Prajwal punished: Private news channel anchor trolled

ಪ್ರಜ್ವಲ್‌ಗೆ ಶಿಕ್ಷೆ: ಟ್ರೋಲಾದ ಖಾಸಗಿ ನ್ಯೂಸ್ ಚಾನೆಲ್ ಆಂಕರ್| Video ನೋಡಿ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಹೊರಡಿಸಿದೆ.

ಶುಕ್ರವಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯಾಗಿದ್ದಾನೆಂದು ನ್ಯಾಯಾಧೀಶರು ಘೋಷಿಸಿದ್ದಾರೆ. ಅಲ್ಲದೆ ಶನಿವಾರ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಿತು.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ನಡೆಸಿತ್ತು.

ಮೈಸೂರಿನ ಕೆ ಆರ್ ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376(2)(2), 376(2)(5), 506, 354-2, 354(2), 354(2), 354(2) , 662 8 ದಾಖಲಿಸಲಾಗಿತ್ತು.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಗಳ ಪೆನ್ ಡ್ರೈವ್ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಬಳಿಕ ವಿಶ್ವಾದ್ಯಂತ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು.

2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ, ಕೆ.ಆ‌ರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರೇಪ್ ಕೇಸ್ ದಾಖಲಿಸಿಕೊಂಡಿದ್ದರು. ಕೇವಲ 7 ತಿಂಗಳಿನಲ್ಲಿ ಸಾಕ್ಷ್ಯ ವಿಚಾರಣೆ ಪೂರ್ಣಗೊಳಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ತೀರ್ಪು ನೀಡಿ, ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಇನ್ನೂ ತೀವ್ರ ಕುತೂಹಲ ಕೆರಳಿಸಿದ್ದ ಶಿಕ್ಷೆ ಪ್ರಮಾಣದ ಕುರಿತು ಖಾಸಗಿ ಚಾನೆಲ್ ಒಂದರ ಆಂಕರ್ ನಿರೂಪಿಸಿರುವುದು (ಕಿರಿಚಿರುವುದು) ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದೆ.

ಹೌದು ಪ್ರಜ್ವಲ್ ರೇವಣ್ಣ ಪ್ರಕರಣ ತೀರ್ಪು ಮತ್ತು ಶಿಕ್ಷೆ ಪ್ರಮಾಣದ ಕುರಿತು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕುತೂಹಲ ಕೆರಳಿಸಿತ್ತು. ಅದನ್ನು ವರದಿ ಮಾಡಲು ಇಡೀ ಮಾಧ್ಯಮಗಳು ಕಾದು ನಿಂತಿದ್ದವು. ಈ ವೇಳೆ ಖಾಸಗಿ ನ್ಯೂಸ್ ಚಾನಲ್ TV5 ಕನ್ನಡದ ಆಂಕರ್ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆ ಪ್ರಮಾಣ ಘೋಷಿಸುತ್ತಿದ್ದಂತೆ, ದೊಡ್ಡ ದನಿಯಲ್ಲಿ ತೀರ್ಪಿನ ಕುರಿತು ಹೇಳಿದ್ದಾರೆ.

ಇದು ನೆಟ್ಟಿಗರಿಂದ ಟ್ರೋಲ್ಗೆ ಒಳಗಾಗಿದ್ದು, ಅಣ್ಣನಿಗೆ ಯಾರಾದ್ರೂ ನೀರು ಕುಡಿಸಿರೋ, ನಿಧಾನ ಗುರು, ಜೀವ- ಗೀವ ಹೋದ್ಗೀದಾತು ಎಂದು ಲೇವಡಿ ಮಾಡಿದ್ದಾರೆ.

ಇನ್ನೂ ಕೆಲವರು ಇದೇ ಪ್ರಕರಣದ ವರದಿಯನ್ನು ದೂರದರ್ಶನ ಚಂದನ ಆಂಕರ್ ನಿರೂಪಿಸಿರುವುದು ಹಾಗೂ Tv5 ಕನ್ನಡ ಖಾಸಗಿ ಚಾನಲ್ ಆಂಕರ್ ನಿರುಪಿಸಿರುವ ವಿಡಿಯೋ ಎಡಿಟ್ ಮಾಡಿ, ವೆತ್ಯಾಸ ಗಮನಿಸಿ, ಸರ್ಕಾರಿ ಉದ್ಯೋಗ Vs ಖಾಸಗಿ ಉದ್ಯೋಗ ಎಂದು ಕಿಚಾಯಿಸಿದ್ದಾರೆ.

ರಾಜಕೀಯ

ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲುದಾರಿಕೆ ಇದೆ: ಬಿಜೆಪಿ ನಾಯಕರ ಕುಟುಕಿದ ಡಿಸಿಎಂ ಡಿ.ಕೆ.ಶಿವಕುಮಾರ್

ಮೆಟ್ರೋ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲುದಾರಿಕೆ ಇದೆ: ಬಿಜೆಪಿ ನಾಯಕರ ಕುಟುಕಿದ ಡಿಸಿಎಂ

"ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ಇದರಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆ ಇದೆ. ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112139"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!