Drug-free India campaign.. 3-day bike rally

ಗುಡ್ಮಾರ್ನಿಂಗ್ ನ್ಯೂಸ್: ನಶಾ ಮುಕ್ತ ಭಾರತ ಅಭಿಯಾನ.. 3 ದಿನಗಳ ಬೈಕ್ ಜಾಥಾ

ಬಳ್ಳಾರಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, ಆಗಸ್ಟ್ 29 ರಿಂದ 31 ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ (Bike rally) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್‌ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅರಣ್ಯ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.) ಮತ್ತು ಎನ್.ಸಿ.ಸಿ. ಸಹಯೋಗದೊಂದಿಗೆ ಜಾಥಾ ಆಯೋಜಿಸಲಾಗುತ್ತಿದೆ.

ಸಾರ್ವಜನಿಕರಿಂದ ಆಯ್ಕೆಯಾದ 20 ಬೈಕ್ ಸವಾರರು ಭಾಗವಹಿಸಲಿದ್ದಾರೆ. ಈ ಜಾಥಾ ಕಾರ್ಯಕ್ರಮವು ಮಾರ್ಗದುದ್ದಕ್ಕೂ ರಾಜ್ಯದ ಪ್ರಮುಖ ಜಿಲ್ಲೆಗಳ ಮೂಲಕ ಸಾಗುತ್ತಾ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಿದೆ.

ಈ ಬೃಹತ್ ಅಭಿಯಾನವನ್ನು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ನವೀನರಾಜ್ ಸಿಂಗ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮತ್ತು ಸರ್ಕಾರದ ಪ್ರಧಾನ ಕಾರ್ಯದರ್ಶಿ (ಅರಣ್ಯ) ಮನೋಜಕುಮಾರ್,
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ) ಆರ್.ರವಿಶಂಕರ್, ಬಂಡೀಪುರ ಹುಲಿ ಮೀಸಲು ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ನಿರ್ದೇಶಕ ಎಸ್.ಪ್ರಭಾಕರನ್, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಹಾಗೂ ಇತರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ರೂಪಿಸಿದ್ದಾರೆ.

ದೇಶಾದ್ಯಂತ 1 ಲಕ್ಷ ಕಿಲೋಮೀಟ‌ರ್ ಗಳಿಗೂ ಹೆಚ್ಚು ಪ್ರಯಾಣವನ್ನು ಸೈಕ್ಲಿಂಗ್‌ನಲ್ಲಿ ಕ್ರಮಿಸಿ ಅಪ್ರತಿಮ ಸಾಧನೆ ಮಾಡಿರುವ ರೈಡರ್ ನಂದಿನಿ ಮಿಥುನ್ ಈ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದು ವಿಶೇಷವಾಗಿದೆ. ಅವರು ತಮ್ಮ ಅಸಾಧಾರಣ ಅನುಭವಗಳು ಮತ್ತು ಬದ್ಧತೆಯಿಂದ ಸಾಮಾಜಿಕ ಉದ್ದೇಶಗಳ ಕಡೆಗೆ ಯುವಕರನ್ನು ಪ್ರೇರೇಪಿಸಲಿದ್ದಾರೆ.

ಈ ಗಣ್ಯರು ಶಾಲೆಗಳು, ಕಾಲೇಜುಗಳು, ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಭಾಗವಹಿಸಿ, ಯುವಜನತೆಗೆ ಉದ್ದೇಶಿತ ಜಾಗೃತಿ ಭಾಷಣಗಳು ಮತ್ತು ಸಂದೇಶಗಳನ್ನು ನೀಡಲಿದ್ದಾರೆ.

ಕರ್ನಾಟಕ ಸರ್ಕಾರವು ಈ ಜಾಥಾ ಕಾರ್ಯಕ್ರಮದ ಮೂಲಕ ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಹಾಗೂ ಆರೋಗ್ಯಕರ ಸಮಾಜವನ್ನು ಸೃಷ್ಟಿಸುವ ಪ್ರಯತ್ನವಾಗಿ ಹಮ್ಮಿಕೊಳ್ಳುತ್ತಿದೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: ತಾಲ್ಲೂಕಿನಾಧ್ಯಂತ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.

[ccc_my_favorite_select_button post_id="115546"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!