Stupid friends..!

ಹರಿತಲೇಖನಿ ದಿನಕ್ಕೊಂದು ಕಥೆ: ಅವಿವೇಕಿ ಗೆಳೆಯರು..!

Harithalekhani: ಹಳ್ಳಿಯೊಂದರಲ್ಲಿ ನಾಲ್ವರು ಸ್ನೇಹಿತರಿದ್ದರು (Friends). ಒಬ್ಬರನ್ನು ಬಿಟ್ಟು ಮತ್ತೊಬ್ಬರಿರುತ್ತಿರಲಿಲ್ಲ. ಈ ನಾಲ್ವರ ಪೈಕಿ ಮೂವರು ತುಂಬಾ ಬುದ್ಧಿವಂತರು. ನಾನಾ ವಿದ್ಯೆಗಳಲ್ಲಿ ನಿಪುಣರು. ಆದರೆ ಅವರಲ್ಲಿ ಸಾಮಾನ್ಯ ಜ್ಞಾನ, ವಿವೇಕ ಇರಲಿಲ್ಲ.

ಮತ್ತೊಬ್ಬ ಸ್ನೇಹಿತ ಅವರಂತಿರಲಿಲ್ಲ. ಅವನ ಹೆಸರು ಸುಬುದ್ದಿ. ಹೆಸರು ಸುಬುದ್ಧಿಯಾದರೂ ಆತನಿಗೆ ಸರಸ್ವತಿ ಮಾತ್ರ ಒಲಿದಿರಲಿಲ್ಲ. ಆದರೆ ಅವನಿಗೆ ಸಾಮಾನ್ಯ ತಿಳಿವಳಿಕೆ, ಲೋಕಜ್ಞಾನ ಉಳಿದವರಿಗಿಂತ ಚೆನ್ನಾಗಿತ್ತು.

ಸ್ನೇಹಿತರ ವಿದ್ಯಾಭ್ಯಾಸ ಮುಗಿಯಿತು. ಮುಂದೆ ಮಾಡುವುದೇನು? ಸುಮ್ಮನಿದ್ದರೆ ಕಲಿತ ವಿದ್ಯೆಗೆ ಬೆಲೆ ಇರುವುದಿಲ್ಲ. ನಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಬೇಕಾದರೆ ಹಣ ಸಂಪಾದಿಸಬೇಕು; ಕೆಲಸ ಮಾಡದೇ ಹಣ ದಕ್ಕುವುದಿಲ್ಲ; ಇಲ್ಲೇ ಕೂತರೆ ಕೆಲಸ ಸಿಗುವುದಿಲ್ಲ-ಎಂದು ತಿಳಿದ ‘ವಿದ್ಯಾವಂತ’ರೆನ್ನಿಸಿಕೊಂಡ ಗೆಳೆಯರು, ಹಳ್ಳಿಯಿಂದ ಪಟ್ಟಣಕ್ಕೆ ತೆರಳಲು ನಿರ್ಧರಿಸಿದರು.

ಹಾಗಾದರೆ ವಿದ್ಯೆ ಒಲಿಯದ ಸ್ನೇಹಿತನನ್ನು ಏನು ಮಾಡುವುದು? ಆತ ತಮ್ಮಷ್ಟು ಬುದ್ದಿವಂತನಲ್ಲ. ಪುಸ್ತಕದ ತಿಳಿವಳಿಕೆಯೂ ಇಲ್ಲ. ಹಾಗಂತ ಅವನನ್ನು ಹಳ್ಳಿಯಲ್ಲಿ ಬಿಟ್ಟು ಹೋಗುವಂತೆಯೂ ಇಲ್ಲ. ಸರಿ ಏನಾದರಾಗಲಿ ಅವನನ್ನೂ ತಮ್ಮೊಟ್ಟಿಗೆ ಕರೆದುಕೊಂಡು ಹೋಗುವ ತೀರ್ಮಾನಕ್ಕೆ ಬಂದರು ಆ ಗೆಳೆಯರು.

ಗೆಳೆಯರೆಲ್ಲ ಒಟ್ಟಾಗಿ ಸಾಗಿದರು. ಒಂದು ದಟ್ಟವಾದ ಅರಣ್ಯ ಎದುರಾಯಿತು. ಅರಣ್ಯದೊಳಗೆ ಅವರಿಗೆ ಮೂಳೆಯ ರಾಶಿಯೊಂದು ಕಾಣಿಸಿತು. ‘ಅರೇ! ಇದೇನಿದು, ಬರೀ ಮೂಳೆಯ ರಾಶಿಯಿದೆಯಲ್ಲಾ!’ ಎಂದು ಅಚ್ಚರಿಪಟ್ಟರು.

ನಾವು ಕಲಿತಿರುವೆ ವಿದ್ಯೆ ಸಾರ್ಥಕವಾಗಬೇಕಾದರೆ ಬಿದ್ದಿರುವ ಮೂಳೆಗಳನ್ನೆಲ್ಲಾ ಸಂಗ್ರಹಿಸಿ ಅದು ಯಾವ ಪ್ರಾಣಿಯದೆಂದು ಪತ್ತೆಮಾಡಬೇಕು. ಆವಾಗಲೇ ನಾವು ಕಲಿತಿದ್ದಕ್ಕೂ ಸಾರ್ಥಕ ಎಂದು ಚರ್ಚಿಸಿ ಮೂಳೆಯ ಸಂಗ್ರಹಕ್ಕೆ ಮುಂದಾದರು.

‘ನಾನು ನನ್ನಲ್ಲಿರುವ ಬುದ್ಧಿಶಕ್ತಿಯನ್ನು ಉಪಯೋಗಿಸಿ ಇದರ ಅಸ್ಥಿಪಂಜರವನ್ನು ಜೋಡಿಸುತ್ತೇನೆ’ ಎಂದ ಮೊದಲನೇ ಸ್ನೇಹಿತ. ಆತ ಮಂತ್ರ ಹೇಳುತ್ತ ಮೂಳೆಗಳನ್ನೆಲ್ಲಾ ಒಟ್ಟುಗೂಡಿಸಿ ಅದಕ್ಕೆ ಅಸ್ಥಿಪಂಜರದ ರೂಪಕೊಟ್ಟ.

ಮತ್ತೊಬ್ಬ ಸ್ನೇಹಿತನೂ ಮಂತ್ರ ಹೇಳುತ್ತ, ಆ ಅಸ್ತಿಪಂಜರವನ್ನು ಸ್ಪರ್ಶಿಸಿದಾಗ ಅದಕ್ಕೆ ರಕ್ತ, ಮಾಂಸಗಳು ಸೇರಿಕೊಂಡು ರೂಪ ಬರತೊಡಗಿತು. ನೋಡು-ನೋಡುತ್ತಗಲೇ ಅದು ಜೀವವಿರದ ಸಿಂಹದಂತೆ ಕಂಡುಬಂದಿತು.

ಈಗ ಮೂರನೇ ಸ್ನೇಹಿತನ ಸರದಿ. ‘ನೋಡುತ್ತೀರಿ, ಅದಕ್ಕೆ ಹೇಗೆ ಜೀವ ಬರುವಂತೆ ಮಾಡುತ್ತೀನಿ’ ಎಂದು ಮಂತ್ರ ಹೇಳಲು ಆತ ಮುಂದಾದಾಗ, ಅಲ್ಲೇ ಇದ್ದ ನಾಲ್ಕನೇ ಸ್ನೇಹಿತ ‘ಏ ಬೇಡ ಕಣೋ, ಇದು ಸಿಂಹದಂತೆ ಕಾಣುತ್ತಿದೆ. ಇದಕ್ಕೇನಾದರೂ ಜೀವ ಬಂದರೆ, ನಾವ್ಯಾರೂ ಉಳಿಯುವುದಿಲ್ಲ. ಇದನ್ನು ಇಲ್ಲಿಗೇ ಬಿಟ್ಟುಬಿಡಿ’ ಎಂದ. ಇದನ್ನು ಕೇಳಲು ತಯಾರಿಸಲಿಲ್ಲ ಆ ಸ್ನೇಹಿತ ‘ಏ ಸುಮ್ಮನಿರೋ ಪೆದ್ದ. ನಿನಗೇನು ಗೊತ್ತು, ನಿನಗೇನಾದರೂ ವಿಜ್ಞಾನ ಗೊತ್ತಿದೆಯಾ?’ ಎಂದು ಜೋರು ಮಾಡಿ ಸುಮ್ಮನಾಗಿಸಿದ.

‘ಸರಿ ನಿಮ್ಮಿಷ್ಟ’ ಎನ್ನುತ್ತಾ ನಾಲ್ಕನೆಯವನು ಸುಮ್ಮನಾದ. ಅದರೆ, ಮೂರನೆಯವನು ಮಂತ್ರ ಉಚ್ಚರಿಸುವ ಮೊದಲೇ ಪಕ್ಕದಲ್ಲಿ ಇದ್ದ ಮರವೇರಿ ಸುರಕ್ಷಿತವಾಗಿ ಕುಳಿತುಕೊಂಡುಬಿಟ್ಟ. ಇದನ್ನು ಕಾಣುತ್ತಲೇ ಗಹಗಹಿಸಿ ನಗುತ್ತಾ ಆತನನ್ನು ಉಳಿದ ಮೂವರೂ ಅಪಹಾಸ್ಯ ಮಾಡಿದರು.

ಮೂರನೆಯವನು ಪಟಪಟನೆ ಮಂತ್ರ ಹೇಳುತ್ತಲೇ ಸಿಂಹಕ್ಕೆ ಜೀವ ಬಂತು. ತಕ್ಷಣ ಸಿಂಹವು ಆ ಮೂವರ ಮೇಲೂ ಆಕ್ರಮಣ ಮಾಡಿತು. ಅವರೆಲ್ಲ ಸಿಂಹಕ್ಕೆ ಬಲಿಯಾದರು.

ಈ ಎಲ್ಲವನ್ನೂ ಮರದ ಮೇಲಿಂದ ವೀಕ್ಷಿಸುತ್ತಿದ್ದ ಸುಬದ್ದಿಗೆ ದುಃಖವಾಯಿತು. ಎಷ್ಟು ಹೇಳಿದರೂ ಅನ್ಯಾಯವಾಗಿ ತನ್ನ ಸ್ನೇಹಿತರು ಪ್ರಾಣ ಕಳೆದುಕೊಂಡರಲ್ಲಾ ಎಂದು ಮರುಕಪಟ್ಟ.

ಸಿಂಹ ಹೊರಟುಹೋದ ಸ್ವಲ್ಪ ಹೊತ್ತಿನ ನಂತರ ಮರದ ಮೇಲಿಂದ ಇಳಿದು ತನ್ನ ಹಳ್ಳಿಗೆ ಹಿಂತಿರುಗಿದ.

ಕೃಪೆ: ಕೆ.ಮುರಳಿ, ಮಕ್ಕಳಿಗಾಗಿ ನೂರಾರು ಕಥೆಗಳು, ಕೃಷಿವಿಕಾಸ್ ಪಬ್ಲಿಕೇಷನ್ಸ್, ಬೆಂಗಳೂರು.

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!