ವೀಲಿಂಗ್ ಮಾಡುವ ಪುಂಡರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ ಶಾಕ್

District Collector G. Jagadish shocks wheeling Bullies

ಬೆಂಗಳೂರು ನಗರ ಜಿಲ್ಲೆ: ರಸ್ತೆಗಳಲ್ಲಿ ವೀಲಿಂಗ್ (wheeling) ಮಾಡಿ ವಾಹನ ಚಲಾಯಿಸುವ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿ ವಾಹನ ಪರವಾನಿಗೆಯನ್ನು ಖಾಯಂ ಆಗಿ ರದ್ದುಗೊಳಿಸಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ (District Collector G. Jagadish) ಅವರು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರ ಮಾತನಾಡಿದರು.

ನಗರದಲ್ಲಿ ಮಕ್ಕಳು ರಸ್ತೆ ದಾಟುವಾಗ ಆಗುವ ಅಪಘಾತಗಳು ಹೆಚ್ಚಾಗಿದ್ದು ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳಲ್ಲಿ ರಸ್ತೆ ಅಪಘಾತ ಕುರಿತು ಜಾಗೃತಿ ಮೂಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಮಕ್ಕಳು ರಸ್ತೆ ದಾಟುವಾಗ ಶಾಲೆಯ ಆಯಾಗಳೊಂದಿಗೆ ದಾಟುವುದು,ಶಾಲಾ ವಾಹನಗಳನ್ನು ಓಡಿಸುವ ಚಾಲಕರನ್ನು ಕಡ್ಡಾಯ ತಪಾಸಣೆ ಹಾಗೂ ವಾಹನದಲ್ಲಿ ಸೀಮಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಶಾಲೆಗಳು ಮುಂಜಾಗ್ರತೆ ವಹಿಸಬೇಕೆಂದು ಹೇಳಿದರು.

ಅಪಘಾತ ನಿಯಂತ್ರಿಸಲು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಬ್ಲಾಕ್ ಸ್ಪಾಟ್ (Black spots) ಸೂಚನಾ ಫಲಕಗಳನ್ನು ಅಳವಡಿಸುವಂತೆ ಸೂಚಿಸಿದರು.

ವಾರಂತ್ಯದಲ್ಲಿ ಹೆಬ್ಬಾಳ ಮೇಲ್ಸೇತುವೆ ಮತ್ತು ಕುಣಿಗಲ್ ರಸ್ತೆಗಳಲ್ಲಿ ಯುವಕರು ವೀಲಿಂಗ್ ಮಾಡುತ್ತಾ ಬೈಕ್ ಗಳನ್ನು ಚಲಾಯಿಸುತ್ತಿರುತ್ತಾರೆ ಇದರಿಂದ ಸಾರ್ವಜನಿಕರಿಗೆ ಸಂಚಾರಿಸಲು ತೊಂದರೆ ಆಗುತ್ತಿದೆ ಎಂದು ಸಾರಿಗೆ ಅಧಿಕಾರಿಗಳು ಮಾಹಿತಿ ನೀಡಿದಾಗ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಿ ಆರ್ ಸಿ, ಲೈಸೆನ್ಸ್ ರದ್ದುಪಡಿಸುವಂತೆ ಸೂಚಿಸಿದರು.

ಅಪಘಾತ ಸಂಭವಿಸುವ ಸ್ಥಳಗಳಿಗೆ ತಕ್ಷಣದಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲು ಜಿಪಿಎಸ್ ಮ್ಯಾಪಿಂಗ್ ಸ್ಥಳಗಳನ್ನು ಗುರುತಿಸಲು ಅಗತ್ಯ ರಸ್ತೆ ನಕ್ಷೆ ನೀಡಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮತ್ತು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಮುಂದಿನ ಸಭೆಯಲ್ಲಿ ತಿಂಗಳಲ್ಲಿ ಸಂಭವಿಸುವ ಒಟ್ಟು ಅಪಘಾತ ನಿಯಂತ್ರಣಕ್ಕೆ ಕ್ರಿಯಾಯೋಜನೆ ಹಾಗೂ ಕೈಗೊಂಡಿರುವ ಕ್ರಮಗಳು ಬಗ್ಗೆ ಮಾಹಿತಿಯನ್ನು ಪಿಪಿಟಿಯಲ್ಲಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನಾ ವ್ಯವಸ್ಥಾಪಕರಾದ ಶ್ರೀನಿವಾಸ್ ಗೌಡ, ಬೆಂಗಳೂರು ನಗರ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳಾದ ಡಾ. ಜಗದೀಶ ಕೆ.ನಾಯಕ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಕಾಶ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಿಭಾಗೀಯ ಸಾರಿಗೆ ಅಧಿಕಾರಿಯಾದ ಪ್ರತಿಮಾ, ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಸಾರಿಗೆ ಅಧಿಕಾರಿಯಾದ ಭಾಗ್ಯಲಕ್ಷ್ಮೀ ಎಂ.

ಶಾಲಾ ಶಿಕ್ಷಣ ಇಲಾಖೆಯ ಉತ್ತರ ವಿಭಾಗದ ಉಪನಿರ್ದೇಶಕರಾದ ವಾಸು, ಶಾಲಾ ಶಿಕ್ಷಣ ಇಲಾಖೆಯ ದಕ್ಷಿಣ ವಿಭಾಗದ ಉಪನಿರ್ದೇಶಕರಾದ ಸಮೀರ್ ಪಾಷಾ, ಲೋಕೋಪಯೋಗಿ ಕಾರ್ಯಪಾಲಕ ರಾಜು, ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರರಾದ ಶ್ರೀಕಾಂತ್, ಬ್ಲೂಮ್ ಬರ್ಗ್ (Bloomberg) ಬಿ.ಇ.ಆರ್.ಜಿ ಸಂಸ್ಥೆಯ ಅಪರಾಜಿತ ರೈ ಸೇರಿದಂತೆ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ರಾಜಕೀಯ

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬುಧವಾರ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆಯ ಕುಸಿದು ಏಳು ಮಂದಿ ಸಾವನಪ್ಪಿರುವ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121541"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]