Nikhil Kumaraswamy demands loan waiver for farmers

ರೈತರ ಸಾಲ ಮನ್ನಾಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಸೆ.9 ರಿಂದ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದರು.

ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್‌ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆಂದು ಹೇಳಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಷ್ಟದಿಂದ ರೈತರು ಕಣ್ಣೀರಿಡುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸದೇ ಉಸ್ತುವಾರಿ ಮಂತ್ರಿಗಳು ಇಡೀ ಸರ್ಕಾರ ಕಾಣೆಯಾಗಿದೆ. ಜಿಲ್ಲೆಗಳಿಗೆ ತೆರಳಿ ನಿರಾಶ್ರಿತರಿಗೆ ಪರಿಹಾರ ಕಲ್ಪಿಸಿ ಎಂದು ನಿಖಿಲ್ ಅವರು ಅಗ್ರಹಿಸಿದರು.

ಈ ತಿಂಗಳಿಂದ ಮುಂಗಾರು ಹೆಚ್ಚಾಗಿದೆ.ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆ. ರಾಜ್ಯದಲ್ಲಿ 1ಲಕ್ಷದ 42 ಸಾವಿರ ಹೆಕ್ಟರ್ ಪ್ರದೇಶ ಹಾಳಾಗಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆ ಹಾನಿಯಾಗಿದೆ ಎಂದು ಹೇಳಿದರು.

ಹತ್ತಿ, ಮೆಕ್ಕೆಜೋಳ, ತೊಗರಿ ಎಲ್ಲಾ ಬೆಳೆ ನಾಶವಾಗಿದೆ. ಸರ್ಕಾರ, ಸಚಿವರು ತುರ್ತು ಪರಿಹಾರ ನೀಡಿಲ್ಲ. ಆಯಾ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಕೃಷಿ ಸಚಿವರು ಇದ್ದಾರೋ, ಇಲ್ಲವೋ ಅನ್ನೋ ಪ್ರಶ್ನೆ ಉದ್ಬವವಾಗಿದೆ. 266₹ ಚೀಲದ ಗೊಬ್ಬರ ಇತ್ತು, ಬ್ಲಾಕ್ ಮಾರ್ಕೆಟ್‌ಗೆ ಹೋಗಿ 1000₹ ಕೊಟ್ಟು ಖರೀದಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಮೈಸೂರಿಗೆ ಬಾಡೂಟಕ್ಕೆ ಹೋಗಲು ಚಾಪರ್ ಬಳಕೆ ಮಾಡ್ತಾರೆ. ಅದಕ್ಕಾಗಿ 80 ಕೋಟಿ ಕೊಟ್ಟು ಪ್ರೈವೆಟ್ ಚಾಪರ್ ಖರೀದಿ ಮಾಡೋ ಬಗ್ಗೆ ಮಾಹಿತಿ ಇದೆ. ಇದಕ್ಕೆ ಸಿಎಂಗೆ ಸಮಯ ಇದೆ. ಆದ್ರೆ ರೈತರ ಸಮಸ್ಯೆ ಬಗ್ಗೆ ಎಲ್ಲೂ ಕೂಡ ಅವರಿಗೆ ಸಮಯ ಇಲ್ಲ ಎಂದು ಕಿಡಿಕಾರಿದರು.

20-25 ಸಾವಿರ ಹೆಕ್ಟೇರ್ ಜಮೀನಿಗೆ ಪರಿಹಾರ ನೀಡುವಂತೆ ಕೇಳಿದ್ದಾರೆ. ಲಕ್ಷಾಂತರ ರೂ ಬೆಳೆ ಬೆಳೆಯಲು ಸಾಲ ಪಡೆದಿದ್ದಾರೆ. ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಕಿಂಚಿತ್ತಾದ್ರೂ ಕಾಳಜಿ ಇದ್ರೆ ಸ್ಥಳ ಪರಿಶೀಲನೆ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಬಹಳಷ್ಟು ಹಾನಿಯಾಗಿದೆ. ಜೆಡಿಎಸ್ ಎಲ್ಲಾ ನಾಯಕರು ಚರ್ಚೆ ಮಾಡಿದ್ದೇವೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಪ್ರವಾಸ ಮಾಡಲಿದ್ದೇವೆ‌. ಇದಕ್ಕಾಗಿ ಎರಡು ತಂಡ ಮಾಡಿದ್ದೇವೆ. ರೈತರ ಭೇಟಿ ಮಾಡಿ ಅವರಿಂದ ಮಾಹಿತಿ ಪಡೆಯಲಿದ್ದೇವೆ ಎಂದು ತಿಳಿಸಿದರು.

ಕುಮಾರಸ್ವಾಮಿ ಎಂಪಿ ಆಗಿ ಮಂಡ್ಯಕ್ಕೆ ಬಂದಿಲ್ಲ ಅಂತ ಸಚಿವ ಚಲುವರಾಯಸ್ವಾಮಿ ಆರೋಪ ವಿಚಾರ. ಕೃಷಿ ಸಚಿವರ ಹೇಳಿಕೆ ನಾನೂ ನೋಡಿದ್ದೇನೆ. ಕುಮಾರಣ್ಣ ಮಂಡ್ಯ ಎಂಪಿ ಆಗಿ ಸುಮ್ಮನೆ ಕುಳಿತಿಲ್ಲ. ಕೇಂದ್ರ ಸಾರಿಗೆ ಸಚಿವ ಗಡ್ಕರಿ ಜೊತೆ ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಅಭಿವೃದ್ಧಿ ಬಗ್ಗೆ ನಿರಂತರ ಚರ್ಚೆಯಲ್ಲಿದ್ದಾರೆ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ಅವರನ್ನ ಜನ ಕೂಡ ಆರಿಸಿದ್ದಾರೆ. ಕುಮಾರಣ್ಣ ಅವರಿಗೆ ಮಿಸ್ ಡಯಾಗ್ನಾಸಿಸ್ ಆಗಿತ್ತು. ಈಗ ಸರಿಯಾದ ಡಯಾಗ್ನಾಸಿಸ್ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ.ಬಳಿಕ ಮಂಡ್ಯಕ್ಕೂ ಪ್ರವಾಸ ಮಾಡಲಿದ್ದಾರೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಬೆಳೆದುಬಂದ ಹಾದಿ ಮರೆತಿದ್ದಾರೆ. ದೇವೇಗೌಡರು ಸಿದ್ದರಾಮಯ್ಯ ಅವರನ್ನ ಹಣಕಾಸು ಸಚಿವರಾಗಿ ಮಾಡಿದ್ರು. ಅವರಪ್ಪರಾಣೆ ಕುಮಾರಸ್ವಾಮಿ ಸಿಎಂ ಆಗಲ್ಲ ಅಂತ ಹೇಳಿದ್ದನ್ನೂ ನೋಡಿದ್ದೇನೆ. ನಮ್ಮ ಬಗ್ಗೆ ಯೋಚನೆ ಮಾಡಿ ನೀವು ಯಾಕೆ ಸಮಯ ವ್ಯರ್ಥ ಮಾಡ್ತಿದ್ದೀರಿ.? ಎಂದು ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದರು

ಬಿಜೆಪಿ ಬಿಟ್ಟು, ಜೆಡಿಎಸ್ ಪ್ರವಾಸ ವಿಚಾರ

ಬಿಜೆಪಿ ಒಂದು ರಾಜಕೀಯ ಪಕ್ಷ, ಜೆಡಿಎಸ್ ಕೂಡ ಒಂದು ರಾಜಕೀಯ ಪಕ್ಷ ಇದೆ. ಯಾವುದನ್ನ ಒಟ್ಟಾಗಿ ಹೋರಾಡಬೇಕು, ಯಾವುದರಲ್ಲಿ ಪ್ರತ್ಯೇಕವಾಗಿ ಹೋರಾಟ ಮಾಡಬೇಕು ಅಂತ ಹಿರಿಯರು ತೀರ್ಮಾನ ಮಾಡ್ತಾರೆ. ಧರ್ಮಸ್ಥಳ ವಿಚಾರದಲ್ಲಿ ಕೂಡ ಹೋರಾಟ ಮಾಡುವಾಗ ಬಿಜೆಪಿ ನೆನಪಿಸಿಕೊಂಡಿದ್ದೇವೆ ಎಂದು ಹೇಳಿದರು.

ನಮ್ಮ‌ ಹೋರಾಟದ ಬಗ್ಗೆ ಕಾಂಗ್ರೆಸ್ ಆಲೋಚಿಸಬಹುದು ಅಷ್ಟೇ. ಕೇಂದ್ರ ಮತ್ತು ರಾಜ್ಯದ ನಾಯಕರ ಜೊತೆಯಲ್ಲಿ ಒಟ್ಟಾಗಿ ಹೋಗ್ತೇವೆ. ಧಾರ್ಮಿಕ ಕ್ಷೇತ್ರದ ಪರವಾಗಿ ನಿಲ್ಲುವ ಕೆಲಸ ನಾವು ಮಾಡಬೇಕಿದೆ. ಹಾಗಾಗಿ ನಾವು ಹೋರಾಟ ಮಾಡ್ತಿದ್ದೇವೆ ಎಂದು ತಿಳಿಸಿದರು.

ಬಾನು ಮುಷ್ತಾಕ್ ಕವಿಯತ್ರಿ , ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ಬಾನು ಮುಷ್ತಾಕ್ ಅವರು ತಾಯಿ ಭುವನೇಶ್ವರಿ ವಿಚಾರ, ಹರಿಶಿಣ ಕುಂಕುಮ ಬಗ್ಗೆ ಮಾತಾಡಿದ್ದಾರೆ. ನಮ್ಮ ಧರ್ಮದ ಬಗ್ಗೆ ಎಷ್ಟು ತಾತ್ಸರದಿಂದ ನೋಡ್ತಿದ್ದಾರೆ ಅನ್ನೋದನ್ನ ಅವರಿಗೆ ಬಿಟ್ಟಿದ್ದೇವೆ ಎಂದು ಉತ್ತರಿಸಿದರು.

ಬೋವಿ ನಿಗಮದ ಅಧ್ಯಕ್ಷ ಕಮೀಷನ್ ಕೇಳಿದ್ದಾರೆ. SCPTSP ಹಣ ಮೀಸಲಿಟ್ಟಿದ್ದಾರೆ, ದಲಿತರ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಬೋವಿ ನಿಗಮದ ಅಧ್ಯಕ್ಷರು ಹಣ ಕೇಳಿರೋದು ನೋಡಿದ್ದೇವೆ. ದಲಿತರಿಗೆ ನೀವು ನ್ಯಾಯ ಕೊಟ್ಟಿದ್ದೀರಾ.? ಸಚಿಬರೊಬ್ಬರು ಜೈಲಿಗೆ ಹೋಗಿ ಬಂದಿದ್ದಾರೆ.

ಹಣದ ವರ್ಗಾವಣೆ ಆದಾಗ ಅದರ ಬಗ್ಗೆ ಚರ್ಚೆ ಬರಲಿದೆ. ಕಮೀಷನ್ ಏಜೆಂಟ್ ಆಗಿ ವರ್ತನೆ ಮಾಡ್ತಿದ್ದಾರೆ.ಇವರ ಬೆನ್ನು ತಟ್ಟುತ್ತಿರೋದು ಯಾರು.? ಇಷ್ಟು ದಿನ ಬೇಕಾ ಸಿಎಂ ಆದವರು ಕ್ರಮ ತೆಗೆದುಕೊಳ್ಳಲು. ಪಕ್ಷದಲ್ಲಿ ಯಾರಾದ್ರೂ ವಾಸ್ತವವಾಗಿ ಮಾತಾಡಿದ್ರೆ, ಪಕ್ಷದಿಂದ ವಜಾ ಮಾಡ್ತೀರಿ. ಮತ್ತೊಬ್ಬರನ್ನ ಜೈಲಿಗೆ ಕಳಿಸಿದ್ರಿ.

ಅಂಬೇಡ್ಕರ್ ಅವರು ಸಂವಿಧಾನ ಪುಸ್ತಕ ಬರೆದಿದ್ದಾರೆ. ರಾಹುಲ್ ಗಾಂಧಿ ಹೋದಲ್ಲೆಲ್ಲಾ ಸಂವಿಧಾನ ಪುಸ್ತಕ ಹಿಡಿದು ಹೋಗ್ತಾರೆ. ಅದರಲ್ಲಿ ಏನಿದೆ ಅಂತ ತಿಳಿಯೋ ಕೆಲಸ ಮಾಡಿದ್ದಾರಾ.? ಪ್ರಶ್ನಿಸಿದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!