Journalists are outsiders for nationalized banks: K.V. Prabhakar

ರಾಷ್ಟ್ರೀಯ ಬ್ಯಾಂಕ್ ಗಳ ಪಾಲಿಗೆ ಪತ್ರಕರ್ತರು ಹೊರಗಿವರು: ಕೆ.ವಿ.ಪ್ರಭಾಕರ್

ಬೆಂಗಳೂರು: 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ (K.V. Prabhakar) ಅಭಿಪ್ರಾಯಪಟ್ಟರು.

ಪತ್ರಕರ್ತರ ಸಹಕಾರಿ ಸಂಘಕ್ಕೆ 75 ವರ್ಷಗಳು ತುಂಬಿದ ಸಂದರ್ಭದಲ್ಲಿ ಆಯೋಜಿಸಿದ್ದ “ಅಮೃತ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಚಳವಳಿಕ ಜೊತೆ ಜೊತೆಗೇ ನಡೆದದ್ದು ನಮ್ಮ ದೇಶದ ಸಹಕಾರ ಚಳವಳಿ. ಮಹಾತ್ಮಗಾಂಧಿ ದೇಶದ ಸ್ವಾತಂತ್ರ್ಯಕ್ಕಾಗಿ 1920 ರಲ್ಲಿ “ಅಸಹಾಕಾರ ಚಳವಳಿಗೆ” ಕರೆ ಕೊಡುವ ಮೊದಲೇ ರಾಜ್ಯದಲ್ಲಿ 1904 ರಲ್ಲಿ ಸಹಕಾರ ಕಾಯ್ದೆ ಜಾರಿ ಆಗಿತ್ತು. ದುಡಿಯುವ ವರ್ಗಗಳ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಡೆದ ಸಹಕಾರ ಚಳವಳಿಯ ಭಾಗವಾಗಿ “ಪತ್ರಕರ್ತರ ಸಹಕಾರ ಸಂಘವೂ ಜನ್ಮ ತಾಳಿದೆ”. ಈ ಸಂಘದ ಸ್ಥಾಪನೆಗೆ ಮುನ್ನುಡಿ ಬರೆದ ಎಲ್ಲಾ ಹಿರಿಯರನ್ನೂ ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ ಎಂದರು.

ಸಹಕಾರಿ ಸಂಘಗಳು, ಸ್ವ-ಸಹಾಯ ಸಂಘಗಳ ಚಳವಳಿಗಳು ಇಂದಿರಾಗಾಂಧಿಯವರ ಬ್ಯಾಂಕ್ ಗಳ ರಾಷ್ಟ್ರೀಕರಣಕ್ಕೆ ಪ್ರೇರಣೆ ಆಗಿದ್ದವು.

“ಪರಸ್ಪರ” ಎನ್ನುವುದು ಸಹಕಾರ ತತ್ವದ ಮೂಲ ಮೌಲ್ಯ ಆಗಿರುವಂತೆಯೇ ಪತ್ರಿಕೋದ್ಯಮದ ಮೂಲ ಮಂತ್ರವೂ ಇದೇ ಆಗಿದೆ. ಪತ್ರಕರ್ತರು ಸಹಕಾರ ಸಂಘ ಸ್ಥಾಪಿಸುವ ಮೊದಲೇ ಕೃಷಿ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೀನುಗಾರರ ಸಹಕಾರ ಸಂಘಗಳು ಸ್ಥಾಪನೆ ಆಗಿದ್ದವು. ದುಡಿಯುವ ವರ್ಗಗಳನ್ನು, ಶ್ರಮಿಕ ಸಮುದಾಯಗಳನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಸಹಕಾರಿ ಮನೋಭಾವದಿಂದಲೇ ಪತ್ರಕರ್ತರ ಸಹಕಾರ ಸಂಘವನ್ನೂ ನಮ್ಮ ಹಿರಿಯರು ಸ್ಥಾಪಿಸಿದರು.

ಪತ್ರಕರ್ತರು ಮತ್ತು ಪತ್ರಿಕಾ ಕಾರ್ಮಿಕರು ರಾಷ್ಟ್ರೀಯ ಬ್ಯಾಂಕ್ ಗಳ‌ ಪಾಲಿಗೆ ಹೊರಗಿನವರು. ನಾನೂ ಸಹ ಗೃಹ ಸಾಲ ಪಡೆಯುವಾಗ ಸಿಕ್ಕಾಪಟ್ಟೆ ರಗಳೆ ಅನುಭವಿಸಿದೆ.

ಪತ್ರಕರ್ತರಿಗೆ ಖಾಸಗಿಯಾಗಿ ಸಾಲ ಕೊಡುವವರೂ ಇಲ್ಲ. ವಾಪಾಸ್ ಕೇಳೋದು ಕಷ್ಟ ಎನ್ನುವ ಭಯ ಖಾಸಗಿಯವರಿಗೆ ಇದ್ದೇ ಇದೆ. ಹೀಗಾಗಿ ಈ ಸಂಘದಲ್ಲಿ ನಾವೇ ಪರಸ್ಪರ ಒಬ್ಬರಿಗೊಬ್ಬರು ಜಾಮೀನು ಆಗುವ ಮೂಲಕ ಪರಸ್ಪರರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದೇವೆ. ಕಷ್ಟದಲ್ಲಿದ್ದಾಗ ಜಾಮೀನು ಹಾಕಿಸಿಕೊಂಡವರು, ಜಾಮೀನು ಹಾಕಿದವರಿಗೆ ವಂಚಿಸಬಾರದು ಎಂದು ನನ್ನ ವಿನಂತಿ. “ಪರಸ್ಪರತೆ” ಮೌಲ್ಯ ಕಾಪಾಡದಿದ್ದರೆ ಸಹಕಾರ ಬ್ಯಾಂಕ್ ಗಳು ಯಶಸ್ವಿಯಾಗುವುದು ಕಷ್ಟ.

ನಿವೇಶನ ಖರೀದಿ ಮತ್ತು ಗೃಹ ನಿರ್ಮಾಣಕ್ಕೆ ನೆರವಾಗುವ ಉದ್ದೇಶದಿಂದ 1949ರಲ್ಲಿ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಕೇವಲ ರೂ. 353.12 ದುಡಿಯುವ ಬಂಡವಾಳ ದೊಂದಿಗೆ ಆರಂಭವಾಗಿ ಈಗ ರೂ. 10ಕೋಟಿಗೂ ಮೀರಿದ ದುಡಿಯುವ ಬಂಡವಾಳ ಹೊಂದಿ, ನಿರಂತರ ನಿವ್ವಳ ಲಾಭವನ್ನೂ
ಗಳಿಸುತ್ತಿರುವುದು ಸಂತೋಷದ ವಿಷಯ.

ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಶ್ರೇಣಿಯನ್ನು ಪಡೆದು ಮುನ್ನಡೆಯುತ್ತಿರುವುದು ಸಂಘದ ವಹಿವಾಟು ಪಾರದರ್ಶಕವಾಗಿರುವುದು, ಸಂಘ ಒಂದು  ಕುಟುಂಬದಂತೆ
ಪತ್ರಕರ್ತರ ನೋವು ನಲಿವುಗಳಿಗೆ ಸ್ಪಂದಿಸುತ್ತಿದೆ ಎನ್ನುವುದಕ್ಕೆ ಸಾಕ್ಷಿ.

ಪ್ರತಿ ವರ್ಷ ಸದಸ್ಯರ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿರುವುದು, ಕೊಡಗು ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರ ನಿಧಿಗೆ ದೇಣಿಗೆ ನೀಡಿರುವುದು ಸಂಘದ ಸಾಮಾಜಿಕ ಹೊಣೆಗಾರಿಕೆಗೆ ಸಾಕ್ಷಿ.

ಪ್ರಸಕ್ತ ಆಡಳಿತ ಮಂಡಳಿ ಸೆಪ್ಟೆಂಬರ್ 2023ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಸಂಘದ ಚಟುವಟಿಕೆಗಳನ್ನು ವಿಸ್ತರಿಸಲು ಅವಿರತ ಶ್ರಮವಹಿಸುತ್ತಿರುವುದು ಶ್ಲಾಘನೀಯ.

ಸದಸ್ಯರಿಗೆ ಮನೆ ಮತ್ತು ನಿವೇಶನ ಖರೀದಿಗಾಗಿ ರೂ. 30 ಲಕ್ಷದವರೆಗೆ ಭದ್ರತಾ ಸಾಲ ಸೌಲಭ್ಯ ನೀಡಲು ನಿರ್ಧರಿಸಿರುವುದು ಸಂಘವು ಸುಭದ್ರವಾಗಿರುವುದರ ಸೂಚಕವಾಗಿದೆ.

ಕಡಿಮೆ ಬಡ್ಡಿ ದರದಲ್ಲಿ ರೂ.3 ಲಕ್ಷಗಳ ವರೆಗೆ ವೈಯಕ್ತಿಕ ಸಾಲ, ರೂ.25 ಸಾವಿರದ ವರೆಗೆ ವೈದ್ಯಕೀಯ ನೆರವು ಹಾಗೂ 2 ಲಕ್ಷ ಮೌಲ್ಯದ ಅಪಘಾತ ವಿಮಾ ರಕ್ಷಣೆ ಒದಗಿಸುತ್ತಿದೆ.

ಸಂಘವು ‘ಎ’ ಶ್ರೇಣಿಯ ಆಡಿಟ್‌ ವರ್ಗೀಕರಣ ಹೊಂದಿದ್ದು, 2005 ರಲ್ಲಿ ನಡೆದ ‘ಸಹಕಾರ ಸಪ್ತಾಹ’ ಕಾರ್ಯಕ್ರಮದಲ್ಲಿ ಉತ್ತಮ ಸಹಕಾರ ಸಂಘ ವೆಂಬ ಗೌರವಕ್ಕೆ ಪಾತ್ರವಾಗಿರುವುದು ಸಂಘದ ಸದಸ್ಯರ ಸಮರ್ಪಣಾ ಮನೋಭಾವಕ್ಕೆ ಸಾಕ್ಷಿಯಾಗಿದೆ

ಇದು ಹೀಗೆಯೇ ಸಾಗಲಿ, ಸಂಘ ಹಾಗೂ ಪತ್ರಕರ್ತ ಮಿತ್ರರ ಬಾಂಧವ್ಯ ಗಟ್ಟಿಯಾಗಲಿ , ಇನ್ನಷ್ಟು, ಮತ್ತಷ್ಟು ಕಲ್ಯಾಣ ಕಾರ್ಯಕ್ರಮಗಳನ್ನು ಸಂಘ ಹಮ್ಮಿಕೊಂಡು‌ ಮುನ್ನಡೆಯಲಿ ಎಂದು ಹಾರೈಸುತ್ತೇನೆ.

ಸಹಕಾರ ಸಂಘ ಮುಂದಿಟ್ಟಿರುವ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಕಾರಾತ್ಮಕವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ, ಕಾರ್ಯದರ್ಶಿ ರಮೇಶ್, ಹಿರೇಜಂಬೂರು ಸೇರಿ ಎಲ್ಲಾ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!