ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Use of ballot papers in local body elections almost fixed: DCM D.K. Shivakumar

ಬೆಂಗಳೂರು: “ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ” ಎಂದರು.

ಎಲ್ಲಿದೆ ನಿಯಮ ತೋರಿಸಿ?

“ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಇವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ, ಬೇರೆ ಧರ್ಮಕ್ಕೆ ಸೇರಿರುತ್ತಾರೆ. ಇಂತಹ ಮಕ್ಕಳ ಆಚರಣೆ ಬೇರೆ,‌‌ ಬೇರೆ ಇರುತ್ತದೆ. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಣ ಮಾಡುವ ವಿಡಿಯೋ ನೋಡಿದೆ. ಅವರು ಸಹ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ” ಎಂದರು.

“ಮಹಾರಾಜರ ಆಳ್ವಿಕೆ ಕಾಲದಲ್ಲಿಯೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನ ಮಾಡುತ್ತಿದ್ದರು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್,‌ ಮಸೀದಿ, ಜೈನ ಬಸದಿ, ಗುರುದ್ವಾರ ಹೀಗೆ ಎಲ್ಲಾ ಕಡೆ ನಮ್ಮನ್ನು ಒಳಗೆ ಬಿಡುವುದಿಲ್ಲವೇ. ಈ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದರು. ಆದರೆ ಈಗ ಬಾನು ಮುಷ್ತಾಕ್ ಅವರು ಬೆಟ್ಟ ಹತ್ತಬಾರದು,‌ ಉದ್ಘಾಟನೆ ಮಾಡಬಾರದು ಎನ್ನುವುದು ಎಷ್ಟು ಸರಿ?” ಎಂದು ಹೇಳಿದರು.

ಸಂಸದ ಯದುವೀರ್ ಅವರು ತಮ್ಮ ಹೇಳಿಕೆಗೆ ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, “ಅವರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಟ್ಟಿದ್ದಾರಲ್ಲ, ಆದ ಕಾರಣಕ್ಕೆ ಇತಿಹಾಸ ಮರೆತು ಬಿಟ್ಟಿದ್ದಾರೆ. ನಾನೊಬ್ಬ ಹಿಂದೂ. ಆ ಚಾಮುಂಡಿ ತಾಯಿಗೆ ಎರಡು ಸಾವಿರ ಕಾಣಿಕೆ ನೀಡಿ ನಾನು ಹಾಗೂ ಸಿದ್ದರಾಮಯ್ಯ ಅವರು ಈ ಎರಡು ಸಾವಿರವನ್ನು ಎಲ್ಲಾ ತಾಯಂದಿರಿಗೂ ಕೊಡುವ ಶಕ್ತಿ ನೀಡುವಂತೆ ಪ್ರಾರ್ಥನೆ ಸಲ್ಲಿಸಿದೆವು. ಆ ತಾಯಿ ನಮಗೆ ಆಶೀರ್ವಾದ ಮಾಡಿದ್ದಾಳೆ.‌ ಈಗ ಕೇವಲ ಹಿಂದೂಗಳಿಗೆ ಮಾತ್ರ ಹಣ ನೀಡುತ್ತಾ ಇದ್ದೇವಾ? ಪಾರ್ಸಿ, ಸಿಖ್, ಮುಸ್ಲಿಂ, ಜೈನ, ಬೌದ್ಧರಿಗೆ ಹಣ ನೀಡುತ್ತಿಲ್ಲವೇ?” ಎಂದರು.

ಹಿಂದುತ್ವದ ಮೇಲಿನ ದಾಳಿ ಹಾಗೂ ಬಾನು ಮುಷ್ತಾಕ್ ಆಯ್ಕೆಯ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಆಚರಣೆ ಮಾಡುವಷ್ಟು ಹಿಂದೂ ಪದ್ಧತಿಯನ್ನು ಅವರೆಲ್ಲಿ (ಬಿಜೆಪಿ) ಆಚರಣೆ ಮಾಡುತ್ತಾರೆ. ನಾನೇನು ಯಾರ ವಿರುದ್ಧವೂ ಇಲ್ಲ, ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಎಲ್ಲರಿಗೂ ಅವಕಾಶ ಸಿಗಬೇಕು. ಯಾವ ಹಿಂದೂ ದೇವಸ್ಥಾನದಲ್ಲಿ ಬೇರೆ ಧರ್ಮದವರು ಬರಬಾರದು ಎಂದು ಹೇಳಿರುವ ಉದಾಹರಣೆ ಇದ್ದರೆ ತೋರಿಸಿ” ಎಂದರು.

ಬಿಜೆಪಿ ರಾಜಕೀಯ ಅಜೆಂಡಾ

“ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿ ಅಲ್ಪಸಂಖ್ಯಾತ ಇಲಾಖೆಯನ್ನು ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನು ನಾವು ಒಪ್ಪಿಕೊಳ್ಳಲೇ ಬೇಕು. ಅವರನ್ನು ದೇಶದಿಂದ ಓಡಿಸಿ ಬಿಡಲು ಆಗುತ್ತದೆಯೇ?” ಎಂದರು.

ಜೆಡಿಎಸ್ ತನ್ನ ಸಾಮಾಜಿಕ ‌ಜಾಲತಾಣದಲ್ಲಿ ನಕಲಿ ಪತ್ರ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಅವರು ಯಾವತ್ತಿದ್ದರೂ ಫೇಕ್. ಜೆಡಿಎಸ್ ಎಂದಿಗೂ ಫೇಕ್ ಕೆಲಸಗಳನ್ನೇ ಮಾಡುವುದು. ನಾನು ಹೆದರಿಕೊಂಡು ಬಿಟ್ಟೆ, ರಣಹೇಡಿ ಅಂತಲಾದರೂ ಟೀಕೆ ಮಾಡಿಕೊಳ್ಳಲಿ, ಪರವಾಗಿಲ್ಲ, ಅವರ ದೊಡ್ಡ, ದೊಡ್ಡ ನಾಯಕರುಗಳಿಗೆ ಹೆದರಿಕೊಳ್ಳದವನು ನಾನು. ಈಗ ಈ ಟ್ವೀಟ್ ಗಳಿಗೆ ಹೆದರಿಕೊಳ್ಳುತ್ತೇನೆಯೇ? ವಿಜಯೇಂದ್ರ ಹಾಗೂ ಅಶೋಕ್ ಅವರು ತಮ್ಮ,‌ ತಮ್ಮ ಸಮಾಧಾನಕ್ಕೆ ಮಾತನಾಡುತ್ತಿದ್ದಾರೆ‌” ಎಂದರು.

ಧರ್ಮಸ್ಥಳ ಚಲೋ ಬಗ್ಗೆ ಕೇಳಿದಾಗ, “ಅದು ರಾಜಕೀಯದ‌ ಚಲೋ. ಧರ್ಮದ ಚಲೋ ಅಲ್ಲ” ಎಂದರು.

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]