ದೊಡ್ಡಬಳ್ಳಾಪುರ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಾಳೆ ಉಚಿತ ಕಾರ್ಯಾಗಾರ

Doddaballapura: Free workshop for competitive exams tomorrow

ದೊಡ್ಡಬಳ್ಳಾಪುರ: ನೂತನವಾಗಿ ಆರಂಭವಾಗಿರುವ ಬೆಳದಿಂಗಳು ಸ್ಟಡಿ ಸರ್ಕಲ್ ವತಿಯಿಂದ ಒಂದು ದಿನದ ಉಚಿತ ಕಾರ್ಯಗಾರವನ್ನು (Free workshop) ನಾಳೆ (ಸೆ. 20) ಏರ್ಪಡಿಸಲಾಗಿದೆ.

ಈ ಕಾರ್ಯಗಾರದಲ್ಲಿ ಎಸ್ ಡಿ ಎ/ ಎಫ್ ಡಿ ಎ/ಪಿ ಸಿ/ಪಿಎಸ್ಐ/ ವಿಐ/ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಸಿ ಗ್ರೂಪ್ ಹುದ್ದೆಗಳ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ನೀಡಲಾಗುವುದು.

ಬೆಳಗ್ಗೆ 10:30 ಕ್ಕೆ ಪ್ರಾರಂಭವಾಗಿ ಮೊದಲನೆಯ ಸೆಷನ್ ಒಂದು ಗಂಟೆಗೆ ಮುಗಿಯಲಿದೆ. ಎರಡನೇ ಸೆಷನ್ ಎರಡು ಗಂಟೆಗೆ ಪ್ರಾರಂಭವಾಗಿ ಸಂಜೆ 4:30 ಕ್ಕೆ ಮುಗಿಯಲಿದೆ.

ಈ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಧ್ಯಾಪಕರು ಹಾಗೂ ತರಬೇತುದಾರರಾದ ಸತೀಶ್ ಜೋಗ, ತುಮಕೂರಿನ ತರಬೇತುದಾರರ ವಿಶ್ವನಾಥ್ ಶಿವಕುಮಾರ್ ಚಂದ್ರು ಹಾಗೂ ಗೋವಿಂದರಾಜು ಅವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸೌಭಾಗ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಜಿ.ರಾಜಗೋಪಾಲ್, ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಡಾ. ಪರಮೇಶ್ವರ್, ಸೌಭಾಗ್ಯ ಟ್ರಸ್ಟ್ ನ ಕಾರ್ಯದರ್ಶಿ ರಾಜೇಂದ್ರ ಮುಂತಾದವರು ಉಪಸ್ಥಿತರಿರುತ್ತಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಪ್ರತಿಭಾವಂತ ನಗರ ಮತ್ತು ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳು ಈ ಕಾರ್ಯಗಾರದಲ್ಲಿ ಭಾಗವಹಿಸಬಹುದು.

ಬೆಳದಿಂಗಳು ಸ್ಟಡಿ ಸರ್ಕಲ್ ದೊಡ್ಡ ಆಶೋತ್ತರಗಳನ್ನು ಇಟ್ಟುಕೊಂಡು ಪ್ರಾರಂಭಿಸಲಾಗಿದೆ. ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಗೌರಿಬಿದನೂರು, ದೇವನಹಳ್ಳಿ, ಕೊರಟಗೆರೆ ಮುಂತಾದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಕೇಂದ್ರವನ್ನು ಪ್ರಾರಂಭಿಸಲಾಗಿದೆ.

ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವುದೇ ನಮ್ಮ ಸಂಸ್ಥೆಯ ಗುರಿ. ಕಳೆದ ತಿಂಗಳು ಬೆಳದಿಂಗಳು ಸ್ಟಡಿ ಸರ್ಕಲ್ ಉದ್ಘಾಟನೆಯಾಗಿದೆ. ಈಗ ಅದರ ಮುಂದಿನ ಭಾಗವಾಗಿ ಇದೇ ಶನಿವಾರ 20ರಂದು ಉಚಿತ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.

ಈ ಕಾರ್ಯದಲ್ಲಿ ವಿದ್ಯಾರ್ಥಿಗಳು ಅತ್ಯಂತ ಕಡಿಮೆ ಅವಧಿಯಲ್ಲಿ ಹೇಗೆ ಯಶಸ್ಸು ಪಡೆಯಬಹುದು, ಹೆಚ್ಚಿನ ಅಂಕ ಗಳಿಸುವ ಸುಲಭ ಮಾರ್ಗಗಳು, ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವುದು ಹೇಗೆ? ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ? ಎಂದು ಕಾರ್ಯಗಾರದಲ್ಲಿ ತಿಳಿಸಲಾಗುವುದು.

ಈ ಕಾರ್ಯಗಾರದಲ್ಲಿ ಪಿಯುಸಿ ಉತ್ತೀರ್ಣರಾದವರು, ಯಾವುದೇ ಪದವಿ ಪಡೆದ ವಿದ್ಯಾರ್ಥಿಗಳು,ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವವರು, ಮುಂದೆ ಸಿದ್ಧತೆ ನಡೆಸ ಬಯಸುವವರು, ಪರೀಕ್ಷೆಗಳ ಬಗ್ಗೆ ಮಾಹಿತಿ ಬೇಕಾದವರು ಭಾಗವಹಿಸಬಹುದು ಎಂದು ಕೋ -ಆರ್ಡಿನೇಟರ್ ಮಾಳವ ನಾರಾಯಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಳಾಸ: ಬೆಳದಿಂಗಳು ಸ್ಟಡಿ ಸರ್ಕಲ್(BSC), ಕೆ.ಎಸ್‌.ಆರ್‌.ಟಿ.ಸಿ ಬಸ್ ನಿಲ್ದಾಣದ ಮೊದಲನೇ ಮಹಡಿ, ಹಳೆ ಬಸ್ ನಿಲ್ದಾಣ ದೊಡ್ಡಬಳ್ಳಾಪುರ.

ಹೆಚ್ಚಿನ ಮಾಹಿತಿಗಾಗಿ 95912 22233/ 99649 28656 ನಂಬರ್ ಗಳನ್ನು ಸಂಪರ್ಕಿಸಬಹುದು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]