ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

Teachers' Day celebrations at MSV Public School

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶಾಲೆ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ (MSV Public School) ಶಿಕ್ಷಕರ ದಿನಾಚರಣೆಯನ್ನು (Teachers’ Day) ಸಂಭ್ರಮದಿಂದ ಆಚರಿಸಲಾಯಿತು.

ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಕ್ಕಳು ನಡೆಸಿಕೊಟ್ಟರು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಶಿಕ್ಷಕರಿಗಾಗಿ ಮನರಂಜನಾ ಕ್ರೀಡೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಸಂಸ್ಥೆಯ ಅಧ್ಯಕ್ಷರಾದ ಎ. ಸುಬ್ರಮಣ್ಯ ಮಾತನಾಡಿ, ಗುರು ಕೇವಲ ಪದವಲ್ಲ, ಗುರುವಿಗಿಂತಲೂ ಮಿಗಿಲಾದುದು ಯಾವುದೂ ಇಲ್ಲ. ಏಕೆಂದರೆ ನಮ್ಮ ಬಾಳಿನ ಅಂಧಕಾರವನ್ನು ತೊಲಗಿಸುವ ನಮ್ಮ ಬಾಳಿಗೆ ಬೆಳಕು ನೀಡುವ ಆಶಾಕಿರಣವೇ ಗುರು. ವಿದ್ಯಾರ್ಥಿ ಜೀವನದಲ್ಲಿ ಏನೇ ಮಹತ್ತರ ಸಾಧನೆ ಮಾಡಲು ಗುರುವಿನ ಮಾರ್ಗದರ್ಶನ ಬಹಳ ಮುಖ್ಯ ಮುಂದೆ ಗುರಿಯಿರಬೇಕು. ಹಿಂದೆ ಗುರುವಿರಬೇಕು ಆಗ ವಿದ್ಯಾರ್ಥಿ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಲು ಸಾಧ್ಯವಾಗುತ್ತದೆ.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಹೀಗೆ ಶಿಕ್ಷಕರ ಹುದ್ದೆಯನ್ನು ಬಹಳ ಆನಂದಿಸಿ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿಗೆ ಆಶಾಕಿರಣವಾಗಿ ನಂತರ ನಮ್ಮ ದೇಶದ ರಾಷ್ಟ್ರಪತಿ ಸ್ಥಾನದವರೆಗೆ ಏರಿದ ಮಹಾನ್ ಚೇತನ ನಮ್ಮ ನೆಚ್ಚಿನ ಗುರುಗಳಾದ ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಇವರ ಜನ್ಮದಿನ ಇವರ ಜನ್ಮದಿನವನ್ನು ದೇಶದಾದ್ಯಂತ ಶಿಕ್ಷಕರ ದಿನವನ್ನಾಗಿ ಆಚರಿಸುತ್ತೇವೆ.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ರಾಧಾಕೃಷ್ಣನ್ ರವರು ಕೊಲ್ಕತ್ತಾ ವಿಶ್ವವಿದ್ಯಾಲಯದ ತತ್ವ ಶಾಸ್ತ್ರದ ಪ್ರಾಧ್ಯಾಪಕರಾಗಿ ನೇಮಕಗೊಂಡಾಗ ಮೈಸೂರಿನಿಂದ ಹೊರಟ ದಿನ ಅವರಿಗೆ ಕೊಟ್ಟಂತಹ ವೈಭವದ ಬೀಳ್ಕೊಡುಗೆ ಯಾವ ಚಕ್ರವರ್ತಿಗೂ ದೊರತಿರಲಾರದು. ಅಂದಿನ ವಾತಾವರಣದಲ್ಲಿದ್ದುದು ವೈಭವಕ್ಕಿಂತ ಹೆಚ್ಚಾಗಿ ಹೃದಯದಿಂದ ನೇರವಾಗಿ ಹೊರಹೊಮ್ಮಿದ ಗುರುಪ್ರೇಮ ವಿದ್ಯಾರ್ಥಿಗಳೆಲ್ಲರಲ್ಲೂ ಭಕ್ತಿ ಪ್ರೇಮದ ಚಿಲುಮೆ ಉಕ್ಕಿ ಬಂತು. ರಾಧಾಕೃಷ್ಣನ್ ಅವರನ್ನೂ ಮಹಾರಾಜ ಕಾಲೇಜಿನಿಂದ ರೈಲು ನಿಲ್ದಾಣಕ್ಕೆ ಕರೆದೊಯ್ಯುವಾಗ ಸಾರೋಟಿಗೆ ಕುದುರೆಯನ್ನು ಕಟ್ಟಲಿಲ್ಲ, ಸ್ವತಃ ವಿದ್ಯಾರ್ಥಿಗಳೇ ಎಳೆದೊಯ್ದರು.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಸರಸ್ವತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

ರಾಧಾಕೃಷ್ಣನ್ ರವರ ಕಾಂಪಾರ್ಟ್ ಮೆಂಟನ್ನು ಒರಗು ದಿಂಬು ಹಾಗೂ ರತ್ನಗಂಬಳಿಯನ್ನು ಹಾಕಿ ಮಲಗುವ ಸೀಟನ್ನು ನೆಲವನ್ನು ಹೂವಿನಿಂದ ಸುಪ್ಪತ್ತಿಗೆಯಂತೆ ಮಾಡಿ ದೈವ ಮಂದಿರದಂತೆ ಅಲಂಕಾರ ಮಾಡಿದ್ದರು ಎಂದು ತಿಳಿಸಿದರು.

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದ ಎಂ‌ಎಸ್‌ವಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಡಗರ

ಉಪಾಧ್ಯಕ್ಷ ಸ್ವರೂಪ್ ಮಾತನಾಡಿ, ಇತ್ತೀಚೆಗೆ ಬಾಹ್ಯಾಕಾಶಕ್ಕೆ ಹೋಗಿ ಬಂದ ಭಾರತದ ಹೆಮ್ಮೆಯ ಪುತ್ರ ಶುಭಾಂಶು ಶುಕ್ಲರವರ ಸಾಧನೆಯನ್ನು ಹಾಗೂ ಅವರು ಅಲ್ಲಿ ಕೈಗೊಂಡ ಅಧ್ಯಾಯಗಳ ಬಗ್ಗೆ, ಇದಕ್ಕೆ ಅವರ ಮಾರ್ಗದರ್ಶಕ ಗುರುಗಳ ಬಗ್ಗೆ ಅವರ ಮಹತ್ತರ ಕೊಡುಗೆಯ ಬಗ್ಗೆ ಹಾಗೇಯೇ ಮಕ್ಕಳಲ್ಲಿ ಭವಿಷ್ಯದ ಭರವಸೆಗಳನ್ನು ಮೂಡಿಸಿದರು. ಮತ್ತು ಮಕ್ಕಳು ಶುಭಾಂಶು ಶುಕ್ಲರವರಂತೆ ಅಗಾಧವಾದುದನ್ನು ಸಾಧಿಸಬೇಕು ಎಂದು ತಿಳಿಸಿದರು.

ಸಂಸ್ಥೆಯ ಪ್ರಾಂಶುಪಾಲರಾದ ರೆಮ್ಯ ಬಿ.ವಿ. ಮಾತನಾಡಿ, ರಾಮಕೃಷ್ಣ ಪರಮಹಂಸ ಹಾಗೂ ವಿವೇಕಾನಂದರ ಗುರುಶಿಷ್ಯರ ಸಂಬಂಧದ ಬಗ್ಗೆ ತಿಳಿಸಿದರು. ಹಾಗೆಯೇ ವಿವೇಕಾನಂದರು ಜಗತ್ತಿಗೆ ನೀಡಿದ ಸಂದೇಶಗಳ ಬಗ್ಗೆ ಅವರು ಪಾಲಿಸಿದ ಶಿಸ್ತು ಸಂಯಮದ ಬಗ್ಗೆ ಹಾಗೂ ಅವರಲ್ಲಿದ್ದ ಏಕಾಗ್ರತೆಯ ಛಲ, ಧೈರ್ಯ ಸಾಹಸ ಗುಣಗಳನ್ನು ಕೊಂಡಾಡಿದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]