Caste Census: B.Y. Vijayendra calls for listing as Hindu

ಜಾತಿ ಗಣತಿ: ಹಿಂದೂ ಎಂದೇ ನಮೂದಿಸುವಂತೆ ಬಿ.ವೈ.ವಿಜಯೇಂದ್ರ ಕರೆ

ಬೆಂಗಳೂರು: ಧರ್ಮ ಒಡೆಯುವ ಕೆಲಸಕ್ಕೆ ರಾಜ್ಯ ಸರಕಾರ ಕೈ ಹಾಕಿದೆ. ಇದೊಂದು ದುರಂತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ಆಕ್ಷೇಪಿಸಿದ್ದಾರೆ. ಯಾವುದೇ ಜಾತಿ, ಸಮಾಜದವರು ಗಣತಿ ವೇಳೆ ಧರ್ಮದ ಕಾಲಂನಲ್ಲಿ ಹಿಂದೂ ಎಂದೇ ನಮೂದಿಸಬೇಕು ಎಂದು ಬಿಜೆಪಿಯ ರಾಜಕೀಯ ಚಿಂತನಾ ಶಿಬಿರದಲ್ಲಿ ನಿರ್ಣಯಿಸಿದ್ದೇವೆ ಎಂದು ತಿಳಿಸಿದರು.

ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್‍ನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಜಕೀಯ ಚಿಂತನಾ ಶಿಬಿರ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದು ವಿವರಿಸಿದರು. ಜಾತಿ, ಉಪ ಜಾತಿಯನ್ನು ಆಯಾ ಸಮುದಾಯಕ್ಕೆ ಬಿಟ್ಟ ವಿಚಾರ; ಅದನ್ನು ಅವರು ತೀರ್ಮಾನಿಸಬೇಕು ಎಂದರು. ದೇಶ, ರಾಜ್ಯದ ಹಿತದೃಷ್ಟಿಯಿಂದ ಧರ್ಮದ ಕಾಲಂನಡಿ ಹಿಂದೂ ಎಂದು ಬರೆಸಲು ವಿನಂತಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾತಿ ಜನಗಣತಿ ಮಾಡಲು ಮುಂದಾಗಿದೆ. ರಾಜ್ಯಗಳಿಗೆ ಜಾತಿ ಜನಗಣತಿ ಅಧಿಕಾರ ಇಲ್ಲದೇ ಇದ್ದರೂ 47 ಹೊಸ ಜಾತಿಗಳನ್ನು ಸೃಷ್ಟಿಸಿದೆ. ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ, ಕ್ರಿಶ್ಚಿಯನ್ ನೇಕಾರ, ಕ್ರಿಶ್ಚಿಯನ್ ಪರಿಶಿಷ್ಟ ಜಾತಿ, ಪಂಗಡ ಎಂದು ಗೊಂದಲ ಸೃಷ್ಟಿ ಮಾಡಿದ್ದಾಗಿ ಆರೋಪಿಸಿದರು.

ಸಿದ್ದರಾಮಯ್ಯರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂತರಾಜು ವರದಿ ಬಗ್ಗೆ ಸಾಕಷ್ಟು ಚರ್ಚೆಗಳಾಗಿವೆ. ಈ ವರದಿ ಅವೈಜ್ಞಾನಿಕ ಎಂದು ನಾವು ವಿರೋಧಿಸಿದ್ದೆವು. ರಾಹುಲ್ ಗಾಂಧಿಯವರು ಹೇಳಿದ್ದಾರೆಂಬ ಕಾರಣಕ್ಕೆ ಕಾಂತರಾಜು ವರದಿಯನ್ನು ಸಿದ್ದರಾಮಯ್ಯನವರ ಸರಕಾರ ಕಸದ ಬುಟ್ಟಿಗೆ ಹಾಕಿತ್ತು ಎಂದು ಆಕ್ಷೇಪಿಸಿದರು. ಹಿಂದೆಯೂ ಸಿದ್ದರಾಮಯ್ಯರ ಸರಕಾರವು ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಗೊಂದಲ ಸೃಷ್ಟಿಸಿ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದರು ಎಂದು ಟೀಕಿಸಿದರು.

ಈ ಶಿಬಿರದಲ್ಲಿ ಎರಡು ಮಹತ್ವದ ನಿರ್ಣಯ ಮಾಡಲಾಗಿದೆ. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಎನ್‍ಡಿಎ ಸರಕಾರವು ಸರಳೀಕೃತ ಜಿಎಸ್‍ಟಿ ಮೂಲಕ ಒಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದೆ. ಇದರಿಂದ ರಾಜ್ಯ, ದೇಶದ ಜನರು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಬಿ.ವೈ ವಿಜಯೇಂದ್ರ ಅವರು ತಿಳಿಸಿದರು.

ಜಾಗತಿಕ ಮಟ್ಟದಲ್ಲಿ ಅನೇಕ ಸವಾಲುಗಳು ಭಾರತದ ಮುಂದಿವೆ. ಇಂಥ ಸಂದರ್ಭದಲ್ಲಿ ಇಂಥ ಜಿಎಸ್‍ಟಿ ಸುಧಾರಣೆ ಘೋಷಿಸಿದ್ದು, ಇದಕ್ಕಾಗಿ ಈ ಶಿಬಿರದಲ್ಲಿ ಮೋದಿಜೀ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಒಕ್ಕೊರಲ ಅಭಿನಂದನೆ ಸಲ್ಲಿಸಿದ್ದಾಗಿ ವಿವರಿಸಿದರು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಉಪಮುಖ್ಯಮಂತ್ರಿ ಮತ್ತು ಸಂಸದರಾದ ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಭೈರತಿ ಬಸವರಾಜ್, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಚಿವೆ ಮತ್ತು ಶಾಸಕಿ ಶಶಿಕಲಾ ಜೊಲ್ಲೆ, ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಶಾಸಕ ರಾಜು ಗೌಡ ನಾಯಕ್ ಅವರು ಉಪಸ್ಥಿತರಿದ್ದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!