Teachers' Day celebrations at MSV Public School

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶಾಲೆ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಶಿಕ್ಷಕರ ದಿನಾಚರಣೆಯನ್ನು (Teachers’ Day) ಸಂಭ್ರಮದಿಂದ ಆಚರಿಸಲಾಯಿತು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಕ್ಕಳು ನಡೆಸಿಕೊಟ್ಟರು.

ಶಿಕ್ಷಕರಿಗಾಗಿ ಮನರಂಜನಾ ಕ್ರೀಡೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಎ. ಸುಬ್ರಮಣ್ಯ ಮಾತನಾಡಿ, ಗುರು ಕೇವಲ ಪದವಲ್ಲ, ಗುರುವಿಗಿಂತಲೂ ಮಿಗಿಲಾದುದು ಯಾವುದೂ ಇಲ್ಲ. ಏಕೆಂದರೆ ನಮ್ಮ ಬಾಳಿನ ಅಂಧಕಾರವನ್ನು ತೊಲಗಿಸುವ ನಮ್ಮ ಬಾಳಿಗೆ ಬೆಳಕು ನೀಡುವ ಆಶಾಕಿರಣವೇ ಗುರು. ವಿದ್ಯಾರ್ಥಿ ಜೀವನದಲ್ಲಿ ಏನೇ ಮಹತ್ತರ ಸಾಧನೆ ಮಾಡಲು ಗುರುವಿನ ಮಾರ್ಗದರ್ಶನ ಬಹಳ ಮುಖ್ಯ ಮುಂದೆ ಗುರಿಯಿರಬೇಕು. ಹಿಂದೆ ಗುರುವಿರಬೇಕು ಆಗ ವಿದ್ಯಾರ್ಥಿ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಲು ಸಾಧ್ಯವಾಗುತ್ತದೆ.

ಹೀಗೆ ಶಿಕ್ಷಕರ ಹುದ್ದೆಯನ್ನು ಬಹಳ ಆನಂದಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿ ನಂತರ ನಮ್ಮ ದೇಶದ ರಾಷ್ಟ್ರಪತಿ ಸ್ಥಾನದವರೆಗೆ ಏರಿದ ಮಹಾನ್ ಚೇತನ ನಮ್ಮ ನೆಚ್ಚಿನ ಗುರುಗಳಾದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನ ಇವರ ಜನ್ಮದಿನವನ್ನು ದೇಶದಾದ್ಯಂತ ಶಿಕ್ಷಕರ ದಿನವನ್ನಾಗಿ ಆಚರಿಸುತ್ತೇವೆ.

ರಾಧಾಕೃಷ್ಣನ್ ರವರು ಕೊಲ್ಕತ್ತಾ ವಿಶ್ವವಿದ್ಯಾಲಯದ ತತ್ವ ಶಾಸ್ತ್ರದ ಪ್ರಾಧ್ಯಾಪಕರಾಗಿ ನೇಮಕಗೊಂಡಾಗ ಮೈಸೂರಿನಿಂದ ಹೊರಟ ದಿನ ಅವರಿಗೆ ಕೊಟ್ಟಂತಹ ವೈಭವದ ಬೀಳ್ಕೊಡುಗೆ ಯಾವ ಚಕ್ರವರ್ತಿಗೂ ದೊರತಿರಲಾರದು. ಅಂದಿನ ವಾತಾವರಣದಲ್ಲಿದ್ದುದು ವೈಭವಕ್ಕಿಂತ ಹೆಚ್ಚಾಗಿ ಹೃದಯದಿಂದ ನೇರವಾಗಿ ಹೊರಹೊಮ್ಮಿದ ಗುರುಪ್ರೇಮ ವಿದ್ಯಾರ್ಥಿಗಳೆಲ್ಲರಲ್ಲೂ ಭಕ್ತಿ ಪ್ರೇಮದ ಚಿಲುಮೆ ಉಕ್ಕಿ ಬಂತು. ರಾಧಾಕೃಷ್ಣನ್ ಅವರನ್ನೂ ಮಹಾರಾಜ ಕಾಲೇಜಿನಿಂದ ರೈಲು ನಿಲ್ದಾಣಕ್ಕೆ ಕರೆದೊಯ್ಯುವಾಗ ಸಾರೋಟಿಗೆ ಕುದುರೆಯನ್ನು ಕಟ್ಟಲಿಲ್ಲ, ಸ್ವತಃ ವಿದ್ಯಾರ್ಥಿಗಳೇ ಎಳೆದೊಯ್ದರು.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ರಾಧಾಕೃಷ್ಣನ್ ರವರ ಕಾಂಪಾರ್ಟ್ ಮೆಂಟನ್ನು ಒರಗು ದಿಂಬು ಹಾಗೂ ರತ್ನಗಂಬಳಿಯನ್ನು ಹಾಕಿ ಮಲಗುವ ಸೀಟನ್ನು ನೆಲವನ್ನು ಹೂವಿನಿಂದ ಸುಪ್ಪತ್ತಿಗೆಯಂತೆ ಮಾಡಿ ದೈವ ಮಂದಿರದಂತೆ ಅಲಂಕಾರ ಮಾಡಿದ್ದರು ಎಂದು ತಿಳಿಸಿದರು.

ಉಪಾಧ್ಯಕ್ಷ ಸ್ವರೂಪ್ ಮಾತನಾಡಿ, ಇತ್ತೀಚೆಗೆ ಬಾಹ್ಯಾಕಾಶಕ್ಕೆ ಹೋಗಿ ಬಂದ ಭಾರತದ ಹೆಮ್ಮೆಯ ಪುತ್ರ ಶುಭಾಂಶು ಶುಕ್ಲರವರ ಸಾಧನೆಯನ್ನು ಹಾಗೂ ಅವರು ಅಲ್ಲಿ ಕೈಗೊಂಡ ಅಧ್ಯಾಯಗಳ ಬಗ್ಗೆ, ಇದಕ್ಕೆ ಅವರ ಮಾರ್ಗದರ್ಶಕ ಗುರುಗಳ ಬಗ್ಗೆ ಅವರ ಮಹತ್ತರ ಕೊಡುಗೆಯ ಬಗ್ಗೆ ಹಾಗೇಯೇ ಮಕ್ಕಳಲ್ಲಿ ಭವಿಷ್ಯದ ಭರವಸೆಗಳನ್ನು ಮೂಡಿಸಿದರು. ಮತ್ತು ಮಕ್ಕಳು ಶುಭಾಂಶು ಶುಕ್ಲರವರಂತೆ ಅಗಾಧವಾದುದನ್ನು ಸಾಧಿಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ರೆಮ್ಯ ಬಿ.ವಿ. ಮಾತನಾಡಿ, ರಾಮಕೃಷ್ಣ ಪರಮಹಂಸ ಹಾಗೂ ವಿವೇಕಾನಂದರ ಗುರುಶಿಷ್ಯರ ಸಂಬಂಧದ ಬಗ್ಗೆ ತಿಳಿಸಿದರು. ಹಾಗೆಯೇ ವಿವೇಕಾನಂದರು ಜಗತ್ತಿಗೆ ನೀಡಿದ ಸಂದೇಶಗಳ ಬಗ್ಗೆ ಅವರು ಪಾಲಿಸಿದ ಶಿಸ್ತು ಸಂಯಮದ ಬಗ್ಗೆ ಹಾಗೂ ಅವರಲ್ಲಿದ್ದ ಏಕಾಗ್ರತೆಯ ಛಲ, ಧೈರ್ಯ ಸಾಹಸ ಗುಣಗಳನ್ನು ಕೊಂಡಾಡಿದರು.

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!