A defamation suit is inevitable if the news is distorted; D.K. Sivakumar Warning

ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ: ವಿಪಕ್ಷಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ರಾಮನಗರ: “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ದೇನೆ ಎಂದು ಕೆಲವರು ಟೀಕೆ ಮಾಡುತ್ತಿದ್ದಾರೆ. ನಾನು ಜಾತಿ ಮೇಲೆ ನಂಬಿಕೆಯಿಟ್ಟಿರುವವನಲ್ಲ. ನೀತಿ ಮೇಲೆ ನಂಬಿಕೆಯಿಟ್ಟಿರುವವನು. ಬಡವರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ. ಎಲ್ಲಾ ವರ್ಗದ ಜನರ ಏಳಿಗೆಗೆ ಶ್ರಮಿಸುತ್ತಿದ್ದೇನೆ” ಎಂದರು.

100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆ

“ರಾಮನಗರ ಕ್ಷೇತ್ರದ ಜನತೆಗೆ 100 ಎಕರೆ ಪ್ರದೇಶದಲ್ಲಿ ನಿವೇಶನ ಹಂಚಬೇಕು ಎಂದು ಜಿಲ್ಲೆಯ ಪ್ರತಿಧಿಗಳ ಸಭೆ ಕರೆದು ಈಗಾಗಲೇ ತೀರ್ಮಾನ ಮಾಡಲಾಗಿದೆ. “ಬಗರ್ ಹುಕುಂ ಸೇರಿದಂತೆ, ಭೂ ಸುಧಾರಣಾ ಕಾಯ್ದೆಯಡಿ ಮಂಜೂರಾತಿಗೆ ಬಾಕಿ ಇರುವ ಭೂಮಿಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದರು.

“ದೇವರು ಅವಕಾಶ ಮಾತ್ರ ಕೊಡುತ್ತಾನೆ. ಸಿಕ್ಕಂತಹ ಅವಕಾಶವನ್ನು ಬಳಸಿಕೊಂಡು ಬಡ ಜನರ ಏಳಿಗೆ ಮಾಡದಿದ್ದರೆ ಅಧಿಕಾರವಿದ್ದು ಏನು ಲಾಭ? ಕನಕಪುರದಲ್ಲಿ ಸುಮಾರು 100 ಎಕರೆ ಪ್ರದೇಶದಲ್ಲಿ ಜನರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಮಹಿಳೆಯರ ಹೆಸರಿಗೆ ಈ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ನಾನು ಸುಮಾರು 8 ಸಾವಿರ ಮಂದಿಗೆ ಬಗರ್ ಹುಕುಂ ಜಮೀನು ನೀಡಿದ್ದೇನೆ. ಈಗ ಡಿ.ಕೆ.ಸುರೇಶ್ ಅವರಿಗೆ ಈ ಸಮಿತಿಯ ಜವಾಬ್ದಾರಿ ನೀಡಲಾಗಿದೆ.” ಎಂದರು.

“ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು, ಬಡವರಿಗೆ ನಿವೇಶನ ಹಂಚಲು ಆಗಲಿಲ್ಲ. ಹೀಗಿದ್ದ ಮೇಲೆ ರಾಜಕಾರಣ ಏಕೆ ಮಾಡಬೇಕು? ರಾಜಕೀಯ ಮಾಡುವ ಅವಕಾಶವನ್ನೇ ಜನತಾದಳದವರು ಕಳೆದುಕೊಂಡಿದ್ದಾರೆ” ಎಂದರು.

“ಮಾಜಿ ಸಚಿವ ಅಶ್ವಥ ನಾರಾಯಣ ಅವರು ಜಿಲ್ಲೆಗೆ ಬಂದಿದ್ದರು. ವೀರಾಧಿವೀರ ಗಂಡು. ಯಾರಾದರೂ ಗಂಡಸರು ಇದ್ದೀರಾ? ಎಂದು ಪ್ರಶ್ನಿಸಿದ್ದರು. ಅವರಿಗೂ ಸಹ ಒಂದೇ ಒಂದು ನಿವೇಶನ ಹಂಚಲು ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಒಬ್ಬರಿಗೂ ಸಹಾಯ ಮಾಡಲು ಆಗಲಿಲ್ಲ.

“ಬಿಜೆಪಿ ಅಧಿಕಾರಕ್ಕೆ ಬಂದರೆ ಜಿಬಿಎ ತೆಗೆದು ಹಾಕುವುದಾಗಿ ಯಾರೋ ಬಿಜೆಪಿ ನಾಯಕರು ಇತ್ತೀಚೆಗೆ ಹೇಳಿದ್ದಾರಂತೆ. ಮಿಸ್ಟರ್ ಅಶೋಕ್, ಅಶ್ವಥ ನಾರಾಯಣ, ಜನತಾ ದಳದ ನಾಯಕರೇ ನಿಮ್ಮ ಯಾರ ಹಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಬರೆದಿಲ್ಲ. ಅಶೋಕಣ್ಣಾ ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಬದಲಾವಣೆ ಮಾಡಲು 2028 ಕ್ಕೆ ನಿಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಈ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ನೀವು ಇನ್ನು ಅಧಿಕಾರ ಮರೆತುಬಿಡಿ” ಎಂದರು ವ್ಯಂಗ್ಯವಾಡಿದರು.

ಬಸವಣ್ಣನವರ ಕಾಲದಲ್ಲಿ ವಚಮ ಚಳುವಳಿಯ ನೇತೃತ್ವ ವಹಿಸಿದ್ದ ಹಿಂದುಳಿದ ವರ್ಗಕ್ಕೆ ಸೇರಿದ ಅಲ್ಲಮ ಪ್ರಭು ಅವರು ʼಕೊಟ್ಟ ಕುದುರೆಯನ್ನು ಏರಲಾರದವನು ವೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರ ಇದ್ದಾಗ ಏನನ್ನೂ ಮಾಡದವರು ಇನ್ನೆಂದೂ ಕೆಲಸ ಮಾಡಲೂ ಸಾಧ್ಯವಿಲ್ಲ” ಎಂದು ಕುಟುಕಿದರು.

“ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಸರ್ಕಾರ ನೀಡಿದ ಯೋಜನೆಗಳನ್ನು ಹಾಗೂ ಜನರಿಗೆ ಬಗರ್ ಹುಕುಂ ಸಾಗುವಳಿ ಜಮೀನು ನೀಡಿದ ದಾಖಲೆಯಿದ್ದರೆ ನೀಡಬೇಕು. ಫಲಾನುಭವಿಗಳು ಯಾರಾದರೂ ಇದ್ದರೆ, ಕೈ ಎತ್ತಿ ತಿಳಿಸಿ” ಎಂದರು.

ಜಾತಿ ಹೆಸರು ಸರಿಯಾಗಿ ನಮೂದಿಸಿ

“ಈ ದೇಶದ ಬಡವರು, ಹಿಂದುಳಿದ ವರ್ಗದವರ ಪರವಾಗಿ ಕೆಲಸ ಮಾಡಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಓಬಿಸಿಗಳ ಏಳಿಗೆಗಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ನಿಮ್ಮ ಜಾತಿಯನ್ನು ಸರಿಯಾದ ರೀತಿಯಲ್ಲಿ ಎಲ್ಲರೂ ಬರೆಸಬೇಕು. ನೀವು ಸರಿಯಾಗಿ ನಿಮ್ಮ ಜಾತಿ ನಮೂದಿಸದಿದ್ದರೆ ಇಡೀ ಸಮಾಜಕ್ಕೆ ಅನ್ಯಾಯ ಎಸಗಿದಂತೆ, ಆತ್ಮಸಾಕ್ಷಿಗೆ ಮೋಸ ಮಾಡಿದಂತೆ” ಎಂದರು.

“ನಮ್ಮನ್ನು ಟೀಕೆ ಮಾಡಿದ ವಿರೋಧ ಪಕ್ಷಗಳು ಈಗ ನಮ್ಮನ್ನೇ ಅನುಕರಣೆ ಮಾಡುತ್ತಿವೆ. ಹರಿಯಾಣ, ಮಹಾರಾಷ್ಟ್ರ, ಗೋವಾ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿವೆ. ಬದುಕಿನ ಮೇಲೆ ನಾವು ರಾಜಕಾರಣ ಮಾಡುವ ನಾವು ಕಳೆದ ಎರಡು ವರ್ಷದಲ್ಲಿ ಸುಮಾರು 1 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಖಾತೆಗೆ ಹಾಕಿದ್ದೇವೆ. ಮಹಿಳೆಯರು ಸಂಸಾರವನ್ನು ತೂಗಿಸುತ್ತಾರೆ ಎಂದು ಅವರಿಗೆ ಹೆಚ್ಚು ಪ್ರಯೋಜನ ನೀಡಲಾಗಿದೆ. ಅವರು ಮಕ್ಕಳ ಭವಿಷ್ಯಕ್ಕೆ ಗ್ಯಾರಂಟಿ ಯೋಜನೆಗಳ ಹಣ ಬಳಕೆ ಮಾಡುತ್ತಾರೆ ಎಂಬುದು ನಮ್ಮ ಆಲೋಚನೆ” ಎಂದರು.

“ಆಧಾರ್ ಕಾರ್ಡ್, ಪಿಂಚಣಿ, ಉಳುವವನೆ ಭೂಮಿಯ ಒಡೆಯ ಸೇರಿದಂತೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಒಂದೇ ಒಂದು ಯೋಜನೆಗಳನ್ನು ಬಿಜೆಪಿಯವರು ಬದಲಾವಣೆ ಮಾಡಲು ಆಗಿಲ್ಲ. ನಮ್ಮ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಮರು ಜನ್ಮವೆತ್ತಿ ಬಂದರೂ ದಳ ಹಾಗೂ ಬಿಜೆಪಿಯವರು ನಿಲ್ಲಿಸಲು, ಬದಲಾವಣೆ ಮಾಡಲು ಆಗುವುದಿಲ್ಲ. ಈ ಮಾತನ್ನು ದೇವರಾಜ ಅರಸು ಅವರ ಭಾವಚಿತ್ರದ ಮುಂದೆ ಹೇಳುತ್ತಿದ್ದೇನೆ” ಎಂದರು.

“ಜನರ ಬದುಕು ಬದಲಾವಣೆ ಮಾಡುವಂತಹ ಕಾರ್ಯಕ್ರಮಗಳನ್ನು ದೇವರಾಜ ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ್ದರು. ಬಡವರ ಬದುಕಿನಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದವರು ದೇವರಾಜ ಅರಸು ಅವರು. ಸಾಮಾಜಿಕ ನ್ಯಾಯ ನೀಡಿದವರು. ಉಳುವವನೇ ಭೂಮಿಯ ಒಡೆಯ ಕಾನೂನು ಜಾರಿಗೆ ತಂದರು. ವೃದ್ದಾಪ್ಯ ವೇತನ ನೀಡುವುದನ್ನು ರಾಜ್ಯದಲ್ಲಿ ಜಾರಿಗೆ ತಂದರು. ವಿಧವಾ ಪಿಂಚಣಿ, ಬಡವರಿಗೆ ನಿವೇಶನಗಳನ್ನು ನೀಡಲಾಯಿತು. ಹೀಗೆ ಇಲ್ಲದವರ ಪರವಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಯಿತು. ಬಗರ್ ಹುಕುಂ ಸಾಗುವಳಿ ಭೂಮಿ ನೀಡುವ ಕೆಲಸವೂ ಆಯಿತು. ರಾಮನಗರದಲ್ಲಿ ಶಾಸಕರಾಗಿದ್ದ ಸಿ.ಎಂ. ಲಿಂಗಪ್ಪ ಅವರು ನೂರಾರು ಜನರಿಗೆ ಭೂಮಿ ಹಂಚಿಕೆ ಮಾಡಿದರು. ಈ ಜಿಲ್ಲೆಯವರಾದ ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ನಿರ್ಮಿಸಿ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ” ಎಂದರು.

“ದೇವರಾಜ ಅರಸು ಅವರು ರಾಜಮನೆತನಕ್ಕೆ ಸೇರಿದವರು. ಆದರೆ ಬಡವರ ಪರವಾಗಿ ಕೆಲಸ ಮಾಡಿದರು. ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಸಮುದಾಯ ಎನ್ನದೇ ಸಕಲ ಹಿಂದುಳಿದ ಸಮುದಾಯಗಳ ಪರವಾಗಿ ನಿಂತು ಕೆಲಸ ಮಾಡಿದವರು ಅರಸು ಅವರು” ಎಂದರು.

“ವಿದ್ಯಾರ್ಥಿ ನಾಯಕನಾಗಿದ್ದಾಗ ಬಂಗಾರಪ್ಪ ಅವರ ಗರಡಿಯಲ್ಲಿ ಬೆಳೆದ ವ್ಯಕ್ತಿ ನಾನು. ಕಲ್ಲಿನ ಕ್ವಾರಿ ಕೆಲಸ ನೋಡಲು ಜಿಲ್ಲೆಗೆ ಬಂದಿದ್ದೆ. ಆಗ ನನಗೆ ದೂರವಾಣಿ ಕರೆ ಬಂತು. ತಕ್ಷಣ ಬೆಂಗಳೂರಿಗೆ ಹೊರಡಲು ಹೇಳಲಾಯಿತು. ಆಗ ನನಗೆ ತಿಳಿಯಿತು ಅವರ ಸಂಪುಟದಲ್ಲಿ ಸಚಿವಸ್ಥಾನ ನೀಡಿದ್ದಾರೆ ಎಂದು. ಒಬ್ಬ ಹಿಂದುಳಿದ ವರ್ಗದ ನಾಯಕ ಬಂಗಾರಪ್ಪ ಅವರು ಈ ಶಿವಕುಮಾರ್ ನನ್ನು ಬೆಳೆಸಿದರು. ಅವರ ಋಣ ತೀರಿಸಬೇಕು ಎಂದು ಅವರ ಮಗ ಮಧು ಬಂಗಾರಪ್ಪ ಅವರನ್ನು ದಳದಿಂದ ಕರೆತಂದು ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವ ಸ್ಥಾನ ನೀಡಲಾಗಿದೆ” ಎಂದರು.

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!