The cruel Narasimha Varma

ಹರಿತಲೇಖನಿ ದಿನಕ್ಕೊಂದು ಕಥೆ: ಕ್ರೂರಿ ನರಸಿಂಹವರ್ಮ

Harithalekhani: ಒಂದು ಊರಿನಲ್ಲಿ ನರಸಿಂಹವರ್ಮ ಎಂಬ ರಾಜನಿದ್ದನು. ಅವನು ಬಹಳ ಕ್ರೂರಿಯಾಗಿದ್ದನು. ಜನರನ್ನು ಹಿಂಸಿಸುತ್ತಿದ್ದನು. ಅವನನ್ನು ಕಂಡರೆ ಜನರಿಗೆ ಭಯವಾಗುತ್ತಿತ್ತು. ಒಂದು ದಿನ ತೆರಿಗೆ ಪಾವತಿಸಿಲ್ಲದವರನ್ನು ವಿಚಾರಿಸುತ್ತಿದ್ದನು. ಒಬ್ಬ ಬಂದ. ರಾಜ, ‘ಏಕೆ ತೆರಿಗೆ ಪಾವತಿಸಿಲ್ಲ?’ ಎಂದನು.

ಬಡವ ಭಯದಿಂದ, ‘ನನ್ನ ಹೆಂಡತಿಗೆ ಆರೋಗ್ಯ ಸರಿಯಿಲ್ಲ. ಅವಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಅಲ್ಲಿ ಹಣವೆಲ್ಲಾ ಖರ್ಚಾಯಿತು. ಆದ್ದರಿಂದ ತೆರಿಗೆ ಕಟ್ಟಿಲ್ಲ’ ಎಂದನು. ‘ಎರಡು ದಿನ ಕಾಲಾವಕಾಶ ಕೊಡಿ’ ಎಂದನು. ರಾಜ, ‘ಇವನ ತಪ್ಪಿಗೆ ಇವನ ಕೈಕಾಲುಗಳನ್ನು ಕತ್ತರಿಸಿ’ ಎಂದನು.

ಮತ್ತೊಬ್ಬ ಬಂದ. ರಾಜ, ‘ನೀನೇಕೆ ತೆರಿಗೆ ಕಟ್ಟಿಲ್ಲ?’ ಎಂದ. ‘ಸ್ವಾಮಿ, ಅಂಗಡಿಯಲ್ಲಿ ವ್ಯಾಪಾರವಾಗಿಲ್ಲ. ಆದ್ದರಿಂದ ತೆರಿಗೆ ಪಾವತಿಸಿಲ್ಲ’. ‘ಇವನನ್ನು ಕರೆದುಕೊಂಡು ಹೋಗಿ ಇವನ ತಲೆಯನ್ನು ಕತ್ತರಿಸಿ ಎಸೆಯಿರಿ’ ಎಂದ ರಾಜ. ಹೀಗೆ ರಾಜ ಜನರಿಗೆ ಕಿರುಕುಳ ಕೊಡುತ್ತಿದ್ದನು. ಒಂದು ದಿನ ಆತ ಕುದುರೆ ಸವಾರಿ ಮಾಡಿಕೊಂಡು ಬರುತ್ತಿದ್ದ. ಆಗ ದಾರಿಯ ಮಧ್ಯದಲ್ಲಿ ಒಂದು ಕೊಂಬೆ ಅಡ್ಡಲಾಗಿ ಬಿತ್ತು. ರಾಜ ಕೋಪಗೊಂಡು ಸೈನಿಕರಿಗೆ ಆ ಮರವನ್ನು ಕಡಿಯುವಂತೆ ಹೇಳಿದನು. ಆ ಮರದಲ್ಲಿ ನೂರಾರು ಹಕ್ಕಿಗಳು ವಾಸವಾಗಿದ್ದವು, ಅವುಗಳೆಲ್ಲ ನಾಶವಾದವು.

ಆ ಮರದಲ್ಲಿದ್ದ ಹಕ್ಕಿಯೊಂದು ಬದುಕುಳಿಯಿತು. ಅದು ಕೋಪದಿಂದ ಹಾರಿಬಂದು ತನ್ನ ಸ್ನೇಹಿತನಾದ ನಾಗರಹಾವನ್ನು ಭೇಟಿ ಮಾಡಿತು. ನಡೆದ ವಿಷಯವನ್ನೆಲ್ಲಾ ತಿಳಿಸಿತು. ಇಬ್ಬರೂ ಜೊತೆಗೂಡಿ ರಾಜನನ್ನು ಕೊಲ್ಲಲು ನಿರ್ಧರಿಸಿದವು.

ರಾಜನು ಕೊಳದಲ್ಲಿ ಸ್ನಾನ ಮಾಡುವಾಗ ನಾಗರಹಾವು ರಾಜನ ಕುತ್ತಿಗೆಗೆ ಸುತ್ತಿಕೊಂಡಿತು. ರಾಜ ‘ಕಾಪಾಡಿ ಕಾಪಾಡಿ’ ಎಂದು ರಕ್ಷಣೆಗೆ ಮೊರೆಯಿಟ್ಟ. “ನೀವ್ಯಾರು? ನನ್ನನ್ನು ಏಕೆ ಕೊಲ್ಲುತ್ತಿದ್ದೀರಿ? ಎಂದ. ಕೊಳದ ಪಕ್ಕದಲ್ಲಿದ್ದ ಹಕ್ಕಿಯು, ‘ಆವತ್ತು ನೀನು ಒಂದು ಮರವನ್ನು ಕಡಿಯುವಂತೆ ಆಜ್ಞೆ ಮಾಡಿದೆಯಲ್ಲವೇ?’ ಎಂದಿತು.

ರಾಜ, ‘ಹೌದು’ ಎಂದ. ‘ಆ ಮರದಲ್ಲಿ ವಾಸವಿದ್ದ ಒಂದು ಹಕ್ಕಿ ನಾನು’ ಎಂದಿತು.

ರಾಜ, ‘ನನ್ನನ್ನು ಕ್ಷಮಿಸು’ ಎಂದು ಬೇಡಿಕೊಂಡನು.

ನಾಗರಹಾವು ರಾಜನನ್ನು ಕೊಂದು ಹಾಕುವುದಕ್ಕೆ ಗಟ್ಟಿಯಾಗಿ ಕುತ್ತಿಗೆಗೆ ಸುತ್ತಿಕೊಂಡಿತು. ರಾಜ, ‘ಯಾರಾದರೂ ಕಾಪಾಡಿ’ ಎಂದು ಕೂಗಿಕೊಳ್ಳುತ್ತಿದ್ದನು.

ರಾಜ ಮಾಡಿದ ಪಾಪದಿಂದ ಮತ್ತು ಆತ ಜನರಿಗೆ ಕೊಟ್ಟ ಕಷ್ಟದಿಂದ ಯಾರೂ ರಾಜನನ್ನು ಉಳಿಸಲು ಬರಲಿಲ್ಲ. ನಾಗರಾಜ ರಾಜನನ್ನು ಕೊಂದಿತು. ಆಗ ಜನರೆಲ್ಲ ಸಂಭ್ರಮದಿಂದ ಕುಣಿದಾಡಿದರು.

ಕೃಪೆ: ಕೆ.ಮುರಳಿ, ಮಕ್ಕಳಿಗಾಗಿ ನೂರಾರು ಕಥೆಗಳು, ಕೃಷಿವಿಕಾಸ್ ಪಬ್ಲಿಕೇಷನ್ಸ್, ಬೆಂಗಳೂರು. (ಸರ್ಕಾರಿ ಲೈಬ್ರರಿಯಿಂದ)

ರಾಜಕೀಯ

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಭಾರತ ಯುದ್ಧವನ್ನು ಕೊನೆಗೊಳಿಸಬಹುದು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (RSS chief Mohan Bhagwat) ಅವರು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷವನ್ನು ಭಾರತವು ಕೊನೆಗೊಳಿಸಬಹುದು ಎಂದು ಶುಕ್ರವಾರ ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಹೆಗಲಿಗೆ ಜವಾಬ್ದಾರಿ ಹೊರೆಸಿದ್ದಾರೆ.

[ccc_my_favorite_select_button post_id="120350"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!