ಬೆದರಿಕೆ, ಹೆದರಿಕೆಗಳಿಗೆ ಬಗ್ಗಲ್ಲ: ಉಪ ಲೋಕಾಯುಕ್ತ ಬಿ.ವೀರಪ್ಪ

Will not yield to threats and intimidation: Deputy Lokayukta B. Veerappa

ಬೆಂ.ಗ್ರಾ.ಜಿಲ್ಲೆ; ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್ ಗಳ ವಿಲೇವಾರಿ ವಿಳಂಬವಾಗುತ್ತದೆ ಎಂದು ಉಪಲೋಕಾಯುಕ್ತರಾದ ನ್ಯಾ. ಬಿ.ವೀರಪ್ಪ (B. Veerappa) ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೇವನಹಳ್ಳಿ ತಾಲ್ಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯಾದ್ಯಂತ ಲೋಕಾಯುಕ್ತದಲ್ಲಿ 25 ಸಾವಿರ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳ ಇತ್ಯರ್ಥ ಮಾಡಲು ಕ್ರಮವಹಿಸಲಾಗಿದೆ. ಇದರಲ್ಲಿ ಸುಮಾರು 10 ಸಾವಿರ ಸುಳ್ಳು ಕೇಸ್‌ಗಳು ಇವೆ. ಯಾವುದೇ ಕೇಸ್ ಬಂದರೂ ಅದನ್ನು ಕ್ರಮ ಬದ್ದವಾಗಿ ವಿಲೇವಾರಿ ಮಾಡಬೇಕು. ಸುಳ್ಳು ಪ್ರಕರಣಗಳಿಂದ ಉಳಿದ ಪ್ರಕರಣಗಳನ್ನು ಕೂಡ ಇತ್ಯರ್ಥ ಮಾಡುವುದು ಸವಾಲಿನ ಕೆಲಸವಾಗುತ್ತಿದೆ. ಇದರಿಂದ ಯಾವ ಪ್ರಕರಣಗಳಲ್ಲಿ ಸತ್ಯತೆ ಇದೆಯೋ ಅಂತಹ ಪ್ರಕರಣಗಳನ್ನು ಮಾತ್ರ ದಾಖಲಿಸಬೇಕು. ಇಲ್ಲವಾದಲ್ಲಿ ಸುಳ್ಳು ಕೇಸ್ ಹಾಕಿದ ಅರ್ಜಿದಾರರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಬಹುದು ಎಂದರು.

ಅಧಿಕಾರಿಗಳಿಗೆ ಸರ್ಕಾರಿ ಸೇವೆ ಸಿಗುವುದು ಸಾರ್ವಜನಿಕರ ಸೇವೆಗೆ ಒಂದು ಉತ್ತಮ ವೇದಿಕೆ, ಸಾರ್ವಜನಿಕರ ಕೆಲಸಗಳನ್ನು ಅನಗತ್ಯವಾಗಿ ವಿಳಂಬ ಮಾಡದೇ ತ್ವರಿತವಾಗಿ ಮುಗಿಸಬೇಕು. ಅಧಿಕಾರಿವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದರು.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮರಂಗ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬ ಮಾತುಗಳು ಜನರಿಂದ ಕೇಳಿಬರುತ್ತಿದೆ. ಅಧಿಕಾರಿಗಳು ಇದನ್ನು ಸರಿಪಡಿಸಬೇಕು. ಅಧಿಕಾರದ ಜತೆಗೆ ಸಂಸ್ಕಾರ ಕೂಡ ಇರಬೇಕು. ಅನ್ಯಾಯ, ಆಕ್ರಮದಿಂದ ಮಾಡಿದ ಆಸ್ತಿಯಿಂದ ನೆಮ್ಮದಿಯಾಗಿರಲು ಸಾಧ್ಯವಿಲ್ಲ ಎಂದರು.

ಬೆದರಿಕೆ, ಹೆದರಿಕೆಗಳಿಗೆ ಬಗ್ಗಲ್ಲ

ಕೆಲವೆಡೆ ಲೋಕಾಯುಕ್ತ ದಾಳಿ ನಡೆಸಿದ ಸಂದರ್ಭದಲ್ಲಿ ಬೆದರಿಕೆ ಹಾಕುವ ಕೆಲಸವಾಗುತ್ತದೆ. ಆದರೆ ಯಾರ ಬೆದರಿಕೆಗೂ ಬಗ್ಗಲ್ಲ. ನ್ಯಾಯಯುತವಾಗಿ ಎಲ್ಲವನ್ನೂ ವಿಚಾರಣೆ ನಡೆಸಲಾಗುತ್ತದೆ ಎಂದರು.

ವಿಐ, ಆರ್‌ಐ ಗಳ ಮಾಹಿತಿ ನೀಡಲು ಸೂಚನೆ

ಕೆಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುವ ಗ್ರಾಮಲೆಕ್ಕಿಗರು, ಕಂದಾಯ ನಿರೀಕ್ಷಕರ ಕುಟುಂಬ ವಿವರ, ಆಸ್ತಿ ವಿವರ, ಅವಲಂಬಿತ ಸದಸ್ಯರ ವಿವರವನ್ನು ಒಳಗೊಂಡ ಸಂಪೂರ್ಣ ಮಾಹಿತಿಯನ್ನು ಒಂದು ತಿಂಗಳ ಒಳಗಾಗಿ ವರದಿ ನೀಡಿ ಎಂದು ಉಪವಿಭಾಗಾಧಿಕಾರಿಗೆ ಸೂಚಿಸಿದರು.

ಮಾಜಿ ಸೈನಿಕನಿಗೆ ಸೂಕ್ತ ನ್ಯಾಯ ಒದಗಿಸಲು ಸೂಚನೆ

ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದ ಮಾಜಿ ಸೈನಿಕನ ಎರಡು ಎಕರೆ ಜಮೀನಿಗೆ ಬಗರ್ ಹುಕುಂ ಸಾಗುವಳಿ ಚೀಟಿ ವಿತರಿಸಲು ವಿಳಂಬವಾಗುತ್ತಿದೆ. ಈ ಪ್ರಕರಣದಲ್ಲಿ ಆ ಜಮೀನಿನ ಮೇಲೆ ಮಾಲಿಕರು ಪೋಸಿಶನ್ ಲಿ ಇದಾರ ಇಲ್ಲವಾ ಎಂಬುದರ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಭೂ ಒತ್ತುವರಿ, ಜಮೀನು ಸರ್ವೇ ಕಾರ್ಯ, ಸರ್ಕಾರಿ ರಸ್ತೆ, ಸ್ಮಶಾನ ಒತ್ತುವರಿ ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ, ವಿಲೇವಾರಿ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬ, ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಶಿಕೃಷ್ಣ, ಉಪ ನಿಬಂಧಕರಾದ ಅರವಿಂದ್ ಎನ್.ವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಶ್ರೀ ಶೈಲ್ ಭೀಮಸೇನ ಬಗಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಜರಿದ್ದರು.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]