Bangalore, the heart of Karnataka, belongs to everyone: DCM D.K. Shivakumar

ಕರ್ನಾಟಕದ ಹೃದಯ ಬೆಂಗಳೂರು ಎಲ್ಲರಿಗೂ ಸೇರಿದ್ದು: ಡಿಸಿಎಂ ಡಿ.ಕೆ‌. ಶಿವಕುಮಾರ್

ಬೆಂಗಳೂರು; “ಕರ್ನಾಟಕದ ಎಲ್ಲಾ ಭಾಗಗಳ ಜನರ ಹೃದಯವೇ ಬೆಂಗಳೂರು. ಬೆಂಗಳೂರು ನಗರ ‌ಇಲ್ಲಿನ ಸುತ್ತಮುತ್ತಲ ಜನರಿಗೆ ಸೇರಿದ್ದಲ್ಲ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರು, ಉಡುಪಿ ಹೀಗೆ ಎಲ್ಲರಿಗೂ ಸೇರಿದ್ದು. ನೀವೆಲ್ಲರೂ ಸೇರಿ ಬೆಂಗಳೂರನ್ನು ಉಳಿಸಿ ಬೆಳೆಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಹೇಳಿದ್ದಾರೆ.

ನಗರದ ನಂದಿ ಲಿಂಕ್ ಗ್ರೌಂಡ್ ನಲ್ಲಿ ಭಾನುವಾರ ನಡೆದ ಕುಂದಾಪ್ರ ಕನ್ನಡ ಹಬ್ಬ- 2025ರಲ್ಲಿ ಭಾಗವಹಿಸಿ ಮಾತನಾಡಿದರು.

“ಕರಾವಳಿ ಭಾಗದವರೇ ಹೆಚ್ಚಿನ ವಿದ್ಯಾಸಂಸ್ಥೆಗಳು, ಹೋಟೆಲ್, ಬ್ಯಾಂಕ್ ಗಳನ್ನು ಸ್ಥಾಪನೆ ಮಾಡಿರುವುದು. ಈ ಭಾಗ ಪ್ರವಾಸೋದ್ಯಮಕ್ಕೆ ಹೇಳಿ ಮಾಡಿಸಿದಂತಿದೆ. ಈ ಕಾರಣಕ್ಕೆ ಈಗಾಗಲೇ ಸದನದಲ್ಲಿ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನ ಮಾಡುವುದಾಗಿ ಘೋಷಣೆ ಮಾಡಲಾಗಿದೆ” ಎಂದರು.

“ನಿಮ್ಮ ಭಾಗಕ್ಕೆ ವಿಮಾನ ನಿಲ್ದಾಣದ‌ ಬಗ್ಗೆ ಆನಂತರ ಚರ್ಚೆ ಮಾಡೋಣ. ನೀವು ಹೊರಗೆ ವಲಸೆ ಹೋಗುವುದನ್ನು ತಪ್ಪಿಸಿ ನೀವಿದ್ದಲಿಯೇ ಉದ್ಯೋಗ ಸೃಷ್ಟಿ ‌ಮಾಡುವುದು ಮೊದಲ ಆದ್ಯತೆ. ನಿಮ್ಮ ಊರಿನಲ್ಲಿಯೇ ನಿಮ್ಮ ಪರಂಪರೆಯನ್ನು ಜಗತ್ತಿಗೆ ಪರಿಚಯ ಮಾಡಬೇಕು. ಈ ಡಿ.ಕೆ.ಶಿವಕುಮಾರ್ ಉಡುಪಿ ಹಾಗೂ ಕುಂದಾಪುರದ ಜನತೆಯ ಜೊತೆಯಲ್ಲಿ ಸದಾ ಇರುತ್ತಾನೆ‌ ಎನ್ನುವ ಸಂದೇಶ ನೀಡುತ್ತೇನೆ. ನಿಮ್ಮ ಆಶೀರ್ವಾದ ಇದ್ದರೆ ನಮ್ಮ ಸಹಕಾರ ಇರುತ್ತದೆ” ಎಂದು ಹೇಳಿದರು.

“ಗ್ರೇಟರ್ ಬೆಂಗಳೂರು ಮಾಡುವುದರಿಂದ ಕನ್ನಡಿಗರಿಗೆ ಅವಕಾಶಗಳನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಟೀಕೆ ಮಾಡಿದರು‌. ನಾನು ಅವರಿಗೆ ಹೇಳಿದೆ, ನೀವೆಲ್ಲರೂ ಮೂರ್ಖರು ಬೆಂಗಳೂರು ಕರ್ನಾಟಕದ ಎಲ್ಲಾ ಜನತೆಯ ಹೃದಯ ಭಾಗ ಇದ್ದಂತೆ. ಇಲ್ಲಿರುವ ಹೊರಗಿನವರಿಗೆ ನೀವು ಪರಕೀಯರು ಎನ್ನುವ ಭಾವನೆ ಬೇಡ” ಎಂದರು.

“ಈ ಊರಿಗೆ ಜಡ್ಜ್, ಲಾಯರ್, ಉದ್ಯಮಿ – ಹೀಗೆ ಯಾರೇ ಬಂದರೂ ಹೊರಗೆ ಹೋಗುವುದಿಲ್ಲ. ಈ ಹಿಂದೆ ಅನುಕೂಲಸ್ಥರು ಮುಂಬೈ, ಸೌದಿಗೆ ತೆರಳಿದ್ದಾರೆ. ಈಗಿನ ಯುವ ಜನತೆ ಬೆಂಗಳೂರಿಗೆ ಬರುತ್ತಿದ್ದಾರೆ” ಎಂದರು.

“ಮೂಲವನ್ನು ಮರೆತರೆ ಫಲವನ್ನು ಮರೆತಂತೆ ಎಂದು ಹಿರಿಯರು ಹೇಳಿದ್ದಾರೆ. ದೇವರು ವರ ಮತ್ತು ಶಾಪ ಎರಡನ್ನೂ ನೀಡುವುದಿಲ್ಲ ಆದರೆ ಅವಕಾಶವನ್ನು ಮಾತ್ರ ನೀಡುತ್ತಾನೆ. ನೆಲ,‌ ಜಲ, ಭಾಷೆ, ಸಂಸ್ಕೃತಿಯನ್ನು ಉಳಿಸಿಕೊಳ್ಳಲು ಕುಂದಾಪುರ ಕನ್ನಡಿಗರು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿರುವುದೇ ಕರ್ನಾಟಕದ ಸೌಭಾಗ್ಯ. ನಿಮ್ಮ ಸಂಘದ ಹಿರಿಯರು ಎಲ್ಲರನ್ನು ಒಟ್ಟಿಗೆ ಸೇರಿಸಿ ಕರ್ನಾಟಕದ ಹೃದಯ ಭಾಗದಲ್ಲಿ ನೀವು ಇದ್ದೀರಾ ಎಂದು ಸಂದೇಶ ನೀಡಿದ್ದೀರಿ ನಿಮಗೆ ಸಾಷ್ಟಾಂಗ ನಮಸ್ಕಾರಗಳು” ಎಂದು ಶ್ಲಾಘಿಸಿದರು.

“ನಿಮಗೆ ಪಾರಂಪರಿಕವಾಗಿ ಕಲೆ ಮೈಗೂಡಿಕೊಂಡು ಬಂದಿದೆ. ಈ ಮೊದಲು ಕೇವಲ ಮಂಗಳೂರು ಎಂದು ಹೇಳುತ್ತಿದ್ದರು. ಆದರೆ ಇಡೀ ಕರಾವಳಿಗೆ ಪ್ರಾಮುಖ್ಯತೆಯಿದೆ. ಉಡುಪಿಯ ಪಂಚಾಯ್ತಿಯೊಂದರಲ್ಲಿಯೇ ಮೂರು ಮೆಡಿಕಲ್ ಕಾಲೇಜಿದೆ. ಇದು ನಿಮ್ಮ ಹೆಗ್ಗಳಿಕೆ” ಎಂದರು.

“ಮೈಸೂರು ದಸರಾದಲ್ಲಿ ಕಂಬಳ ಮಾಡುವ ಆಲೋಚನೆಯಿತ್ತು. ಅದಕ್ಕೆ ಮುಖ್ಯಮಂತ್ರಿಗಳು ಆ ಗಡಿಬಿಡಿಯಲ್ಲಿ ಮಾಡುವುದು ಬೇಡ ಮಧ್ಯದಲ್ಲಿ ಯಾವಾಗಾದರೂ ಮಾಡೋಣ ಎಂದಿದ್ದಾರೆ. ನಿಮ್ಮ ಕಲೆಯಾದ ಯಕ್ಷಗಾನ ಸೇರಿದಂತೆ ನಾಟಕ, ಸಾಹಿತ್ಯ ಯಾವುದೂ ಸಹ ಅಳಿಸಿ ಹೋಗಬಾರದು ಎಂಬುದು ನಮ್ಮ‌‌‌ ಕಾಳಜಿ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ಕೆಲಸ ಆದಷ್ಟು ಬೇಗ ಮಾಡಲಾಗುವುದು. ಸಂಘದವರು ಮತ್ತೊಮ್ಮೆ ನನ್ನ ಭೇಟಿ ಮಾಡಿ” ಎಂದರು.‌

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!