ಧರ್ಮಸ್ಥಳ ಬಿಜೆಪಿಯವರ ಮನೆ ಆಸ್ತಿಯಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Dharmasthala is not BJP's house property: DCM D.K. Shivakumar

ಬೆಂಗಳೂರು: “ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಹಾಗೂ ದುರ್ಬಲಗೊಂಡಿರುವ ಕಟ್ಟಡಗಳನ್ನು ಮೊದಲು ಭದ್ರಗೊಳಿಸುವ ಕೆಲಸವಾಗಬೇಕು. ಇಂತಹ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಧರ್ಮರಾಯಸ್ವಾಮಿ ದೇವಾಲಯದ ಬಳಿಯ ನಗರ್ತಪೇಟೆಯಲ್ಲಿ ಬೆಂಕಿ ಅವಘಡದಿಂದ ಹಾನಿಗೊಳಗಾದ ಸ್ಥಳಕ್ಕೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ನಂತರ ಘಟನಾ ಸ್ಥಳ ಹಾಗೂ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಎರಡು, ಮೂರು ಮಹಡಿಗಳನ್ನು ಕಟ್ಟುವ ಕಡೆಗಳಲ್ಲಿ ಎಂಟತ್ತು ಮಹಡಿಗಳನ್ನು ನಿರ್ಮಾಣ ಮಾಡಲಾಗಿದೆ. ಹಲವಾರು ಕಟ್ಟಡಗಳು ವಾಸಕ್ಕೆ ಯೋಗ್ಯವಿಲ್ಲದಂತಾಗಿವೆ. ಇಂತಹ ಕಟ್ಟಡಗಳನ್ನು ಹೊಡೆದು ಹಾಕುವುದು ನಂತರದ ವಿಚಾರ. ಇದರ ಬಗ್ಗೆ ಮೊದಲು ಸಮೀಕ್ಷೆ ನಡೆಸಲಾಗುವುದು.‌ ಇದು ಒಂದೇ ದಿನಕ್ಕೆ ಮುಗಿಯುವ ಕೆಲಸವಲ್ಲ. ವರ್ಷಗಟ್ಟಲೆ ಹಿಡಿಯುತ್ತದೆ. ದೆಹಲಿ, ಮುಂಬೈನಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ. ಒಳಗೆ ಬಂದು ನೋಡಿದಾಗ ನನಗೆ ಗಾಬರಿಯಾಯಿತು. ಇಂತಹ ಇಕ್ಕಟ್ಟಿನ ಜಾಗದಲ್ಲಿ ಬೆಂಕಿ ಅವಘಡ ನಡೆದರೆ ಜನ ಓಡಿ ಹೋಗುತ್ತಾರೆ, ಆಗ ಕಾಲ್ತುಳಿತ ಉಂಟಾಗಿಯೇ ಜನ ಸಾಯುತ್ತಾರೆ” ಎಂದರು.

ಮೃತರಿಗೆ ತಲಾ ಐದು ಲಕ್ಷ ಪರಿಹಾರ

“ನಿರ್ಲಕ್ಷ್ಯ ವಹಿಸಿರುವ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.‌ ಅವಘಡ ನಡೆದ ಕಟ್ಟಡದ ಮಾಲೀಕರನ್ನೂ ಸಹ ಬಂಧಿಸಲಾಗಿದೆ. ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅವಘಡದಲ್ಲಿ ಮೃತಪಟ್ಟ ಪ್ರತಿ ವ್ಯಕ್ತಿಗಳ ಕುಟುಂಬಸ್ಥರಿಗೆ ರೂ. 5 ಲಕ್ಷ ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ” ಎಂದು ತಿಳಿಸಿದರು.

“ಕೂಡಲೇ ದುರ್ಬಲ ಕಟ್ಟಡಗಳನ್ನು ಕೆಡವಲು ಹೋಗುವುದಿಲ್ಲ. ಮಾಲೀಕರು ಕೂಡಲೇ ದುರಸ್ಥಿಗೆ ಒಳಪಡಿಸಬೇಕು. ಇಲ್ಲದಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಏಕೆಂದರೆ ದುರ್ಬಲಗೊಂಡಿರುವ ಕಟ್ಟಡಗಳು ಕುಸಿತವಾಗಿ ದೊಡ್ಡ ಸಮಸ್ಯೆ ಎದುರಾಗುವುದು ಬೇಡ. ಭವಿಷ್ಯದಲ್ಲಿ ಈ ರೀತಿಯಾಗಿ ಕಟ್ಟಡಗಳ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ” ಎಂದು ಹೇಳಿದರು.

ಶೇ.70 ರಷ್ಟು ಕಟ್ಟಡಗಳು ಅಕ್ರಮ

ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ಕೇಳಿದಾಗ, “ನಗರದಲ್ಲಿ ಶೇ.70 ರಷ್ಟು ಕಟ್ಟಡ ನಿರ್ಮಾಣ ಅಕ್ರಮವಾಗಿದೆ. ನೂತನ ಬಿಡಿಎ ಲೇಔಟ್ ಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಮಹಡಿ ನಿರ್ಮಾಣ ಮಾಡುತ್ತಿದ್ದಾರೆ. ಅದಕ್ಕೆ ಈಗ ಸುಪ್ರೀಂ ಕೋರ್ಟ್ ತೀರ್ಪು ವಾಸಯೋಗ್ಯ ಪ್ರಮಾಪತ್ರವಿಲ್ಲದೇ ನೀರು, ವಿದ್ಯುತ್ ಸಂಪರ್ಕ ನೀಡಬಾರದು ಎಂದು ಮಾರ್ಗದರ್ಶನ ನೀಡಿದೆ. ಈ ಕಾರಣಕ್ಕೆ 4 ಲಕ್ಷ ಸಂಪರ್ಕಗಳನ್ನು ನಿಲ್ಲಿಸಲಾಗಿದೆ. 30/40 ಅಳತೆಯ ಎರಡು ಮಹಡಿಯ ಕಟ್ಟಡಗಳಿಗೆ ವಿನಾಯಿತಿ ನೀಡಬೇಕು ಎನ್ನುವ ವಿಚಾರವನ್ನು ಕ್ಯಾಬಿನೆಟ್ ಮುಂದೆ ತರಲಾಗುವುದು. ಸಂಪುಟ ಸಹೋದ್ಯೋಗಿಗಳು ಏನು ಹೇಳುತ್ತಾರೊ ನೋಡೋಣ” ಎಂದರು.

ಚಿಕ್ಕಪೇಟೆ, ನಗರ್ತಪೇಟೆ ಇವುಗಳು ಹೆಸರಿಗೆ ವಾಸಸ್ಥಳಗಳು, ಆದರೆ ವ್ಯಾಪಾರಿ ಕೇಂದ್ರಗಳಾಗಿ ಬದಲಾಗಿವೆ ಎಂದು ಕೇಳಿದಾಗ, “ಜನರ ಬಡತನದ ಬದುಕು. ಅಗ್ನಿಶಾಮಕ ನಿಯಮದ ಪ್ರಕಾರ ಹೋದರೆ ಎಲ್ಲಾ ಕಟ್ಟಡಗಳನ್ನು ಒಡೆದು ಹಾಕಬೇಕಾಗುತ್ತದೆ” ಎಂದರು.

“ಅನೇಕ ಕಟ್ಟಡಗಳ ಮೇಲ್ಬಾಗಕ್ಕೆ ಹತ್ತಲು ಸಹ ಆಗುತ್ತಿಲ್ಲ. ಶಾರ್ಟ್ ಸರ್ಕೀಟ್ ಆದ ಕಾರಣಕ್ಕೆ ಬೆಂಕಿ ಹೊತ್ತುಕೊಂಡು ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ರಾಜಸ್ಥಾನ ಮೂಲದವರು.‌ ಎಲ್ಲಿಯವರು ಆದರೇನು ಬದುಕು ಕಟ್ಟಿಕೊಳ್ಳಲು ಇಲ್ಲಿಗೆ ಬಂದಿದ್ದರು” ಎಂದರು.

“ಎರಡು ದಿನಗಳ ಹಿಂದೆ ಸಿಲಿಂಡರ್ ಸ್ಪೋಟಗೊಂಡು ಮನೆ ಹಾನಿಯಾಗಿದೆ, ಜನರ ಗಾಯಗೊಂಡಿದ್ದಾರೆ. ಬೆಂಕಿಗೆ ಸಿಲುಕಿ ಐದು ಮಂದಿ ಸತ್ತಿದ್ದಾರೆ. ಬಾಡಿಗೆಗಾಗಿ ಹೀಗೆ ಕಟ್ಟಡಗಳನ್ನು ನಿರ್ಮಾಣ ಮಾಡಿರುವುದೇ ಇದೆಲ್ಲದಕ್ಕೂ ಕಾರಣ.‌‌ ಇದು ಸರಿಯಲ್ಲ” ಎಂದರು.

ಧರ್ಮಸ್ಥಳ ಬಿಜೆಪಿಯವರ ಮನೆ ಆಸ್ತಿಯಲ್ಲ

ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದು ರಾಜಕೀಯದ ಯಾತ್ರೆ. ಧರ್ಮದ ಯಾತ್ರೆಯಲ್ಲ.‌ ಧರ್ಮಸ್ಥಳ ಬಿಜೆಪಿಯವರ ಮನೆ ಆಸ್ತಿಯಲ್ಲ. ಸಾರ್ವಜನಿಕರ ಸ್ವತ್ತು” ಎಂದರು.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]