ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

D.K. Shivakumar should not become a villain in Bengaluru: Opposition Leader R. Ashoka

ಬೆಂಗಳೂರು: “ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಆರ್.ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ.

“ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು.”

ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ?

ಒಂದು ಕಡೆ ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ?

ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಹರಿಪ್ರಸಾದ್ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ?

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು.

“He who loves not his country can love nothing”. ಅಂದರೆ “ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ” ಎನ್ನುವ ಮಾತಿದೆ.

ಆದರೆ ಕಾಂಗ್ರೆಸ್ ಪಕ್ಷದಲ್ಲಿ “ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು” ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ.

ಜಯ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂದಿದ್ದಾರೆ.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]