ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅಮಾನತ್ತಿಗೆ ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಪತ್ರ ಚಳುವಳಿ

Letter movement in Doddaballapur demanding suspension of Kasapa President Mahesh Joshi

ದೊಡ್ಡಬಳ್ಳಾಪುರ: ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ್ ಜೋಶಿಯವರ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ, ಕನ್ನಡ ಪಕ್ಷದಿಂದ ಪತ್ರ ಚಳುವಳಿ (Letter movement) ನಡೆಸಲಾಯಿತು.

ಇದಕ್ಕೂ ಮುನ್ನ ತಾಲೂಕು ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಮುಖಂಡರು, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯ‌ರ್ರವರ ದೂರದೃಷ್ಟಿಯ ಫಲವಾಗಿ ಸುಮಾರು 110 ವರ್ಷಗಳ ಹಿಂದೆ ಕನ್ನಡ ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದಗಳ ಸಂವರ್ಧನೆಗಾಗಿ ಸ್ಥಾಪನೆಗೊಂಡ ಸಮಸ್ತ ಕನ್ನಡಿಗರ ಹೆಮ್ಮೆಯ ಪ್ರಾತಿನಿದಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತನ್ನು ಇತ್ತೀಚಿನ ದಿನಗಳಲ್ಲಿ ಸರ್ವಾಧಿಕಾರ, ಭ್ರಷ್ಟಚಾರಗಳ ಕೂಪದಲ್ಲಿ ಮುಳುಗಿಸಿ ದಿಕ್ಕುದೆಸೆಗಳಿಲ್ಲದಂತೆ ಮಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಸ್ತಿತ್ವ, ಘನತೆ ಮತ್ತು ಪಾವಿತ್ತೈತೆಗಳಿಗೆ ತೀವ ದಕ್ಕೆ ಉಂಟುಮಾಡುತ್ತಿದೆ‌.

ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅಮಾನತ್ತಿಗೆ ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಪತ್ರ ಚಳುವಳಿ

ಈ ವಿಷಯಕ್ಕೆ ಸಂಬಂಧಪಟ್ಟ ಹಾಗೇ ಹಿರಿಯ ಸಾಹಿತಿಗಳು, ಬರಹಗಾರರು, ಹೋರಾಟಗಾರರು, ಪ್ರಶ್ನೆ ಮಾಡಿದರೆ ಅವರ ಸದಸ್ಯತ್ವವನ್ನು ರದ್ದುಗೊಳಿಸುವ ಬೆದರಿಕೆ ಪತ್ರಗಳನ್ನು ಹಾಕುತ್ತಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವಾಧಿಕಾರಿ ಅಧ್ಯಕ್ಷ ಮಹೇಶ್ ಜೋಷಿ ಅವರನ್ನು ರಾಜ್ಯ ಸರ್ಕಾರ ಈ ಕೂಡಲೇ ಅಮಾನತ್ತು ಗೊಳಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಘನತೆ ಮತ್ತು ಗೌರವವನ್ನು ಉಳಿಸುವಂತೆ ಆಗ್ರಹಿಸಿದರು.

ಪ್ರಸ್ತುತ ಅಧ್ಯಕ್ಷರಾದ ಮಹೇಶ್ ಜೋಷಿರವರು ಆಯ್ಕೆಯಾದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಅಶಿಸ್ತು ಪ್ರದರ್ಶನ ಮಾಡಿಕೊಂಡು ಬಂದಿರುತ್ತಾರೆ. ಆಡಳಿತಾತ್ಮಕವಾಗಿ ಸಂವಿಧಾನ ವಿರೋಧಿ ನೀತಿಗಳನ್ನು ಅನುಸರಿಸುತ್ತ ಪ್ರಜಾಪ್ರಭುತ್ವದ ಕಗ್ಗೋಲೆ ಮಾಡುತ್ತಿದ್ದಾರೆ.

ಸಂವಿಧಾನ ಬದ್ಧವಾದ, ಸರಳವಾದ ಸುಸೂತ್ರವಾದ ಆಡಳಿತ ಸ್ನೇಹಿಯಾಗಿದ್ದ ಕನ್ನಡ ಸಾಹಿತ್ಯ ಪರಿಷತ್ ನಿಬಂಧನೆಗಳಿಗೆ ವಾಮಮಾರ್ಗದಲ್ಲಿ ತಿದ್ದುಪಡಿಗಳನ್ನು ತಂದು, ಅಧಿಕಾರ ಕೇಂದ್ರಿಕರಣ ಮಾಡಿಕೊಂಡು ಆಡಳಿತ ಮಂಡಳಿಯ ಚುನಾಯಿತ ಪ್ರತಿನಿಧಿಗಳನ್ನು ಹೆದರಿಸಿ, ಬೆದರಿಸಿ ಅವರ ಹಕ್ಕುಗಳನ್ನು ಕಸಿದುಕೊಂಡಿರುತ್ತಾರೆ.

ಹಿರಿಯ ಸಾಹಿತಿಗಳನ್ನು, ಹಿರಿಯ ಸದಸ್ಯರುಗಳನ್ನು ಅವಮಾನಿಸುತ್ತಾ, ಪ್ರಶ್ನಿಸಿದವರನ್ನು ನಿಂದಿಸುತ್ತಾ, ಹಿರಿಯರ ಸಲಹೆ ಮತ್ತು ಅಭಿಪ್ರಾಯಗಳನ್ನು ಪರಿಗಣಿಸದೆ ಕಾನೂನಿನ ಹುಸಿ ಬೆದರಿಕೆಗಳನ್ನು ಪ್ರಯೋಗಿಸುತ್ತಿರುತ್ತಾರೆ.

ಸರ್ಕಾರದಿಂದ ಬಿಡುಗಡೆಯಾಗಿರುವ ವಿವಿಧ ಮೂಲಗಳಿಂದ ಹರಿದು ಬರುವ ಕನ್ನಡಿಗರ ತೆರಿಗೆ ಹಣವನ್ನು ನೀತಿ, ನಿಯಮ, ಕಾನೂನು ಕಾಯ್ದೆಗಳನ್ನು ಮೀರಿ ದುರುಪಯೋಗ ಮಾಡಿಕೊಂಡು ಸಾಹಿತ್ಯ ಸಮ್ಮೇಳನಗಳ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಾ, ದರ್ಪ ದೌರ್ಜನ್ಯಗಳನ್ನು ನಡೆಸುತ್ತಿರುವ ಕ.ಸಾ.ಪ.ದ ದುರಹಂಕಾರಿ, ಸರ್ವಾಧಿಕಾರಿ, ಅಧ್ಯಕ್ಷರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಭಿಮಾನಿ ಸದಸ್ಯರೆಲ್ಲರೂ ಪ್ರಶ್ನಿಸಿ ರಾಜ್ಯ ಸರ್ಕಾರಕ್ಕೆ ಸದಸ್ಯತ್ವದ ಸಂಖ್ಯೆಯೊಂದಿಗೆ ಅಮಾನತ್ತು ಗೊಳಿಸಲು ಪತ್ರ ಸಲ್ಲಿಸಲಾಗಿದೆ.

ಈಗಾಗಲೇ ಹಿರಿಯ ಸಾಹಿತಿಗಳು, ಬರಹಗಾರರು, ಹೋರಾಟಗಾರರು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕರಿಗಳು ಇವರ ವಿರುದ್ಧ ಕಾರ್ಯಕ್ರಮಗಳನ್ನು ರೂಪಿಸಿ ಸರ್ಕಾರದ ಗಮನಕ್ಕೆ ತಂದು ಸರ್ಕಾರ ಇವರಿಗೆ ನೀಡಿದ ಸಚಿವ ಸ್ಥಾನಮಾನದ ಸೌಲಭ್ಯಗಳನ್ನು ಹಿಂಪಡೆದುಕೊಂಡಿದೆ.

ಇವರು ನಡೆಸಿರುವ ಅವ್ಯವಹಾರಗಳನ್ನು ವಿಚಾರಣೆ ನಡೆಸಲು ಸಹಕಾರ ಇಲಾಖೆ ಆದೇಶ ಹೊರಡಿಸಿದ್ದು, ಈ ಆದೇಶಕ್ಕೆ ತಡೆನೀಡುವಂತೆ ಉಚ್ಚನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಇವರ ಅರ್ಜಿಯನ್ನು ನ್ಯಾಯಪೀಠ ವಜಾ ಮಾಡಿರುತ್ತದೆ.

ಈ ಬೆಳವಣಿಗೆಯಿಂದ ಅಧ್ಯಕ್ಷರಾದ ಮಹೇಶ್ ಜೋಷಿರವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗಿತ್ತು. ಆದರೆ ಸ್ವಾಭಿಮಾನವೇ ಇಲ್ಲದ ಸರ್ವಾಧಿಕಾರಿ ಅಧ್ಯಕ್ಷರು ಮುಂದುವರೆಯುತ್ತಿರುವುದು ಕನ್ನಡಿಗರ ದುರ್ದೈವವಾಗಿರುತ್ತದೆ ಎಂದರು.

ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅಮಾನತ್ತಿಗೆ ಒತ್ತಾಯಿಸಿ ದೊಡ್ಡಬಳ್ಳಾಪುರದಲ್ಲಿ ಪತ್ರ ಚಳುವಳಿ

ಬಳಿಕ ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಕಾರ್ಯದರ್ಶಿ ಆಂಜನೇಯ, ತಾಲೂಕು ಅಧ್ಯಕ್ಷ ಡಿ.ವೆಂಕಟೇಶ್, ಛಲವಾದಿ ಮಹಾಸಭಾದ ಮುಖಂಡರಾದ ಗುರುರಾಜಪ್ಪ, ರೈತಸಂಘದ ಮುತ್ತೇಗೌಡ, ಶಿವಕುಮಾರ್ ಸಂಘದ ಅಧ್ಯಕ್ಷ ರಮೇಶ್, ಹೋರಾಟಗಾರ ತೂಬಗೆರೆ ಷರಿಫ್, ಡಾ.ರಾಜ್ ಕುಮಾರ್ ಸಂಘದ ಪದಾಧಿಕಾರಿಗಳಾದ ಸುರೇಶ್, ತಿಮ್ಮರಾಜು, ಪರಮೇಶ್, ನಿವೃತ್ತ ಶಿಕ್ಷಕ ಲಿಂಗನಹಳ್ಳಿ ಬಸವರಾಜಯ್ಯ ಮತ್ತಿತರರಿದ್ದರು.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!