Postcard News founder Mahesh Vikram Hegde arrested

ಕೋಮು ಪ್ರಚೋದನೆ ಆರೋಪ: ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಬೆಂಗಳೂರು: ಕೋಮು ಪ್ರಚೋದನೆ, ಸಿಎಂ ಸಿದ್ದರಾಮಯ್ಯ (Cmsiddaramaiah) ಅವರ ಬಗ್ಗೆ ಅವಹೇಳನ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ (Mahesh Vikram Hegde) ಅವರನ್ನು ಮೂಡುಬಿದಿರೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೊ ಎಡಿಟ್ ಮಾಡಿ ಮುಖ್ಯಮಂತ್ರಿಗಳೇ, “ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿ ಮೇಲೆ ಬುಲ್ಲೋಜರ್ ನುಗ್ಗಿಸಿ ” ಎಂಬ ಶೀರ್ಷಿಕೆ ಇದ್ದ ಪೋಸ್ಟರ್ ಅನ್ನು ಮಹೇಶ್ ವಿಕ್ರಮ್ ಹೆಗ್ಡೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಎರಡು ಧರ್ಮಗಳ ನಡುವೆ ದ್ವೇಷ ಭಾವನೆ ಮೂಡಿಸಿ ಕೋಮುಗಲಭೆ ಸೃಷ್ಟಿಸುವ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಉದ್ದೇಶದಿಂದ ಈ ಪೋಸ್ಟ್ ನ್ನು ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿದ ಪೊಲೀಸರು ಆರೋಪಿ ಮಹೇಶ್ ವಿಕ್ರಂ ಹೆಗ್ಡೆಯನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದರು.

ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಯತ್ನಾಳ್ ಆಕ್ರೋಶ

ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರು ಹಾಗೂ ಕರಾವಳಿಯ ಹಿಂದುತ್ವದ ಧ್ವನಿ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೊತ್ತಾಗಿದೆ. ಪ್ರಖರ ಹಿಂದುತ್ವವಾದಿಗಳನ್ನು ಹೆಡೆಮುರಿಕಟ್ಟಲು ಸರ್ಕಾರ ಯಾವುದೇ ಕಾರಣಗಳಿಲ್ಲದೆ ಬಂಧಿಸುತ್ತಿರುವುದು ಪ್ರಜಾಪ್ರಭುತ್ವದ ಅಣಕ ಎಂದರೆ ತಪ್ಪಾಗಲಾರದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಹಳೆ ಮೈಸೂರಿನಲ್ಲಿ ಈಗಾಗಲೇ ಹಿಂದೂಗಳು ಸಿಡಿದೆದ್ದಿರುವುದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ಹಿಂದುತ್ವಕ್ಕೆ ಪಕ್ಷಾತೀತವಾದ ಬೆಂಬಲ ಸಿಗುತ್ತಿರುವುದು ಸರ್ಕಾರಕ್ಕೆ ಅದರಲ್ಲೂ ಮುಖ್ಯ ಮಂತ್ರಿಗಳಿಗೆ ಅಪಥ್ಯವಾಗಿದೆ.

ಹಿಂದುತ್ವದ ಅಲೆಯನ್ನು ಕಟ್ಟಿಹಾಕಲು ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಿರುವುದು ಖಂಡನೀಯ ಹಾಗೂ ಕಾನೂನುಬಾಹಿರ ಕ್ರಮವಾಗಿದೆ.

ಸಕಾರಣವಿಲ್ಲದೆ ಬಂಧಿಸಿರುವ ಅವರನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಜನಾಕ್ರೋಶದ ಜ್ವಾಲೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗುವುದು ನಿಶ್ಚಿತ ಎಂದಿದ್ದಾರೆ.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

7 ವರ್ಷಗಳ ಬಳಿಕ ಮೋದಿ ಚೀನಾ ಭೇಟಿ.. ಭಾರತಕ್ಕೆ ದೊರೆತಿದ್ದೇನು..! ವಿಶ್ಲೇಷಣೆ

ಪ್ರಧಾನಿ ನರೇಂದ್ರ ಮೋದಿ (Narendra modi) ಅವರು ತಮ್ಮ 2 ದಿನಗಳ ಚೀನಾ ಭೇಟಿಯನ್ನು ಮುಗಿಸಿ ದೇಶಕ್ಕೆ ಮರಳಿದ್ದಾರೆ. ಇದನ್ನು ಅವರು 'ಉತ್ಪಾದಕ' ಭೇಟಿ ಎಂದು ಬಣ್ಣಿಸಿದ್ದಾರೆ.

[ccc_my_favorite_select_button post_id="113432"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

ದೊಡ್ಡಬಳ್ಳಾಪುರ: ಯುವಕ ಆತ್ಮಹತ್ಯೆ..! ಕಾರಣ ನಿಗೂಢ

22ವರ್ಷದ ಯುವಕ ನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ** ಬುಧವಾರ ರಾತ್ರಿ ನಡೆದಿದೆ.

[ccc_my_favorite_select_button post_id="113770"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!