BJP conspiracy against Dharmasthala: D.K. Shivakumar

ಧರ್ಮಸ್ಥಳ ವಿರುದ್ಧ ಬಿಜೆಪಿ ಷಡ್ಯಂತ್ರ: ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಹೈ ಕೋರ್ಟ್ ಮೆಟ್ಟಿಲೇರಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಸಿಎಂ ಈಗಾಗಲೇ ಉತ್ತರ ನೀಡಿದ್ದಾರೆ. ಅವರ ಪಕ್ಷ ಅವರನ್ನು (ಪ್ರತಾಪ್ ಸಿಂಹ) ಕಡೆಗಣಿಸಿದೆ. ಪಾಪ ಆತನಿಗೂ ರಾಜಕೀಯ ಮಾಡಬೇಕಿದೆ. ಹೀಗಾಗಿ ತನ್ನ ಅಸ್ತಿತ್ವ ತೋರಿಸಿಕೊಳ್ಳಲು ಹೀಗೆಲ್ಲಾ ಮಾಡುತ್ತಿದ್ದಾರೆ. ಈ ಬಗ್ಗೆ ಕೋರ್ಟ್ ವಿಚಾರಣೆ ಮಾಡಿ, ತೀರ್ಮಾನ ಮಾಡಲಿದೆ” ಎಂದರು.

ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ. ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ” ಎಂದು ಹರಿಹಾಯ್ದರು.

ಬಿಜೆಪಿ ನಾಯಕರಿಂದಲೇ ಧರ್ಮಸ್ಥಳಕ್ಕೆ ಅಪಮಾನ

“ಧರ್ಮಸ್ಥಳ ವಿಚಾರದಲ್ಲಿ ಸತ್ಯಾಂಶ ಒದಗಿಸಿರುವವರು ನಾವು. ಆದರೆ ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್ ನಲ್ಲಿ ಹೊರಟಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಬಲಿಪಶು ಮಾಡುತ್ತಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ” ಎಂದು ಕಿಡಿಕಾರಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸುವ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಒಂದೆರಡು ದಿನಗಳಲ್ಲಿ ಬಿಜೆಪಿಯವರು ಮಾಡಿರುವ ಕಾನೂನನ್ನು ನಿಮ್ಮ ಮುಂದೆ ತಂದಿಡುತ್ತೇನೆ. ಅವರು ಮಾಡಿರುವ ಕಾನೂನಿನಲ್ಲಿ ಈ ಚುನಾವಣೆ ವೇಳೆ ಮತಯಂತ್ರ ಅಥವಾ ಮತಪತ್ರ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ? ಅವರು ಮಾಡಿರುವ ಕಾನೂನು ಪ್ರಕಾರ ನಡೆದರೆ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

ರಾಜಕೀಯ

ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ಡಿಸಿಎಂಗೆ ನಾಗರಿಕರ ಬೆಂಬಲ

ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ಡಿಸಿಎಂಗೆ ನಾಗರಿಕರ ಬೆಂಬಲ

"ಟ್ರಾಫಿಕ್ ಸಮಸ್ಯೆ ನೀಗಿಸಲು ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರೆಯಿರಿ", ಡಿಸಿಎಂ (DCM) "ಡಿ.ಕೆ. ಶಿವಕುಮಾರ್ (D.K. Shivakumar) ಅವರು ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ

[ccc_my_favorite_select_button post_id="115357"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!