There is confidence in the Prime Minister's words; DCM D.K. Shivakumar

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ; ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ: ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬೆಂಗಳೂರು: “ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಛೇಡಿಸಿದರು.

ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

“ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ” ಎಂದರು.

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ

“ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ‌ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ” ಎಂದರು.

“ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ‌ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ” ಎಂದು ಹೇಳಿದರು.

ನೋಟಿಸ್ ನೀಡಲು ಅವರು ಯಾರು

ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ‌. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ” ಎಂದು ಖಡಕ್ಕಾಗಿ ಉತ್ತರಿಸಿದರು.

ರಾಜಕೀಯ

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ- ಜೆಡಿಎಸ್ ಪ್ರತಿಭಟನೆ

ಸಿಎಂ, ಡಿಸಿಎಂ, ಸಚಿವ ಸಂಪುಟ ಮತ್ತು ಈ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112450"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!