K.N. Rajanna out of the cabinet

ರಾಜಣ್ಣ ವಜಾ; ಪೆಟ್ರೋಲ್ ಸುರಿದುಕೊಂಡು ಅಭಿಮಾನಿ ಆತ್ಮಾಹುತಿಗೆ ಯತ್ನ.!

ಮಧುಗಿರಿ: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ (K.N. Rajanna) ಅವರನ್ನು ವಜಾ ಮಾಡಿರುವುದನ್ನಜ ವಿರೋಧಿಸಿ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಮಧುಗಿರಿಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆ ವೇಳೆ ಅಭಿಮಾನಿ ಯುವಕನೋರ್ವ ಪೆಟ್ರೋಲ್ ಸುರಿದು ಕೊಂಡು ಸಾರ್ವಜನಿಕವಾಗಿ ಆತ್ಮಾಹುತಿಗೆ ಯತ್ನಿಸಿದ ಘಟನೆಯೂ ನಡೆದಿದೆ.

ಕೆ.ಎನ್ ರಾಜಣ್ಣ ಅವರಿಂದ ವಜಾ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಯುವಕನೊಬ್ಬ ತನ್ನ ಬಳಿಯಿದ್ದ 2 ಲೀಟರ್ ಕ್ಯಾನ್ ನಿಂದ ಪೆಟ್ರೋಲ್ ತೆಗೆದುಕೊಂಡು ತಲೆಯ ಮೇಲೆ ಸುರಿದುಕೊಳ್ಳಲು ಯತ್ನಿಸಿದ.

ಕೂಡಲೇ ಸ್ಥಳದಲ್ಲಿದ್ದವರು ಆತನ ಕೈಯಿಂದ ಬಾಟಲ್ ಕಿತ್ತುಕೊಂಡು ಅನಾಹುತವನ್ನು ತಪ್ಪಿಸಿದ್ದಾರೆ. ಅಲ್ಲದೇ ಕೂಡಲೇ ಆತನನ್ನು ಸ್ಥಳದಿಂದ ಹೊರಗೆ ಕರೆದೊಯ್ಯಲಾಯಿತು.

ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿರುವ ಕೆ.ಎನ್ ರಾಜಣ್ಣ ಅಭಿಮಾನಿಗಳು ಹಲವೆಡೆ ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ, ರಾಜಣ್ಣ ಅವರ ಫೋಟೋ ಹಿಡಿದು ಬಸ್ ಕೆಳಗೆ ಮಲಗಿ ಪ್ರತಿಭಟನೆ ನಡೆಸಿದರು. ರಸ್ತೆಯುದ್ದಕ್ಕೂ ರಾಜಣ್ಣ ಭಾವಚಿತ್ರ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಂಗಡಿ ಬಂದ್ ಮಾಡದಿದ್ದಕ್ಕೆ ಬೆಂಬಲಿಗರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ರಸ್ತೆಯಲ್ಲಿದ್ದ ಬಟ್ಟೆ ಅಂಗಡಿಯ ಗೊಂಬೆಗಳನ್ನ ಒಡೆದುಹಾಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಧುಗಿರಿಯಲ್ಲಿ ಇಂದು ಹಲವೆಡೆ ರಸ್ತೆ ತಡೆ, ಪ್ರತಿಭಟನೆ ನಡೆಸಲಾಗುತ್ತಿದ್ದು ಕೆ.ಎನ್. ರಾಜಣ್ಣ ಅವರ ರಾಜೀನಾಮೆ ಹಿಂಪಡೆದು ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕಾಂಗ್ರೆಸ್ (Congress) ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ಮಹತ್ವದ ನಿರ್ಧಾರದ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿ ಮಧುಗಿರಿಯ ಬಳಿ ಹೆದ್ದಾರಿಯ ಮೇಲೆ ಮಲಗಿ ಅಭಿಮಾನಿಗಳು ರಸ್ತೆ ಪ್ರತಿಭಟನೆ ನಡೆಸಿದರು. ಹೈಕಮಾಂಡ್ ನಿರ್ಧಾರಕ್ಕೆ ರಾಜಣ್ಣ ಅಭಿಮಾನಿಗಳ ತಿರುಗೇಟು ನೀಡಲು ನಿರ್ಧರಿಸಿದ್ದು, ಮಧುಗಿರಿ ಪಟ್ಟಣದಲ್ಲಿ ರಾಜಣ್ಣ ಬೆಂಬಲಿಗರು ಮೆರವಣಿಗೆ, ಜಾಥಾ, ರಸ್ತೆತಡೆಗಳಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.

ವಾಲ್ಮೀಕಿ ಕ್ರಾಂತಿ ಸೇನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ ಅವರ ಅಭಿಮಾನಿಗಳು, ರಾಜಣ್ಣ ನೇರ ನುಡಿ ವ್ಯಕ್ತಿತ್ವವುಳ್ಳವರು. ಅವರು ಮಾತನಾಡಿರುವುದು ಸರಿಯಾಗಿದೆ. ಅವರ ರಾಜಿನಾಮೆ ಕ್ರಮ ಸರಿಯಲ್ಲ. ರಾಜೀನಾಮೆಯನ್ನು ಹೈಕಮಾಂಡ್ ವಾಪಸು ಪಡೆಯಬೇಕು. ರಾಜಣ್ಣ ಜಾತ್ಯಾತೀತ ನಾಯಕ. ಅವರ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಂಡ ನಿರ್ಧಾರ ಸರಿಯಲ್ಲ. ಈ ಕೂಡಲೇ ಅವರ ರಾಜೀನಾಮೆ ವಾಪಸು ಪಡೆಯುವಂತೆ ಆಗ್ರಹ ಮಾಡಿದರು.

ನಾವು ಕಾಂಗ್ರೆಸ್ ನೋಡಿ ಮತ ಹಾಕಿಲ್ಲ. ರಾಜಣ್ಣ ಅವರನ್ನು ನೋಡಿ ಮತ ಹಾಕಿದ್ದೇವೆ. ಅವರಿಗೋಸ್ಕರ ಕಾಂಗ್ರೆಸ್ ಸಂಘಟನೆ ಮಾಡಿದ್ದೇವೆ ಎಂದು ಆಕ್ರೋಶ ಹೊರಹಾಕಿದರು.

ರಾಜಣ್ಣ ಅವರ ರಾಜಿನಾಮೆ ಹಿಂದೆ ಕಾಣದ ಕೈಗಳ ಕೈವಾಡವಿದೆ. ಅದೆಲ್ಲಾ ಮುಂದಿನ ದಿನಗಳಲ್ಲಿ ಬಯಲಾಗಲಿದೆ. ಇಡೀ ಕಾಂಗ್ರೆಸ್ ಪಕ್ಷಕ್ಕೆ ರಾಜಣ್ಣ ಅವರ ರಾಜಿನಾಮೆ ದೊಡ್ಡ ಪೆಟ್ಟು ಇದ್ದಂತೆ. ರಾಜಣ್ಣ ಅವರ ರಾಜಿನಾಮೆ ವಾಪಸು ಪಡೆಯದಿದ್ದಲ್ಲಿ ಇಡೀ ರಾಜ್ಯಾದ್ಯಂತ ಉಗ್ರಹೋರಾಟ ಮಾಡಲಾಗುವುದು ಎಂದು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!