If we become blind, we will create blind people with eyes and deaf people with ears: K.V. Prabhakar

ನಾವು ದೃಷ್ಟಿ ಹೀನರಾದರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ: ಕೆ.ವಿ.ಪ್ರಭಾಕರ್

ಕೊಡಗು: ನಾವು ಸಮಾಜವನ್ನು ನೋಡುವ ದೃಷ್ಟಿಯನ್ನು ಕಳೆದುಕೊಂಡರೆ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುತ್ತೇವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ (K.V. Prabhakar) ಅಭಿಪ್ರಾಯ ಪಟ್ಟರು.

ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.

ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬಗಳಿಗೆ ಸಮಾಜ ವಿಶೇಷ ಗೌರವ ನೀಡುತ್ತದೆ ಮತ್ತು ಸರ್ಕಾರ ವಿಶೇಷ ಸವಲತ್ತುಗಳನ್ನು ಕಲ್ಪಿಸುತ್ತದೆ. ಪತ್ರಕರ್ತರು ಸಮಾಜ ಮತ್ತು ಸರ್ಕಾರದ ನಡುವೆ ಸೇತುವೆಗಳಾಗಿ ಕೆಲಸ ಮಾಡುತ್ತಾರೆ ಮತ್ತು ಸಮಾಜದ ನೋವುಗಳಿಗೆ ಕನ್ನಡಿ ಹಿಡಿಯುತ್ತಾರೆ ಎನ್ನುವ ಕಾರಣದಿಂದ ಈ ವಿಶೇಷ ಗೌರವ ಮತ್ತು ಸವಲತ್ತು ಸಿಗುತ್ತಿದೆ ಎಂದು ವಿವರಿಸಿದರು.

ಈ ಒಳ ದೃಷ್ಟಿ ಪತ್ರಕರ್ತರಿಗೆ ಇರಬೇಕು. ಈ ಸಮಾಜಮುಖಿ ದೃಷ್ಟಿಯನ್ನು ನಾವು ಕಳೆದುಕೊಂಡರೆ ನಾವು ಸಮಾಜದಲ್ಲಿ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸುವ ಜೊತೆಗೆ ನಾವೂ ಹಾಗೇ ಬಿಡುವ ಅಪಾಯವಿದೆ ಎಂದರು.

ಇಂದು ಪತ್ರಿಕಾ ವೃತ್ತಿಯ ಬಗ್ಗೆ ಎರಡು ರೀತಿಯ ಬೇಸರದ ಮಾತುಗಳನ್ನು ಸ್ನೇಹಿತರು ನನ್ನ ಜೊತೆ ಹಂಚಿಕೊಳ್ಳುತ್ತಾರೆ. ಒಂದು, ಈ ವೃತ್ತಿ ಬದುಕು ಸಾಕಾಗಿದೆ ಸರ್. ಬ್ರೇಕಿಂಗ್ ನ್ಯೂಸ್, ಬ್ರೇಕಿಂಗ್ ನ್ಯೂಸ್ ಅಂತ ನಮ್ಮ ಉಸಿರು ಕಟ್ಟುತಾ ಇದೆ ಎನ್ನುವ ಬೇಸರ ಒಂದು ಕಡೆಗಿದೆ. ಮತ್ತೊಂದು ಕಡೆ ಬ್ರೇಕಿಂಗ್ ನ್ಯೂಸ್ ನೆಪದಲ್ಲಿ ಬರುತ್ತಿರುವ ಅಸತ್ಯ ಮತ್ತು ಅರ್ಧ ಸತ್ಯದ ಸುದ್ದಿಗಳಿಂದ ಸಮಾಜದ ಉಸಿರು ಕಟ್ಟುತ್ತಿದೆ ಎನ್ನುವ ಬೇಸರವೂ ಮತ್ತೊಂದು ಕಡೆಗಿದೆ. ಈ ಎರಡೂ ಬೇಸರಕ್ಕೂ ಬೇರೆ ಯಾರೂ ಕಾರಣರಲ್ಲ. ಪತ್ರಿಕೋದ್ಯಮದ ತೇರನ್ನು ಎಳೆಯುತ್ತಿರುವ ನಾವೇ ಕಾರಣಕರ್ತರು ಎನ್ನುವುದನ್ನು ನಾವು ಮರೆಯಬಾರದು ಎಂದರು.

ಏಕೆಂದರೆ ಸಮಾಜದ ಕಷ್ಟಗಳಿಗೆ ಕನ್ನಡಿ ಹಿಡಿಯುತ್ತಿದ್ದ ಪತ್ರಿಕೋದ್ಯಮ, ಈಗ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಮತ್ತು ಕಾರ್ಪೋರೇಟ್ ಉದ್ಯಮಿಗಳಿಗೆ ಪರವಾಗಿ ಕನ್ನಡಿ ಹಿಡಿಯುತ್ತಿದೆ. ಇಂದು ವ್ಯಕ್ತಿಗತ ದ್ವೇಷ ಮತ್ತು ವೈಯುಕ್ತಿಕ ಬದುಕಿನ ಖಾಸಗಿತನವನ್ನು ಕೆದಕಿ ಕೆದಕಿ ಕಸವನ್ನೇ ಬ್ರೇಕಿಂಗ್ ಸುದ್ದಿಗಳನ್ನಾಗಿಸುತ್ತಿದ್ದೇವೆ.

ನಾವು ಕಸವನ್ನು ಕೆದಕುವಾಗ ನಮಗೆ ಕಸವೇ ಸಿಗುತ್ತದೆ. ನಾವು ಏನನ್ನು ಹುಡುಕುತ್ತೀವೋ ಅದೇ ನಮಗೆ ಸಿಗುತ್ತದೆ. ಇದೇ ಕಸ ಕಣ್ಣಿಗೆ, ಕಿವಿಗೆ ಬಿದ್ದರೆ ಸಮಾಜದಲ್ಲಿ ಕಣ್ಣಿರುವ ಕುರುಡರನ್ನು, ಕಿವಿ ಇರುವ ಕಿವುಡರನ್ನು ಸೃಷ್ಟಿಸಿದಂತಾಗುವುದಿಲ್ಲವೇ ಎನ್ನುವ ಪ್ರಶ್ನೆಯನ್ನು ಪತ್ರಕರ್ತರು ಮಾತ್ರವಲ್ಲ, ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಮಕ್ಕಳೂ ಕೇಳಿಕೊಳ್ಳಬೇಕಿದೆ ಎಂದರು.

ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಮಕ್ಕಳು ಒಂದು ಮಾತನ್ನು ನೆನಪಿಡಬೇಕು. ನಿಮ್ಮಷ್ಟೇ ಪ್ರತಿಭೆ ಇರುವ, ನಿಮಗಿಂತ ಪ್ರತಿಭೆ ಇರುವ ನಾನಾ ಕ್ಷೇತ್ರಗಳಲ್ಲಿ ಕೆಲಸ ಮಾಡುವವರ ಮಕ್ಕಳು ಹೊರಗಿದ್ದಾರೆ. ಹೆಚ್ಚಿನವರಿಗೆ ಈ ಅವಕಾಶ ಮತ್ತು ಗೌರವ ಪ್ರಾಪ್ತಿ ಆಗುವುದಿಲ್ಲ. ಇಂಥಾ ಅವಕಾಶ ವಂಚಿತ ಮಕ್ಕಳ, ಅವಕಾಶ ವಂಚಿತ ಸಮಾಜದ ರಾಯಭಾರಿಗಳಾಗಿ ನೀವುಗಳು ಬೆಳೆಯಬೇಕಿದೆ ಎಂದು ಕರೆ ನೀಡಿದರು.

ಈ ರೀತಿಯ ಸಮಾಜಮುಖಿ ದೃಷ್ಟಿಕೋನವನ್ನು ನಾವು ಬೆಳೆಸಿಕೊಂಡಾಗ ನಮ್ಮ ಸಾಮಾಜಿಕ ಪ್ರಜ್ಞೆ ಬೆಳಯುತ್ತದೆ. ಈ ಪ್ರಜ್ಞೆ ಬೆಳೆದಾಗ ನೀವು ಸಮಾಜದ ಆಸ್ತಿ ಆಗುತ್ತೀರಿ. ಆಗ ಈ ಸಮಾಜದ ಋಣ ತೀರಿಸಿದಂತಾಗುತ್ತದೆ ಎಂದರು.

ಅಮ್ಮನ‌ ಮಡಿಲು-ಮನುಷ್ಯ ಸಂಬಂಧ ಅಳಿಯಬಾರದು

ತಂತ್ರಜ್ಞಾನ ಬೆಳೆದಂತೆ, ಅವಕಾಶಗಳು ದೊರೆತಂತೆ ಮನುಷ್ಯ ಸಂಬಂಧಗಳು ದುರ್ಬಲವಾಗುತ್ತಿವೆ. ತಾಯಿಯ ಮಡಿಲು, ಅಮ್ಮನ‌ ಕೈ ತುತ್ತು, ಹಳ್ಳಿ ಮನೆ, ಹಸು-ಕುರಿ-ಕೋಳಿ ಸಾಕಾಣೆ ಎಲ್ಲವೂ ದೂರವಾಗುತ್ತಿದೆ. ಕೊನೆಗೆ ಪೋಷಕರ ಜೊತೆಯ ಒಡನಾಟವೂ ಮೊಬೈಲ್ ಗೆ ಸೀಮಿತವಾಗಿ ಮಕ್ಕಳು ವಿದೇಶಕ್ಕೆ ಹೋಗಿ ಕುಳಿತಿರುವ ಪರಿಣಾಮ ಇಲ್ಲಿ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಇವೆಲ್ಲಾ ಆರೋಗ್ಯಕರ ಸಮಾಜದ ಲಕ್ಷಣವೇ ಯೋಚಿಸಿ ಎಂದು ಕರೆ ನೀಡಿದರು.

ಪತ್ರಕರ್ತರ ವಸತಿಗೆ ಯೋಜನೆ

ಈಗಾಗಲೇ ರಾಜ್ಯದ ಪತ್ರಕರ್ತರಿಗೆ ವಸತಿ ಸವಲತ್ತು ಕಲ್ಪಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯದಲ್ಲೇ ಯೋಜನೆ ರೂಪಿಸುವ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಸತಿ ಸಚಿವರ ಮಾಧ್ಯಮ ಸಂಯೋಜಕರಾದ ಲಕ್ಷ್ಮೀನಾರಾಯಣ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ, ಸಂಘದ ರಾಜ್ಯ ಉಪಾಧ್ಯಕ್ಷರಾದ ರಮೇಶ್ ಕುಟ್ಟಪ್ಪ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!