Home Minister's warning to YouTubers...celebration for some private channels

ಯೂಟ್ಯೂಬರ್‌ಗಳಿಗೆ ಗೃಹಸಚಿವರ ವಾರ್ನಿಂಗ್‌‌‌.. ಕೆಲ ಖಾಸಗಿ ಚಾನಲ್‌ಗಳಿಗೆ ಸಂಭ್ರಮ

ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ಯೂಟ್ಯೂಬರ್‌ಗಳಿಗೆ (YouTubers) ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳ‌ನ ನಿಲ್ಲಿಸುವಂತೆ ಸೂಚನೆ ನೀಡಿದ್ದು, ಮತ್ತೆ ಮುಂದವರಿಸಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಧರ್ಮಸ್ಥಳ ಕ್ಷೇತ್ರದ ಕುರಿತು ಯೂಟ್ಯೂಬರ‌್‌ಗಳು ಅವಹೇಳನ ಮಾಡಿದ್ದಾರೆ, ಅವರ ವಿರುದ್ಧ ಕ್ರಮ ಏಕಿಲ್ಲವೆಂದು ಬಿಜೆಪಿಯ ಶಾಸಕರು ಸದನದಲ್ಲಿ ನಿನ್ನೆ ಆಕ್ರೋಶ ವ್ಯಕ್ತಪಡಿಸಿದರು.

ಈ ಬೆನ್ನಲ್ಲೇ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಯೂಟ್ಯೂಬರ್‌ಗಳಿಗೆ ಕ್ಷೇತ್ರದ ಬಗ್ಗೆ ಅವಹೇಳ‌ನ ನಿಲ್ಲಿಸುವಂತೆ ಸೂಚನೆ ನೀಡಿದ್ದು, ಮತ್ತೆ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ಗೃಹಸಚಿವರ ಎಚ್ಚರಿಕೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಅದರಲ್ಲಿ ಪ್ರಮುಖವಾಗಿ ಚರ್ಚಿತ ವಿಚಾರ ಈ ರೀತಿಯಾಗಿದೆ.

ಸಾಮಾಜಿಕ ಜಾಲತಾಣ ಸಕ್ರಿಯವಾದಂತೆ ಪತ್ರಿಕೋದ್ಯಮವನ್ನು ಮಾರಾಟಕ್ಕಿಟ್ಟವರಿಗೆ ಸಿಕ್ಕಾಪಟ್ಟೆ ಆತಂಕ ಎದುರಾಗಿದೆ. ಏಕೆಂದರೆ ಯಾರದೋ ಹಂಗು, ಯಾರದೋ ಸ್ಪಾನ್ಸರ್, ಜಾಹೀರಾತು ಪಡೆದು ಅವರಿಗೆ ಪೂರಕವಾಗಿ ವರದಿ ಮಾಡಬೇಕಾದ ಅನಿರ್ವಾರ್ಯತೆಯಿಂದ ಸಾಮಾಜಿಕ ಜಾಲತಾಣ ಮುಕ್ತವಾಗಿದೆ.

ಆದರೆ ಇದು ಮಾಧ್ಯಮ ಎಂದರೆ ನಾವು ಮಾತ್ರ ಎಂದು 1970 ರ ನಿಯಮಕ್ಕೆ ಅಂಟಿಕೊಂಡಿರುವ, ಅದೇ ಕಾನೂನು ಎಂಬಂತೆ (ತಿದ್ದುಪಡಿ ಮಾಡಲು ಅವಕಾಶ ನೀಡದೆ ಷಡ್ಯಂತ್ರ ಎಂಬ ಆರೋಪ ಇದೆ) ವರ್ತಿಸುವವರಿಗೆ ಅಸಹಿನೀಯವಾಗಿದೆ.

ಏಕೆಂದರೆ ಡಿಜಿಟಲ್ ಯುಗದಲ್ಲಿ ದಿನ ಪತ್ರಿಕೆಗಳಿಗೆ ಪ್ರತಿಸ್ಪರ್ಧಿಯಾಗಿ ನ್ಯೂಸ್ ವೆಬ್ಸೈಟ್‌ಗಳು, ಖಾಸಗಿ ಚಾನಲ್ ಗಳಿಗೆ ಸ್ಪರ್ಧಿಯಾಗಿ ಯೂಟ್ಯೂಬ್ ಚಾನಲ್ಗಳು ಎದ್ದು ನಿಂತಿವೆ. ಇದು ನಮ್ಮದೇ ಸಾಮ್ರಾಜ್ಯ, ನಾವೇಳಿದ್ದೇ ಸುದ್ದಿ ಎಂಬಂತೆ ವರ್ತಿಸುತ್ತಿದ್ದವರಿಗೆ ತೀವ್ರ ಹಿನ್ನಡೆಗೂ ಕಾರಣವಾಗಿದೆ.

ಧರ್ಮಸ್ಥಳ ಪ್ರಕರಣದ ಕುರಿತು ಖಾಸಗಿ ನ್ಯೂಸ್ ಚಾನಲ್ ಗಳು ವರದಿ ಪ್ರಕಟಿಸದೆ ಇದ್ದಾಗ ಕೆಲ ಯೂಟ್ಯೂಬ್ ಚಾನಲ್‌ಗಳು ವರದಿ ಪ್ರಸಾರ ಮಾಡಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದೆ.

ಇದರ ನಡುವೆ ಕೆಲ ಕಾನೂನು ಪ್ರಕ್ರಿಯೆಯ ಅನಿರ್ವಾರ್ಯತೆಯಿಂದ ಖಾಸಗಿ ಚಾನಲ್‌ಗಳು ಕೂಡ ವರದಿ ಮಾಡಬೇಕಾದ ಅನಿವಾರ್ಯತೆ ಎದುರಾಯಿತು. ಆದರೆ ಧರ್ಮಸ್ಥಳ ಪ್ರಕರಣದ ಕುರಿತು ಪರ ಹಾಗೂ ವಿರುದ್ಧ ಯೂಟ್ಯೂಬರ್‌ಗಳು ಚರ್ಚೆ, ವರದಿ ಮಾಡುತ್ತಿದ್ದಾರೆ.

ಇತ್ತೀಚೆಗಷ್ಟೇ ಕೆಲ ಯೂಟ್ಯೂಬರ್ಗಳು ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನ ಮಾಡುತ್ತಿದ್ದಾರೆ ಎಂಬ ಆಕ್ರೋಶ ಕೂಡ ವ್ಯಾಪಕವಾಗಿದೆ. ಇದು ಗಲಾಟೆಗೂ ಕಾರಣವಾಗಿ, ಕೆಲವರು ಆಸ್ಪತ್ರೆಗೆ ಸೇರಿದ್ದರೆ ಮತ್ತೆ ಕೆಲವರ ವಿರುದ್ಧ ದೂರು ದಾಖಲಾಗಿದೆ.

ಇದರ ಬೆನ್ನಲ್ಲೇ ನಿನ್ನೆ ಸದನದಲ್ಲಿ ಗೃಹಸಚಿವರ ನಿಲುವು ಒಪ್ಪಲೇ ಬೇಕಾದ ವಿಷಯ. ಏಕೆಂದರೆ ಅಸಹನೀಯ, ಅಗೌರವ, ಅವಹೇಳನ ಮಾಡಿದ ಯಾವುದೇ ಮಾಧ್ಯಮಗಳ ವಿರುದ್ಧ ಕ್ರಮವಾಗಬೇಕು. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಖಾಸಗಿ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗುವ ಇದೇ ರೀತಿಯ ವರದಿಗಳ ಬಗ್ಗೆ ಕೂಡ ಇದೇ ನಿಯಮ ಪಾಲನೆ ಆಗಬೇಕೆಂಬ ಮಾತು ವ್ಯಾಪಕವಾಗಿದೆ.

ಖಾಸಗಿ ಚಾನಲ್‌ಗಳ ವಿರುದ್ಧ ಕ್ರಮಕ್ಕೆ ಮುಂದಾದರೆ ಪತ್ರಿಕಾ ಸ್ವಾತಂತ್ರ್ಯ ಹರಣ ಎಂದು ಕಿರುಚುವವರು, ಯೂಟ್ಯೂಬರ್‌ಗಳಿಗೆ ಎಚ್ಚರಿಕೆ ನೀಡಿದರೆ ಸಂಭ್ರಮಿಸುತ್ತಿದ್ದಾರೆ. ಈಗ ಅವರಿಗೆ ಪತ್ರಿಕಾ ಸ್ವಾತಂತ್ರ್ಯ ಕಾಣೆಯಾಗಿದೆಯೇ ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಇದಕ್ಕೆ ಉದಾಹರಣೆಯಾಗಿ ಒಂದು ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ನೀಡುವುದಕ್ಕೂ ಮುನ್ನವೇ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ವಿರುದ್ಧ ಕಿಲ್ಲಿಂಗ್ ಸ್ಟಾರ್ ಎಂದು ವರದಿ ಪ್ರಸಾರ, ಪತ್ರಿಕೆಗಳ ವರದಿ ಕುರಿತು ಇದೇ ರೀತಿಯ ಕ್ರಮ ಆಗಲೇ ಬೇಕು ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿದೆ.

ಅಳಿದುಳಿದವರಲ್ಲಿ ನಾವೇ ನಂಬರ್ 1 ಎಂದು ಮುದ್ರಣ ಕುಸಿದಿರುವ ಪತ್ರಿಕೆಗಳು, ವೀಕ್ಷಕರಿಂದ ತಿರಸ್ಕಾರಕ್ಕೆ ಒಳಗಾಗಿರುವ ಕೆಲ ಖಾಸಗಿ ಚಾನಲ್ಗಳು ಮಾತ್ರ ಮಾಧ್ಯಮ ಎಂಬ ನಿಲುವಿನಿಂದ ಸರ್ಕಾರಗಳು ಹೊರಬರಬೇಕಿದೆ.

ಸುಳ್ಳು, ಊಹಾಪೋಹ ವರದಿ ಪ್ರಸಾರ ಮಾಡುವ ಯಾವುದೇ ಮಾಧ್ಯಮವಾಗಲಿ ಅವರ ವಿರುದ್ಧ ಒಂದೇ ರೀತಿಯ ಕ್ರಮಕೈಗೊಳ್ಳುವಂತೆ ಆಗ್ರಹ ಕೇಳಿಬರುತ್ತಿದೆ. ಅಲ್ಲದೆ ಎಲ್ಲರಿಗೂ ಒಂದೇ ಮಾದರಿಯಾದ ಸುಳ್ಳು ಸುದ್ದಿಗೆ ಕಡಿವಾಣ ಕುರಿತಾದ ಕಾನೂನು ಶೀಘ್ರವೇ ಜಾರಿಗೊಳಿಸುವಂತೆ ಒತ್ತಾಯದ ಕೂಗು ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ‌.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!