ರಾಜಣ್ಣ ವಜಾ; ಪೆಟ್ರೋಲ್ ಸುರಿದುಕೊಂಡು ಅಭಿಮಾನಿ ಆತ್ಮಾಹುತಿಗೆ ಯತ್ನ.!

K.N. Rajanna out of the cabinet

ಮಧುಗಿರಿ: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ (K.N. Rajanna) ಅವರನ್ನು ವಜಾ ಮಾಡಿರುವುದನ್ನಜ ವಿರೋಧಿಸಿ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಮಧುಗಿರಿಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿಭಟನೆ ವೇಳೆ ಅಭಿಮಾನಿ ಯುವಕನೋರ್ವ ಪೆಟ್ರೋಲ್ ಸುರಿದು ಕೊಂಡು ಸಾರ್ವಜನಿಕವಾಗಿ ಆತ್ಮಾಹುತಿಗೆ ಯತ್ನಿಸಿದ ಘಟನೆಯೂ ನಡೆದಿದೆ.

ಕೆ.ಎನ್ ರಾಜಣ್ಣ ಅವರಿಂದ ವಜಾ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ಯುವಕನೊಬ್ಬ ತನ್ನ ಬಳಿಯಿದ್ದ 2 ಲೀಟರ್ ಕ್ಯಾನ್ ನಿಂದ ಪೆಟ್ರೋಲ್ ತೆಗೆದುಕೊಂಡು ತಲೆಯ ಮೇಲೆ ಸುರಿದುಕೊಳ್ಳಲು ಯತ್ನಿಸಿದ.

ರಾಜಣ್ಣ ವಜಾ; ಪೆಟ್ರೋಲ್ ಸುರಿದುಕೊಂಡು ಅಭಿಮಾನಿ ಆತ್ಮಾಹುತಿಗೆ ಯತ್ನ.!

ಕೂಡಲೇ ಸ್ಥಳದಲ್ಲಿದ್ದವರು ಆತನ ಕೈಯಿಂದ ಬಾಟಲ್ ಕಿತ್ತುಕೊಂಡು ಅನಾಹುತವನ್ನು ತಪ್ಪಿಸಿದ್ದಾರೆ. ಅಲ್ಲದೇ ಕೂಡಲೇ ಆತನನ್ನು ಸ್ಥಳದಿಂದ ಹೊರಗೆ ಕರೆದೊಯ್ಯಲಾಯಿತು.

ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿರುವ ಕೆ.ಎನ್ ರಾಜಣ್ಣ ಅಭಿಮಾನಿಗಳು ಹಲವೆಡೆ ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ. ಅಲ್ಲದೇ, ರಾಜಣ್ಣ ಅವರ ಫೋಟೋ ಹಿಡಿದು ಬಸ್ ಕೆಳಗೆ ಮಲಗಿ ಪ್ರತಿಭಟನೆ ನಡೆಸಿದರು. ರಸ್ತೆಯುದ್ದಕ್ಕೂ ರಾಜಣ್ಣ ಭಾವಚಿತ್ರ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಂಗಡಿ ಬಂದ್ ಮಾಡದಿದ್ದಕ್ಕೆ ಬೆಂಬಲಿಗರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ರಸ್ತೆಯಲ್ಲಿದ್ದ ಬಟ್ಟೆ ಅಂಗಡಿಯ ಗೊಂಬೆಗಳನ್ನ ಒಡೆದುಹಾಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಧುಗಿರಿಯಲ್ಲಿ ಇಂದು ಹಲವೆಡೆ ರಸ್ತೆ ತಡೆ, ಪ್ರತಿಭಟನೆ ನಡೆಸಲಾಗುತ್ತಿದ್ದು ಕೆ.ಎನ್. ರಾಜಣ್ಣ ಅವರ ರಾಜೀನಾಮೆ ಹಿಂಪಡೆದು ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಕಾಂಗ್ರೆಸ್ (Congress) ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ಮಹತ್ವದ ನಿರ್ಧಾರದ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿ ಮಧುಗಿರಿಯ ಬಳಿ ಹೆದ್ದಾರಿಯ ಮೇಲೆ ಮಲಗಿ ಅಭಿಮಾನಿಗಳು ರಸ್ತೆ ಪ್ರತಿಭಟನೆ ನಡೆಸಿದರು. ಹೈಕಮಾಂಡ್ ನಿರ್ಧಾರಕ್ಕೆ ರಾಜಣ್ಣ ಅಭಿಮಾನಿಗಳ ತಿರುಗೇಟು ನೀಡಲು ನಿರ್ಧರಿಸಿದ್ದು, ಮಧುಗಿರಿ ಪಟ್ಟಣದಲ್ಲಿ ರಾಜಣ್ಣ ಬೆಂಬಲಿಗರು ಮೆರವಣಿಗೆ, ಜಾಥಾ, ರಸ್ತೆತಡೆಗಳಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.

ವಾಲ್ಮೀಕಿ ಕ್ರಾಂತಿ ಸೇನೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಜಣ್ಣ ಅವರ ಅಭಿಮಾನಿಗಳು, ರಾಜಣ್ಣ ನೇರ ನುಡಿ ವ್ಯಕ್ತಿತ್ವವುಳ್ಳವರು. ಅವರು ಮಾತನಾಡಿರುವುದು ಸರಿಯಾಗಿದೆ. ಅವರ ರಾಜಿನಾಮೆ ಕ್ರಮ ಸರಿಯಲ್ಲ. ರಾಜೀನಾಮೆಯನ್ನು ಹೈಕಮಾಂಡ್ ವಾಪಸು ಪಡೆಯಬೇಕು. ರಾಜಣ್ಣ ಜಾತ್ಯಾತೀತ ನಾಯಕ. ಅವರ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಂಡ ನಿರ್ಧಾರ ಸರಿಯಲ್ಲ. ಈ ಕೂಡಲೇ ಅವರ ರಾಜೀನಾಮೆ ವಾಪಸು ಪಡೆಯುವಂತೆ ಆಗ್ರಹ ಮಾಡಿದರು.

ನಾವು ಕಾಂಗ್ರೆಸ್ ನೋಡಿ ಮತ ಹಾಕಿಲ್ಲ. ರಾಜಣ್ಣ ಅವರನ್ನು ನೋಡಿ ಮತ ಹಾಕಿದ್ದೇವೆ. ಅವರಿಗೋಸ್ಕರ ಕಾಂಗ್ರೆಸ್ ಸಂಘಟನೆ ಮಾಡಿದ್ದೇವೆ ಎಂದು ಆಕ್ರೋಶ ಹೊರಹಾಕಿದರು.

ರಾಜಣ್ಣ ಅವರ ರಾಜಿನಾಮೆ ಹಿಂದೆ ಕಾಣದ ಕೈಗಳ ಕೈವಾಡವಿದೆ. ಅದೆಲ್ಲಾ ಮುಂದಿನ ದಿನಗಳಲ್ಲಿ ಬಯಲಾಗಲಿದೆ. ಇಡೀ ಕಾಂಗ್ರೆಸ್ ಪಕ್ಷಕ್ಕೆ ರಾಜಣ್ಣ ಅವರ ರಾಜಿನಾಮೆ ದೊಡ್ಡ ಪೆಟ್ಟು ಇದ್ದಂತೆ. ರಾಜಣ್ಣ ಅವರ ರಾಜಿನಾಮೆ ವಾಪಸು ಪಡೆಯದಿದ್ದಲ್ಲಿ ಇಡೀ ರಾಜ್ಯಾದ್ಯಂತ ಉಗ್ರಹೋರಾಟ ಮಾಡಲಾಗುವುದು ಎಂದು ಅಭಿಮಾನಿಗಳು ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]