Bhimasena's sense of time

ಹರಿತಲೇಖನಿ ದಿನಕ್ಕೊಂದು ಕಥೆ: ಭೀಮಸೇನನ ಸಮಯ ಪ್ರಜ್ಞೆ

Harithalekhani: ಧರ್ಮರಾಜನು ರಾಜ್ಯವಾಳುತ್ತಿದ್ದ ಕಾಲದಲ್ಲಿ ಎಲ್ಲೆಲ್ಲೂ ಸುಖ ಸಂತೋಷಗಳು ತಾಂಡವಾಡುತ್ತಿದ್ದವು. ಪ್ರಜೆಗಳು ಬಂದು ರಾಜನ ಬಳಿ ಯಾವುದೇ ವಿಧವಾದ ಸಹಾಯವನ್ನು ಕೇಳಿದರೂ ತಕ್ಷಣವೇ ನೆರವೇರುತ್ತಿತ್ತು. ಯಾರೂ ಬರಿಗೈಯಲ್ಲಿ ತಿರುಗಿ ಹೋದದ್ದು ಇಲ್ಲವೇ ಇಲ್ಲ.

ಒಮ್ಮೆ ಒಬ್ಬ ಬ್ರಾಹ್ಮಣ ಯಾವುದೋ ಒಂದು ದಾನ ಕೇಳುತ್ತಾ ಧರ್ಮರಾಜನ ಬಳಿಗೆ ಹೋಗಿದ್ದನು. ಆದರೆ ಆತನು ವಾಪಸ್ ಬರುವಾಗ ಮಾತ್ರ ಬರಿಗೈಯಲ್ಲಿ ಬರುತ್ತಿದ್ದನು ಅದನ್ನು ಗಮನಿಸಿದ ಭೀಮಸೇನನು ಅವನನ್ನು ತನ್ನ ಬಳಿ ಕರೆದು

‘ಸ್ವಾಮೀ, ತಾವು ಏನನ್ನೋ ಕೇಳುವುದಕ್ಕಾಗಿ ರಾಜನ
ಬಳಿಗೆ ಹೋಗಿದ್ದರಿ. ಆದರೆ ವಾಪಾಸು ಬರುವಾಗ ಮಾತ್ರ ಬರಿಗೈಯಲ್ಲಿ ಬರುತ್ತಿದ್ದೀರಿ. ಯಾಕೆ ಬರಿಗೈಯಲ್ಲಿ ವಾಪಾಸಾಗುತ್ತಿದ್ದೀರಿ?’ ಏಕೆ ತಾವು ಮಹಾರಾಜರನ್ನು ಭೇಟಿಯಾಗಲಿಲ್ಲವೇ? ಪ್ರಭುಗಳು ಏನು ಕೊಡಲಿಲ್ಲವೇ ಎಂದು ಕೇಳಿದನು”.

ಆಗ ಆತನು ಅವರ ಬಳಿ ನಾನು ಕೇಳಿದ ವಸ್ತು ಇರಲಿಲ್ಲ. ಅದಕ್ಕಾಗಿ ನಾಳೆ ಬರಲು ತಿಳಿಸಿದ್ದಾರೆ. ನಾಳೆ ಅದನ್ನು ತರಿಸಿ ಇಟ್ಟಿರುತ್ತಾರೆ. ಹಾಗಾಗಿ ನಾನು ನಾಳೆ ಬರುತ್ತೇನೆ’ ಎಂದನು.

ಧರ್ಮರಾಜನಿಂದ ಭೀಮಸೇನನು ಇಂತಹ ಉತ್ತರವನ್ನು ನಿರೀಕ್ಷಿಸಿರಲಿಲ್ಲ. ‘ಇಂದು ಮಾಡಬೇಕಾದಕೆಲಸವನ್ನು ಇಂದೆಯೇ ಮಾಡಬೇಕು. ಅದನ್ನು ನಾಳೆಯ ದಿನಕ್ಕೆ ಮುಂದೂಡುವುದೆಂದರೇನು. ಇಂತಹ ವಿಷಯ ಅಣ್ಣನ ಅರಿವಿಗೇಕೆ ಬರಲಿಲ್ಲ?” ಹೀಗೆ ಯೋಚಿಸಿದ ಭೀಮಸೇನನು ಬ್ರಾಹ್ಮಣನನ್ನು ಹೋಗದಂತೆ ತಡೆದು ಅಲ್ಲೇ ನಿಲ್ಲಿಸುತ್ತ ಮಹಾರಾಜನ ಅರಮನೆಯ ಬಳಿಯಿರುವ ಒಂದು ದೊಡ್ಡ
ಗ೦ಟೆಯನ್ನು ಜೋರಾಗಿ ಬಾರಿಸತೊಡಗಿದ.

ಮಹಾರಾಜನ ಬಳಿ ಇರುವ ಈ ಗಂಟೆಯನ್ನು ಯಾವಾಗಲೂ ಬಾರಿಸುವುದಿಲ್ಲ. ಕೆಲವೊಂದು
ವಿಶಿಷ್ಟ ಸಂದರ್ಭಗಳಲ್ಲಿ ಅಂದರೆ ಅತಿ ಪ್ರಾಮುಖ್ಯವಾದ ಘಟನೆಗಳು ನಡೆದಾಗ ಮಾತ್ರ ಅದನ್ನು ಜನರ ಗಮನಕ್ಕೆ ತರಲು ಬಾರಿಸಲಾಗುತ್ತಿತ್ತು. ಹಾಗಾಗಿ ಈ ಗಂಟೆಯ ಸಪ್ಪಳವನ್ನು ಕೇಳಿದಾಗ ಎಲ್ಲಾ ಪ್ರಜೆಗಳೂ ತಮ್ಮ ತಮ್ಮ ಕೆಲಸಗಳನ್ನು ಅಲ್ಲಲ್ಲಿಯೇ ನಿಲ್ಲಿಸಿ ಮಹಾದ್ವಾರದ ಕಡೆಗೆ ವಿಷಯ ತಿಳಿಯಲು ನುಗ್ಗಿ ಬರುತ್ತಿದ್ದರು.

ಈ ದಿನವಂತೂ ಭೀಮಸೇನನೇ ಆ ಗಂಟೆಯನ್ನು ಜೋರಾಗಿ ಬಾರಿಸುತ್ತಿದ್ದುದರಿಂದ ಪ್ರಜೆಗಳೆಲ್ಲಾ
ಮಹಾದ್ವಾರದ ಕಡೆಗೆ ದೌಡಾಯಿಸತೊಡಗಿದರು. ಅಷ್ಟೇ ಅಲ್ಲ ಧರ್ಮರಾಜ, ಅರ್ಜುನ, ನಕುಲ ಸಹದೇವರ ಸಹಿತ ದೌಪದಿಯೂ ಆ ಸ್ಥಳಕ್ಕೆ ಓಡೋಡಿ ಬಂದರು. ಅವರಾರ ಬರವನ್ನೂ ಲೆಕ್ಕಿಸದೇ ಭೀಮಸೇನನು ತಡೆಯಿಲ್ಲದೇ ತುಂಬಾ ಆವೇಶ ಬಂದವನಂತೆ ಆ ಗಂಟೆಯನ್ನು ಬಾರಿಸುತ್ತಲೇ
ಇದ್ದನು.

ಆಗ ಅಲ್ಲಿಗೆ ಆಗಮಿಸಿದ ಧರ್ಮರಾಯನು ಭೀಮಸೇನನನ್ನು ತಡೆಯುತ್ತ, ‘ನಿಲ್ಲಿಸು,- ಭೀಮಸೇನ. ಯಾರಿಗೆ ಅನ್ಯಾಯವಾಗಿದೆ ಎಂದು ಈ ರೀತಿ ಗಂಟೆಯನ್ನು ಬಾರಿಸುತ್ತಿದ್ದೀಯ. ಈ ಗಂಟೆಯ ಸಪ್ಪಳವನ್ನು ಕೇಳಿ ನಮ್ಮ ಜೊತೆಗೆ ಊರಿನ ಪ್ರಜೆಗಳೂ ಬಂದು ಸೇರಿದ್ದಾರೆ. ನೀನು
ಈ ರೀತಿ ಗಂಟೆಯನ್ನು ಬಾರಿಸಲು ಕಾರಣವೇನು?’ ಎಂದು ಕೇಳಿದನು.

ಭೀಮಸೇನನು, “ಒಂದು ಸಂತಸ ಸುದ್ದಿಯನ್ನು ಹೇಳಲಿದ್ದೇನೆ” ಎಂದನು. ನಂತರ ಅವನು ಅಣ್ಣನಾದ ಧರ್ಮರಾಜನು ಪಾದಗಳಿಗೆ ನಮಸ್ಕರಿಸುತ್ತ ಅಲ್ಲಿ ನೆರೆದಿದ್ದ ಪ್ರಜೆಗಳ ಕಡೆಗೆ ತಿರುಗಿ, “ನಮ್ಮ ಅಣ್ಣನು ದೊಡ್ಡ ವಿಜಯವನ್ನು ಸಂಪಾದಿಸಿದ್ದಾನೆ. ತಾವೆಲ್ಲರೂ ಆ ವಿಷಯವನ್ನು ಕೇಳಿದ ಮೇಲೆ ನನಗಿಂತ ಹೆಚ್ಚಿನ ಸಂತೋಷವನ್ನು ಪಡುವಿರಿ. ಹಾಗೆಯೇ ನಾವೆಲ್ಲರೂ ಅಣ್ಣನ ಸಂತೋಷದಲ್ಲಿ ಪಾಲ್ಗೊಳ್ಳೋಣ’ಎಂದನು.

ಅವನ ಮಾತುಗಳನ್ನು ಕೇಳಿ ಉಳಿದವರ ವಿಷಯ ಹಾಗಿರಲಿ, ಸ್ವತಃ ಧರ್ಮರಾಜನಿಗೆ ಈ ವಿಷಯ ಅರ್ಥವಾಗಲಿಲ್ಲ. ಈ ದಿನ ಆತನು ಅರಮನೆಯನ್ನು ಬಿಟ್ಟು ಹೊರಕ್ಕೇ ಹೋಗಿರಲಿಲ್ಲ. ಯಾರೊಡನೆಯೂ
ಯುದ್ಧ ಮಾಡಿರಲಿಲ್ಲ. ಅಂತಹುದರಲ್ಲಿ ವಿಜಯವನ್ನು ಸಂಪಾದಿಸುವುದಾದರೂ ಹೇಗೆ? ಹಾಗಾಗಿ ಅವನು ಆಶ್ಚರ್ಯದಿಂದ ಭೀಮಸೇನನ ಕಡೆಗೆ ತಿರುಗಿ ನೋಡುತ್ತ, “ಅರೆ! ಭೀಮಸೇನ ಇದೇನು. ಹೇಳುತ್ತಿರುವಿ? ನಾನಿಂದು ಅರಮನೆಯಿಂದ ಹೊರಕ್ಕೇ ಹೋಗಿಲ್ಲ. ಯಾವ ಯುದ್ಧದಲ್ಲೂ ಭಾಗವಹಿಸಿಲ್ಲ. ಅಂತಹುದರಲ್ಲಿ ಯಾವ ಜಯ? ಎಲ್ಲಿ ಸಂಪಾದಿಸಿರುವೆ? ನಿನಗೇನಾದರೂ ಕನಸು ಬಿದ್ದಿದೆಯಾ?’ ಎಂದು ಕೇಳಿದನು.

ಆಗ ಭೀಮಸೇನನು ನಗುತ್ತ, “ಪ್ರಭು, ಇಂದು ಬ್ರಾಹ್ಮಣನೋರ್ವನು ತಮ್ಮ ಬಳಿಗೆ ಬಂದು ಯಾವುದೋ ಒಂದು ವಸ್ತುವನ್ನು ಕೇಳಿದಾಗ ಆ ವಸ್ತು ತಮ್ಮ ಬಳಿ ಇಲ್ಲವೆಂದೂ ನಾಳೆಯ ದಿನ ತರಿಸಿ
ಕೊಡುವುದಾಗಿಯೂ ತಿಳಿಸಿದರಂತೆ. ಅಂದರೆ ನಾಳೆಯ ದಿನದ ತನಕ ತಾವು ಬದುಕಿರುವುದಾಗಿಯೂ ಹಾಗೂ ಆ ಬ್ರಾಹ್ಮಣನೂ ಬದುಕಿ ಉಳಿಯುವುದರ ಬಗ್ಗೆ ತಮಗೆ ಖಾತ್ರಿ ಇದೆ ಎಂದಂತಾಯಿತು. ಆದರೆ ಹುಟ್ಟು ಸಾವಿನ ಬಗ್ಗೆ ಯಾರಿಗೂ ಖಾತ್ರಿಯಾಗಿ ಹೇಳಲಾಗುವುದಿಲ್ಲ. ಆದರೆ ತಾವು ಹೇಳುತ್ತಿರುವಿರಿ ಎಂದರೆ ತಾವು ಜಯಿಸಲಸಾಧ್ಯವಾದ ಸಾವನ್ನೂ ಜಯಸಿರುವಿರಿ ಎಂದರ್ಥವಲ್ಲವೇ? ಹಾಗಾಗಿ ಇದೊಂದು ಭಾರೀ ವಿಜಯವಲ್ಲವೇ?’ ಎಂದು ಕೇಳಿದನು.

ಭೀಮಸೇನನ ಮಾತುಗಳನ್ನು ಕೇಳಿದಾಗ ಧರ್ಮರಾಜನಿಗೆ ತನ್ನ ತಪ್ಪಿನ ಅರಿವಾಯಿತು. ತನ್ನ ತಮ್ಮನನ್ನು ಪ್ರೀತಿಯಿಂದ ತಬ್ಬಿಕೊಳ್ಳುತ್ತ, `ಭೀಮಸೇನ, ನಿಜ ನಿಜ ನೀನು ಹೇಳುತ್ತಿರುವುದು ನಿಜ.
ನೀನು ಸರಿಯಾದ ಸಮಯದಲ್ಲಿ ನನ್ನ ಕಣ್ಣುಗಳನ್ನು ತೆರೆಸಿದ್ದೀಯ. ಹುಟ್ಟು ಸಾವಿನ ಬಗ್ಗೆ ಯಾರೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಹಾಗಾಗಿ ನಾಳೆ ಮಾಡುವುದನ್ನು ಇಂದೇ ಮಾಡಬೇಕು. ಇಂದು ಮಾಡುವುದನ್ನು ಈಗಲೇ ಮಾಡಬೇಕು ಬ್ರಾಹ್ಮಣದಾನ ಕೇಳಿದಾಗ ನಾನು ಅಲ್ಲೇ ನೀಡಬೇಕಿತ್ತು. ಆ ರೀತಿಯಲ್ಲಿ ಹಾಗೇ ಬರಿಗೈಯಲ್ಲಿ ಕಳಿಸಬಾರದಾಗಿತ್ತು. ಒಳ್ಳೆಯ ಕೆಲಸಗಳನ್ನು ಮಾಡುವಾಗ ತಕ್ಷಣವೇ ಮಾಡಬೇಕು. ಅದನ್ನು ಎಂದಿಗೂ ಮುಂದಕ್ಕೆ ಹಾಕಬಾರದು’ ಎಂದನು.

ಮುಂದೆ ತಡ ಮಾಡದೆ ಊರಿಗೆ ಹೊರಡಲು ತಯಾರಾಗಿದ್ದ ಆ ಬ್ರಾಹ್ಮಣನನ್ನು ತಕ್ಷಣವೇ ಕರೆಸಿ, ಅವನನ್ನು ಸತ್ಕರಿಸಿ, ಅವನು ಕೇಳಿದ ಎಲ್ಲಾ ವಸ್ತುವನ್ನು ಅಂದೇ ಕೊಟ್ಟು ಕಳುಹಿಸಿದನು.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!