Celebration of Eid Milad in Doddaballapur

ದೊಡ್ಡಬಳ್ಳಾಪುರದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ: Video ನೋಡಿ

ದೊಡ್ಡಬಳ್ಳಾಪುರ: ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ (Eid Milad) ಅನ್ನು ತಾಲೂಕಿನಾದ್ಯಂತ ಶ್ರದ್ಧಾ ಭಕ್ತಿ ಸಂಭ್ರಮಗಳಿಂದ ಆಚರಿಸಲಾಯಿತು.

ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.

ಮಸೀದಿಗಳಲ್ಲಿ ಕುರಾನ್ ಪಾರಾಯಣ ಆಚರಣೆ ನಡೆಯಿತು. ಮಸೀದಿಗಳ ಸಮೀಪದ ಹಾದಿ ಬೀದಿಗಳಲ್ಲಿ ಹಸಿರುಮಯ ಬ್ಯಾನರ್‌ಗಳು, ಬಾವುಟಗಳು, ವಿದ್ಯುತ್ ದೀಪಾಲಂಕಾರಗಳು ರಾರಾಜಿಸುತ್ತಿದ್ದವು.

ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು.

ಮಧ್ಯಾಹ್ನ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಮೌಲಿಗಳು ಕುರಾನ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಪ್ರಪಂಚದ ಸೃಷ್ಟಿಗೆ ಕಾರಣೀಭೂತರಾದ ಪ್ರವಾದಿ ಮುಹಮ್ಮದ್ ಮುಸ್ತಫಾ ಜನ್ಮ ದಿನವಾಗಿ ಈದ್ ಮಿಲಾದ್ ಮಹತ್ವ ಪಡೆದಿದೆ. ಅವರ ಬದುಕು, ನಡೆ-ನುಡಿಗಳು, ಜನರಲ್ಲಿ ತೋರಿದ ಕಾರುಣ್ಯ,ಸಮಾನತೆ, ಸಹೋದರತೆ, ಸಹನೆ, ಏಕತೆ, ದೈವ ಭಕ್ತಿ, ಎಲ್ಲವೂ ಅದ್ಬುತ, ಸರ್ವ ಕಾಲದಲ್ಲೂ ಅನುಕರಣೀಯ.

ಈದ್ ಮಿಲಾದ್‌ನಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನು ಮತ್ತು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಇದನ್ನು ಪಾಲಿಸುವ ಬಗೆಯನ್ನೂ ವಿವರಿಸಲಾಯಿತು.

ಮಹತ್ವ 🌙

ಈದ್ ಮೈಲಾದ್ ಎಂದರೆ ಪ್ರವಾದಿ ಮೊಹಮ್ಮದ್ ಪೈಗಂಬರರ ಜನ್ಮ ದಿನಾಚರಣೆ. ಇಸ್ಲಾಮಿಕ್ ಚಂದ್ರಮಾನ ಪಂಚಾಂಗದ ಪ್ರಕಾರ ರಬೀ ಉಲ್ ಅವ್ವಲ್ ತಿಂಗಳ 12ನೇ ತಾರೀಖು ಈ ದಿನವನ್ನು ಆಚರಿಸಲಾಗುತ್ತದೆ.

1500ನೇ ಈದ್ ಮೈಲಾದ್ ವಿಶೇಷತೆ

ಇಸ್ಲಾಮಿಕ್ ಇತಿಹಾಸದಲ್ಲಿ 1500ನೇ ವರ್ಷವನ್ನು ಬಹಳ ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ.

ಪೈಗಂಬರರ ಜನ್ಮದಿನವನ್ನು ನೆನೆದು, ಅವರ ಜೀವನದ ಉಪದೇಶಗಳು, ಧಾರ್ಮಿಕ ಮೌಲ್ಯಗಳು ಮತ್ತು ಮಾನವೀಯ ಸಂದೇಶಗಳನ್ನು ಪ್ರಪಂಚಕ್ಕೆ ಹಂಚಿಕೊಳ್ಳುವುದು ಇದರ ಉದ್ದೇಶ.

1500 ವರ್ಷಗಳ ಹಿಂದೆ ಪ್ರವಾದಿ ಮೊಹಮ್ಮದ್ (ಸ) ಅವರ ಮಾರ್ಗದರ್ಶನದಿಂದ ಇಸ್ಲಾಂ ಧರ್ಮವು ಪ್ರಾರಂಭವಾಗಿ ಜಗತ್ತಿನಾದ್ಯಂತ ಶಾಂತಿ, ಸಮಾನತೆ ಮತ್ತು ಸಹೋದರತ್ವವನ್ನು ಸಾರಿದೆ.

ಈ ವಿಶೇಷ ವರ್ಷದಲ್ಲಿ ಮುಸ್ಲಿಮರು ಕುರ್’ಆನ್ ಪಠಣ, ಮದೀನಾ ಶರೀಫ್ ಜಪ, ದರ್ಸ್, ಜುಲೂಸ್ ಮತ್ತು ಉಪನ್ಯಾಸ ಕಾರ್ಯಕ್ರಮಗಳು ಮೂಲಕ ಪೈಗಂಬರರ ಜೀವನವನ್ನು ನೆನಪಿಸಿಕೊಳ್ಳುತ್ತಾರೆ.

1500ನೇ ಈದ್ ಮೈಲಾದ್ ಆಚರಣೆ ಮಾನವ ಸಮಾಜಕ್ಕೆ ಶಾಂತಿ, ಪ್ರೀತಿ, ಪರಸ್ಪರ ಗೌರವ ಮತ್ತು ಸಹಕಾರದ ಸಂದೇಶವನ್ನು ನೀಡುತ್ತದೆ ಎಂದು ಶಿಕ್ಷಕ ದಾದಾ ಪೀರ್ ತಿಳಿಸಿ.

ರಾಜಕೀಯ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video ಹಂಚಿಕೊಂಡ ಬಿ.ವೈ. ವಿಜಯೇಂದ್ರ

CKR – 45 ಅಂಬಾಸಿಡರ್ ಕಾರಿನ ಜತೆ ಬಿಜೆಪಿ ನಾಯಕರ ಒಡನಾಟ: Video

ಬಿ.ಎಸ್.ಯಡಿಯೂರಪ್ಪನವರು ಪಕ್ಷದ ರಾಜ್ಯದ ಅಧ್ಯಕ್ಷರಾಗಿ ಆಯ್ಕೆಗೊಂಡ ನಂತರದಲ್ಲಿ ಒಂದು ಅಂಬಾಸಿಡರ್ ಕಾರು ಬಳಸುತ್ತಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="113561"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ದೊಡ್ಡಬಳ್ಳಾಪುರ: R.L.ಜಾಲಪ್ಪ ಕಾಲೇಜಿನಲ್ಲಿ ಮೇಜರ್ ಧ್ಯಾನ್‌ ಚಂದ್ ಜನ್ಮದಿನಾಚರಣೆ

ಹಾಕಿ ದಂತಕಥೆ ಮೇಜರ್ ಧ್ಯಾನ್‌ ಚಂದ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಗರದ ಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ (R.L. Jalappa Technical College) ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

[ccc_my_favorite_select_button post_id="113312"]
ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತೆ ಜತೆ ಗ್ರಾಮಪಂಚಾಯಿತಿ ಅಧ್ಯಕ್ಷ ಮದುವೆ..!

ಅಪ್ರಾಪ್ತ ಬಾಲಕಿಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷ (Gram Panchayat President) ವಿವಾಹವಾಗಿರುವ ಘಟನೆ ಜಿಲ್ಲೆಯ

[ccc_my_favorite_select_button post_id="113387"]
Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

Accident; ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣ ಸಾವು

ಲಾರಿಯಡಿ ಸಿಲುಕಿ ಬೈಕ್ ಸವಾರ ರೈತ ಧಾರುಣವಾಗಿ ಸಾವಪ್ಪಿರುವ ಘಟನೆ (Accident) ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಚದುಲಪುರ ಗೇಟ್ ಬಳಿ ಘಟನೆ ನಡೆದಿದೆ.

[ccc_my_favorite_select_button post_id="113528"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!