ಬೆಂ.ಗ್ರಾ.ಜಿಲ್ಲೆ: ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ‘ಸ್ವಚ್ಛತಾ ಹೀ ಸೇವಾ ಪಾಕ್ಷಿಕ’ವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 02 ರ ವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-2025 ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಆಂದೋಲನದಲ್ಲಿ ಪಾಲ್ಗೊಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ (Dr. K.N. Anuradha) ತಿಳಿಸಿದ್ದಾರೆ.
ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್- 2 ನ್ನು ‘ಸ್ವಚ್ಛ ಭಾರತ ದಿನ’ವನ್ನಾಗಿ ಆಚರಿಸಲಾಗುತ್ತದೆ.
ಸ್ವಚ್ಛ ಭಾರತ ಅಭಿಯಾನದ 11ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಈ ಯೋಜನೆಯ ಸಾಧನೆಯ ಮೈಲಿಗಲ್ಲನ್ನು ಗೌರವಿಸಲು ಸ್ವಚ್ಚತಾ ಹೀ ಸೇವಾ (ಎಸ್.ಎಚ್.ಎಸ್-2025) ಅಭಿಯಾನವನ್ನು ಸೆಪ್ಟೆಂಬರ್-17 ರಿಂದ ಅಕ್ಟೋಬರ್ 02 ವರೆಗೆ ಸ್ವಭಾವ್ ಸ್ವಚ್ಛತಾ- ಸಂಸ್ಕಾರ್ ಸ್ವಚ್ಛತಾ” ಎಂಬ ಧ್ಯೆಯದೊಂದಿಗೆ ಆಚರಿಸಲಾಗುತ್ತಿದೆ. ಈ ಅಭಿಯಾನವು ಸ್ವಚ್ಛತೆ ಹಾಗೂ ನೈರ್ಮಲ್ಯತೆಗಾಗಿ ಮಾಡಲಾಗುತ್ತಿದೆ.
ಈ ಅಭಿಯಾನವನ್ನು ಸಾರ್ವಜನಿಕರು ಭಾಗವಹಿಸುವಿಕೆಯೊಂದಿಗೆ ನೈರ್ಮಲ್ಯಧಾರಣೆಗೆ ಪ್ರಶಸ್ತ್ಯ ನೀಡುವ ಮೂಲಕ ಎಲ್ಲಾ ನಾಗರೀಕರು ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಎಲ್ಲೆಲ್ಲಿ ಕಸದ ರಾಶಿಗಳು ಇದೆ ಅವುಗಳನ್ನು ಸ್ವಚ್ಛತೆ ಮಾಡುವ ಮೂಲಕ , ನೈರ್ಮಲ್ಯ ಸಾಧಿಸಬೇಕು. ಹಾಗೆಯೇ ‘ಸ್ವಚ್ಛತಾ ಹೀ ಸೇವಾ ಆಂದೋಲನ’ದ ಭಾಗವಾಗಿ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯಲಿದೆ.
ಸ್ವಚ್ಛತಾ ಕಾರ್ಯಕ್ರಮಗಳು ಹಮ್ಮಿಕೊಂಡು ಕಾರ್ಯಕ್ರಮಗಳ ಪೋಟೋ, ವಿಡಿಯೋ ಗಳನ್ನು ಸ್ವಚ್ಛತಾ ಹೀ ಸೇವಾ ವೆಬ್ಸೈಟ್ https://swachhatahiseva.com ಲಿಂಕ್ ನಲ್ಲಿ ಅಪ್ಲೋಡ್ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಆಂದೋಲನ ಯಶಸ್ವಿಗೊಳಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.