Dr. Vishnuvardhan's 75th birthday celebration in Doddaballapur..

ದೊಡ್ಡಬಳ್ಳಾಪುರದಲ್ಲಿ ಡಾ.ವಿಷ್ಣುವರ್ಧನ್ 75ನೇ ಜನ್ಮ ದಿನಾಚರಣೆ.. ರಕ್ತದಾನ ಶಿಬಿರ, ವಿವಿಧ ಸೇವಾ ಕಾರ್‍ಯಗಳು

ದೊಡ್ಡಬಳ್ಳಾಪುರ: ಖ್ಯಾತ ನಟ ಸಾಹಸಸಿಂಹ, ಅಭಿನವ ಭಾರ್ಗವ ಡಾ.ವಿಷ್ಣುವರ್ಧನ್ (Dr. Vishnuvardhan) ಅವರ 75ನೇ ಜನ್ಮ ದಿನಾಚರಣೆ ತಾಲೂಕಿನ ವಿವಿದೆಡೆಗಳಲ್ಲಿ ಆಚರಿಸಲಾಯಿತು.

ನಗರದ ಸಿದ್ಧಲಿಂಗಯ್ಯ ವೃತ್ತದ ಬಳಿಯ ಬೆಸ್ಕಾಂನ ಹಳೆಯ ಕಚೇರಿ ಮುಂಭಾಗ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಗೆ ತಾಲೂಕು ಡಾ.ವಿಷ್ಣು ಸೇನಾ ಸಮಿತಿ ಹಾಗೂ ಡಾ.ವಿಷ್ಣುವರ್ಧನ್ ಅಭಿಮಾನಿಗಳು ಮಾಲಾರ್ಪಣೆ ಮಾಡಿದರು. ನಂತರ ಕೇಕ್ ಕತ್ತರಿಸಿ, ಸಿಹಿ ವಿತರಿಸಲಾಯಿತು.

ಡಾ.ವಿಷ್ಣುವರ್ಧನ್ ಅವರ 75 ನೇ ಜನ್ಮ ದಿನಾಚರಣೆ ವಿಶೇಷವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಳೇ ಬಸ್ ನಿಲ್ದಾಣದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ನಡೆಯಿತು. ನಂತರ ಶಾಲಾ ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳ ವಿತರಣೆ, ಉಚಿತ ನೇತ್ರ ತಪಾಸಣೆ ಶಿಬಿರ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಶ್ರೀ ರಾಮ ಮೆಲೋಡಿಸ್ ತಂಡದಿಂದ ಡಾ.ವಿಷ್ಣುವರ್ಧನ್ ಚಿತ್ರ ಗೀತೆಗಳ ವಾದ್ಯಗೋಷ್ಟಿ ನಡೆಯಿತು.

ವೇದಿಕೆಯ ಕಾರ್‍ಯಕ್ರಮದಲ್ಲಿ ಮಾತನಾಡಿದ ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್, ಸಾಹಸಸಿಂಹ ಡಾ.ವಿಷ್ಣುವರ್ದನ್ ಅವರು ಚಿತ್ರರಂಗಕ್ಕೆ ನೀಡಿರುವ ಸೇವೆ ಅನುಪಮವಾಗಿದೆ. ಆದರೆ ಅವರಿಗೆ ಒಂದು ಸ್ಮಾರಕ ರೂಪುಗೊಳ್ಳದಿರುವುದು ದುರದೃಷ್ಟಕರ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ಡಾ.ವಿಷ್ಣುವರ್ಧನ್ ಸಮಾ ನೆಲಸಮ ಮಾಡಿರುವುದು ಖಂಡನೀಯವಾಗಿದ್ದು, ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಮೀನಮೇಷ ಎಣಿಸುವುದನ್ನು ಬಿಟ್ಟು, ಸ್ಮಾರಕವನ್ನು ಉಳಿಸುವಲ್ಲಿ ಕ್ರಮ ವಹಿಸಬೇಕು ಎಂದರು.

ಡಾ.ವಿಷ್ಣುವರ್ಧನ್ ಸೇನಾ ಸಮಿತಿ ತಾಲೂಕು ಅಧ್ಯಕ್ಷ ಗಂಗರಾಜ, ಕಾರ್ಯದರ್ಶಿ ಶಿವಕುಮಾರ್, ಸಂಚಾಲಕ ರಾಮಾಂಜಿನಪ್ಪ ಕರ್ನಾಟಕ ಚಲನಚಿತ್ರ ಲೋಕದಲ್ಲಿ ಜನಮನಗಳನ್ನು ಗೆದ್ದ ಹೆಸರಾಂತ ಕನ್ನಡದ ಶ್ರೇಷ್ಠ ನಟ, ಸಂಸ್ಕೃತಿ ಪ್ರೇಮಿ ಸಾಹಸಸಿಂಹ ಡಾ.ವಿಷ್ಣುವರ್ದನ್ ಅವರ ಸೇವೆ ಮತ್ತು ಕೊಡುಗೆಗಳನ್ನು ಕನ್ನಡ ನಾಡು ಮರೆಯಲು ಸಾಧ್ಯವಿಲ್ಲ.

ವಿಷ್ಣುವರ್ಧನ್ ಅವರು ಕೇವಲ ನಟನಾಗಿರದೆ ಅವರ ಮೇರು ವ್ಯಕ್ತಿತ್ವ, ಸಾಮಾಜಿಕ ಅಂತಃಕರಣದ ಜೀವಂತಿಕೆಯಿಂದಲೆ ಇಂದಿಗೂ ಜನಮಾನಸದಲ್ಲಿ ಜೀವಂತರಾಗಿದ್ದಾರೆ. ನೈಜ ಅಭಿನಯದಿಂದ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರ ಅಭಿನಯಕ್ಕೆ ಬೆರಗಾಗದವರಿಲ್ಲ. ಸಾಮಾಜಿಕ, ಐತಿಹಾಸಿಕ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದ ವಿಷ್ಣುವರ್ಧನ್ ಅವರ ಚಿತ್ರಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡಿವೆ. ಅಂತ ನಟರನ್ನು ಪಡೆದ ಕನ್ನಡ ಚಿತ್ರರಂಗ ಧನ್ಯ ಎಂದು ಸ್ಮರಿಸಿದರು.

ಈ ವೇಳೆ ತಾಲೂಕು ಡಾ.ವಿಷ್ಣು ಸೇನಾ ಸಮಿತಿಯ ಕುಮಾರ ಬಂಗಾರಿ, ರವಿಕುಮಾರ್, ವಾರೇಶ್, ಮುನಿರಾಜು, ನಾರಾಯಣಪ್ಪ ವಿಶ್ವನಾಥ್, ಗಣೇಶ್, ರಾಮಾಂಜಿನಪ್ಪ ,ಸುರೇಶ್, ಗಂಗಾಧರ್ ಮೊದಲಾಗಿ ವಿಷ್ಣುವರ್ಧನ್ ಅಭಿಮಾನಿಗಳು ಭಾಗವಹಿಸಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!