆದ ಭ್ರೂಣಹತ್ಯೆ ಪ್ರಕರಣಗಳ ನಂತರ ಗರ್ಭಪಾತದ ಮಾತ್ರೆಗಳನ್ನು ಔಷಧಿ ಅಂಗಡಿಗಳಲ್ಲಿ ಮಾರಾಟ ಮಾಡುವುದಕ್ಕೆ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.

ಗರ್ಭಪಾತದ ಮಾತ್ರೆಗಳನ್ನು ಗ್ರಾಹಕರಿಗೆ ನೀಡುವಾಗ ಕಡ್ಡಾಯವಾಗಿ ವೈದ್ಯರು ಬರೆದುಕೊಡುವ ಚೀಟಿ, ದಿನಾಂಕ ಹಾಗೂ ವೈದ್ಯರ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಸದಸ್ಯತ್ವ ಸಂಖ್ಯೆಯನ್ನು ಒಳಗೊಂಡ ಶಿಪಾರಸ್ಸು ಪತ್ರವನ್ನು ಪಡೆದುಕೊಂಡೇ ನೀಡಬೇಕು. ಹಾಗೆಯೇ ಗ್ರಾಹಕರ ಮೊಬೈಲ್ ಸಂಖ್ಯೆಯನ್ನು ಪಡೆಯಬೇಕು.

ಈ ನಿಯಮಗಳನ್ನು ಪಾಲಿಸದೇ ಇದ್ದರೆ ಔಷಧಿ ಮಾರಾಟ ಮಳಿಗೆಯ ಪರವಾನಿಗಿ ರದ್ದುಗೊಳಿಸುವುದಲ್ಲದೆ, ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.
ವಾರ್ಷಿಕ ಸರ್ವ ಸದಸ್ಯ ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕಿನ ಔಷಧಿ ವ್ಯಾಪಾರಿಗಳ ಕ್ಷೇಮಾಭವೃದ್ದಿ ಸಂಘದ ಅಧ್ಯಕ್ಷ ಶಾಮಸುಂದರ್ ವಹಿಸಿದ್ದರು.

ಸಭೆಯಲ್ಲಿ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್.ಸಿ.ಪಟೇಲ್, ತಾಲ್ಲೂಕು ಗೌರವ ಅಧ್ಯಕ್ಷ ಡಿ.ಎಸ್.ಸಿದ್ದಣ್ಣ, ಉಪಾಧ್ಯಕ್ಷ ಜಿ.ಎಸ್.ಶಿವಕುಮಾರ್, ಕಾರ್ಯದರ್ಶಿ ಸಿ.ರಜನೀಶ್, ಖಜಾಂಚಿ ರಹೀಂಖಾನ್ ಹಾಗೂ ಸಂಘದ ಸದಸ್ಯರು, ಪದಾಧಿಕಾರಿಗಳು ಇದ್ದರು.

ರಾಜಕೀಯ

ಜು.28 ರಂದು ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ

ಜು.28 ರಂದು ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ

ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮತ್ತು ರಸಗೊಬ್ಬರ ಕೊರತೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಆರೋಪಿಸಿದ್ದಾರೆ

[ccc_my_favorite_select_button post_id="111749"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!