Enter Vokkaliga in caste column no. 9: Harish Gowda

ಜಾತಿ ಕಾಲಂ ನಂ.9 ರಲ್ಲಿ ಒಕ್ಕಲಿಗ ಎಂದು ನಮೂದಿಸಿ: ಹರೀಶ್ ಗೌಡ ಮನವಿ

ದೊಡ್ಡಬಳ್ಳಾಪುರ: ರಾಜ್ಯದ ಎಲ್ಲ ಸಮುದಾಯಗಳ ಸ್ಥಿತಿಗತಿಯನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು, ಸಮೀಕ್ಷೆಗೆ ಬರುವ ಗಣತಿದಾರರಿಗೆ ತಾಲೂಕಿನ ಒಕ್ಕಲಿಗ (Vokkaliga) ಸಮುದಾಯದವರು ಸೂಕ್ತ ಮಾಹಿತಿ ಕೊಡುವ ಮೂಲಕ ಸಹಕರಿಸಬೇಕು ಎಂದು ಜೆಡಿಎಸ್ ಹಿರಿಯ ಮುಖಂಡ ಹರೀಶ್ ಗೌಡ (Harish Gowda) ಮನವಿ ಮಾಡಿದರು.

ಈ ಕುರಿತಂತೆ ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಇದೇ ತಿಂಗಳ 22ರಿಂದ ಕರ್ನಾಟಕ ರಾಜ್ಯಾದ್ಯಂತ ಹಮ್ಮಿಕೊಂಡಿರುವುದರಿಂದ ಗಣತಿದಾರರು ತಮ್ಮ ಮನೆಗೆ ಬಂದಾಗ ಒಕ್ಕಲಿಗ ಸಮಾಜದ ಬಂಧುಗಳು ಸರ್ಕಾರದಿಂದ ಸಾಮಾಜಿಕ, ಶಿಕ್ಷಣ, ಆರ್ಥಿಕ ಹಾಗೂ ಉದ್ಯೋಗ ಇತ್ಯಾದಿ ಸರ್ಕಾರದ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ನಮ್ಮ ಸಮಾಜದ “ಜಾತಿ ಕಾಲಂ ನಂ.9 ರಲ್ಲಿ ಸರ್ಕಾರದ ಗೆಜೆಟ್ ನಂ. 1541 ಒಕ್ಕಲಿಗ” ಎಂಬುದಾಗಿ ಕಡ್ಡಾಯವಾಗಿ ನಮೂದಿಸಬೇಕು ಎಂದರು.

ಉಪಜಾತಿ ಕಾಲಂನಲ್ಲಿ ಉಪಪಂಗಡ ತಿಳಿದಿದ್ದರೆ ನಮೂದಿಸಿ ಇಲ್ಲವಾದಲ್ಲಿ “ಒಕ್ಕಲಿಗ” ಎಂದು ಜಾತಿಯನ್ನು ನಮೂದಿಸಬೇಕು. ಇನ್ನಿತರ ಯಾವುದೇ ಪರ್ಯಾಯ ಜಾತಿಗಳ ಪದನಾಮಗಳನ್ನು ಬರೆಯಿಸಬಾರದು.

ಸಮಾಜದ ವಿದ್ಯಾರ್ಥಿಗಳು ಕಡ್ಡಾಯವಾಗಿ ಈ ಸಮೀಕ್ಷೆಯಲ್ಲಿ ಭಾಗವಹಿಸಿ ತಮ್ಮ ಕುಟುಂಬಗಳ ವಿವರವನ್ನು ಸಮೀಕ್ಷೆದಾರರಿಗೆ ನೀಡಿ, ನಮ್ಮ ಜನಸಂಖ್ಯೆಯ ನಿಖರವಾದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಮಾಹಿತಿಯನ್ನು ಸರ್ಕಾರಕ್ಕೆ ಒದಗಿಸಿ ನಮ್ಮ ಜನಸಂಖ್ಯೆಯ ಅನುಗುಣವಾಗಿ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳನ್ನು ಪಡೆದುಕೊಳ್ಳಬೇಕೆಂದು ಕೋರಿದರು.

ನಾಳೆ ನಿರ್ಮಲಾನಂದ ಸ್ವಾಮೀಜಿ ದೊಡ್ಡಬಳ್ಳಾಪುರದಲ್ಲಿ ಸಭೆ

ರಾಜ್ಯ ಸರ್ಕಾರ ನೆಡೆಸಲಿರುವ ಸಮೀಕ್ಷೆಯಲ್ಲಿ ಸಮುದಾಯದ ಜನತೆ ಭಾಗವಹಿಸುವಿಕೆ ಹಾಗೂ ಮಾಹಿತಿ ನೀಡುವ ಕುರಿತು ಅರಿವು ಮೂಡಿಸುವ ಸಲುವಾಗಿ ಸೋಮವಾರ (ಸೆ. 15)ದಂದು ಆದಿಚುಂಚನಗಿರಿ ಮಹಾಸ್ವಾಮಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಒಕ್ಕಲಿಗರ ಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು ತಾಲೂಕಿನ ಒಕ್ಕಲಿಗ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಇದೇ ವೇಳೆ ಮನವಿ ಮಾಡಿದರು.

ಸಮೀಕ್ಷೆಯಲ್ಲಿ 60 ಪ್ರಶ್ನೆಗಳಿದ್ದು, ಕುಟುಂಬದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕೇಳಲಾಗುತ್ತದೆ. ಒಕ್ಕಲಿಗ ಸಮುದಾಯದ ಹೆಸರನ್ನು ಸರಿಯಾಗಿ ನಮೂದಿಸಬೇಕು. ಸಮುದಾಯ ಬಂಧುಗಳು ಸೂಕ್ತ ರೀತಿಯಲ್ಲಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಹರೀಶ್ ಗೌಡ ಕೋರಿದರು

ರಾಜಕೀಯ

ಜಾತಿ ಕಾಲಂ ನಂ.9 ರಲ್ಲಿ ಒಕ್ಕಲಿಗ ಎಂದು ನಮೂದಿಸಿ: ಹರೀಶ್ ಗೌಡ ಮನವಿ

ಜಾತಿ ಕಾಲಂ ನಂ.9 ರಲ್ಲಿ ಒಕ್ಕಲಿಗ ಎಂದು ನಮೂದಿಸಿ: ಹರೀಶ್ ಗೌಡ ಮನವಿ

ದೊಡ್ಡಬಳ್ಳಾಪುರ: ರಾಜ್ಯದ ಎಲ್ಲ ಸಮುದಾಯಗಳ ಸ್ಥಿತಿಗತಿಯನ್ನು ತಿಳಿಯುವ ಸಲುವಾಗಿ ರಾಜ್ಯ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿದ್ದು, ಸಮೀಕ್ಷೆಗೆ ಬರುವ ಗಣತಿದಾರರಿಗೆ ತಾಲೂಕಿನ ಒಕ್ಕಲಿಗ (Vokkaliga) ಸಮುದಾಯದವರು ಸೂಕ್ತ ಮಾಹಿತಿ ಕೊಡುವ ಮೂಲಕ

[ccc_my_favorite_select_button post_id="113900"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!