Trump increases H-1B visa fee to 88 lakhs.

H-1B ವೀಸಾ ಶುಲ್ಕ 88 ಲಕ್ಷಕ್ಕೆ ಹೆಚ್ಚಿಸಿದ ಟ್ರಂಪ್.. ಸಂಕಷ್ಟಕ್ಕೆ ಸಿಲುಕಿದ ಭಾರತೀಯ ಇಂಜಿನಿಯರ್‌ಗಳು..!

ನವದೆಹಲಿ: ಇತ್ತೀಚೆಗಷ್ಟೇ ಭಾರತದಿಂದ ರಪ್ತಾಗುವ ವಸ್ತುಗಳ ಮೇಲೆ ಶೇ.50 ತೆರಿಗೆಯ ಬರೆ ವಿಧಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮಿತ್ರ ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump), ಈಗ H-1B ವೀಸಾ ಶುಲ್ಕ 6 ಲಕ್ಷದಿಂದ ಭಾರತದ ರೂಪಾಯಿ ಮೌಲ್ಯದಲ್ಲಿ 88 ಲಕ್ಷಕ್ಕೆ ಹೆಚ್ಚಳ ಮಾಡಿದ್ದು, ಭಾರತೀಯ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಪೋಷಕರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.

ಹೌದು ಭಾರತದ ಐಟಿ ಸೆಕ್ಟರ್ ಮೇಲೆ ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ದೊಡ್ಡ ಮಟ್ಟದ ಹೊಡೆತ ನೀಡಿದ್ದಾರೆ, ಇದು ಯಾವ ಮಟ್ಟದ್ದು ಎಂದರೆ ಅಮೇರಿಕಾದಿಂದ ಹಿಡಿದು ಭಾರತದವರೆಗೆ ಇಂಜಿನಿಯರ್‌ಗಳು ಬೀದಿಗೆ ಬೀಳುವ ಆತಂಕ ಎದುರಾಗಿದೆ.

ಭಾರತದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುವ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಟ್ರಂಪ್ ಆದೇಶ ಪರಿಣಾಮ ಬೀರಲಿದೆ. ಭಾರತದ ಲಕ್ಷಾಂತರ ವಿದ್ಯಾರ್ಥಿಗಳು ಶೈಕ್ಷಣಿಕ ಸಾಲವನ್ನು ಪಡೆದು ಅಮೇರಿಕಾದಲ್ಲಿ ವ್ಯಾಸಂಗ ಮಾಡಲು ತೆರಳುತ್ತಾರೆ. ಏಕೆಂದರೆ ಅಲ್ಲಿ ಉದ್ಯೋಗ ಸಿಗುತ್ತದೆ, ಬಳಿಕ ಸಾಲ ತಿರಿಸಬಹುದು ಎಂಬ ನಂಬಿಕೆಯಿಂದ. ಆದರೆ ಟ್ರಂಪ್ ಸರ್ಕಾರದ ಈ ನೀತಿಯಿಂದಾಗಿ ಅಂತಹ ವಿದ್ಯಾರ್ಥಿಗಳಿಗೆ ಅಮೇರಿಕಾದ ಬಾಗಿಲು ಮುಚ್ಚಿಹೋಗುವ ಪರಿಸ್ಥಿತಿ ಉಂಟಾಗಿದೆ.

ಮೊದಲೇ ಭಾರತದಲ್ಲಿ ಐಟಿ ಸೆಕ್ಟರ್‌ನಲ್ಲಿ ಉದ್ಯೋಗಗಳು ಕಡಿಮೆಯಾಗುತ್ತಿದೆ. ಇದರ ಬೆನ್ನಲ್ಲೇ ಅಮೇರಿಕಾದಲ್ಲಿ ಕೆಲಸ ಮಾಡುವುದು ಕಷ್ಟ ಎಂದಾದರೆ ಭಾರತದ ಇಂಜಿನಿಯರ್ ಗಳ ಮೇಲೆ ದೊಡ್ಡಮಟ್ಟದ ಪರಿಣಾಮ ಎದುರಿಸಬೇಕಾದ ಆತಂಕ ಕಾಡುತ್ತಿದೆ.

ಟ್ರಂಪ್ ಈ ಕಠಿಣ ನಿಯಮಕ್ಕೆ ತಿರುಗೇಟು ನೀಡುತ್ತೇವೆ, ಅಮೇರಿಕಾದಲ್ಲಿರುವವರ ಭಾರತ ಪ್ರತಿಭಾ ಶಾಲಿಗಳನ್ನು ವಾಪಸ್ ಕರೆತರುತ್ತೇವೆ, ಎಂಬ ಅವಿವೇಕದ ಮನಸ್ಥಿತಿಯಲ್ಲಿ ನೋಡಲು ಸಾಧ್ಯವಿಲ್ಲ. ಆದರೆ ಭಾರತದ ವಿದೇಶಾಂಗ ನೀತಿ ಕೇವಲ ಚಪ್ಪಾಳೆ ಅಥವಾ ತಬ್ಬಿಕೊಳ್ಳುವುದರಿಂದ ಗಟ್ಟಿಯಾಗುವುದಿಲ್ಲ ಎಂಬ ಅರಿವು ಸ್ಪಷ್ಟವಾಗಿದೆ.

ಏಕೆಂದರೆ ಕೆಲ ವರ್ಷಗಳ ಹಿಂದಷ್ಟೇ ಅಮೇರಿಕಾ ಪ್ರವಾಸ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ವಾಷಿಂಗ್ಟನ್‌ನಲ್ಲಿ ಆನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡುವ ವೇಳೆ H-1B ವೀಸಾ ನವೀಕರಣಕ್ಕೆ ಭಾರತಕ್ಕೆ ಬರುವ ಅವಶ್ಯಕತೆ ಇಲ್ಲ, ಇದಕ್ಕೆ ಪೈಲೆಟ್ ಪ್ರಾಜೆಕ್ಟ್ ತಯಾರಾಗುತ್ತಿದೆ, ಅಮೇರಿಕಾದಲ್ಲಿ ಆಗುತ್ತದೆ ಎಂದು ಹೇಳಿದ್ದರು. ಆ ವೇಳೆ ಅಲ್ಲಿನ ಆನಿವಾಸಿ ಭಾರತೀಯರು ಚಪ್ಪಾಳೆ ಹೊಡೆದರು, ಮೋದಿ, ಮೋದಿ ಘೋಷಣೆ ಕೂಗಿದ್ದರು. ಆದರೆ ಈಗ H-1B ವೀಸಾದ ಅಡಿಯಲ್ಲಿ ಅಮೇರಿಕಾದಲ್ಲಿ ವಾಸಿಸುತ್ತಿರುವ ಅಥವಾ ಅಲ್ಲಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಶುಕ್ರವಾರ ಸಂಜೆ ಹೊಸ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಕುರಿತು ಈಗಾಲೇ ಚರ್ಚೆಯಲ್ಲಿತ್ತು ಟ್ರಂಪ್ ಭಾರತದ ಐಟಿ ಸೆಕ್ಟರ್‌ಮೇಲೆ ಟಾರ್ಗೆಟ್ ಮಾಡುತ್ತಾರೆ ಎಂದು. ಆದರೆ ಯಾವಾಗ ಟ್ರಂಪ್ ನೂತನ ಕಾಯ್ದೆ ಮೇಲೆ ಸಹಿ ಹಾಕಿದರೋ, ಅಮೇರಿಕಾದಲ್ಲಿ ವಾಸಿಸುತ್ತಿರುವ ಲಕ್ಷಾಂತರ ವಿದೇಶಿಗಳ ಮೊಬೈಲ್ ರಿಂಗಣಿಸಲು ಆರಂಭವಾಗಿದೆ. ಅಂತೆಯೇ ಭಾರತದಲ್ಲಿ ಅಮೇರಿಕಾದಲ್ಲಿ ವಾಸಿಸುತ್ತಿರುವ ಪೋಷಕರ ಆತಂಕ ತೀವ್ರಗೊಂಡಿದ್ದು, ಈಗೇನ್ ಆಗುತ್ತೆ, ಕೆಲಸ ಕಳೆದುಕೊಳ್ಳುತ್ತಾರೆಯೇ..? ಎಂಬ ಕುರಿತು ಚರ್ಚೆ ತೀವ್ರವಾದೆ.

ಟ್ರಂಪ್ ಆದೇಶ ಪರಿಣಾಮ ಪಾಟ್ನಾದಿಂದ, ಬೆಂಗಳೂರು ವರೆಗೂ ತಟ್ಟುವ ಆತಂಕ ಎದುರಾಗಿದೆ.

ಮೊದಲು H-1B ವೀಸಾ ನವೀಕರಣಕ್ಕೆ 6 ಲಕ್ಷ ನೀಡಿದರೆ ಸಾಕಿತ್ತು. ಆದರೆ ಟ್ರಂಪ್ ಜಾರಿಗೆ ತಂದಿರುವ ನೂತನ ಕಾಯ್ದೆ ಅನ್ವಯ ವರ್ಷಕ್ಕೆ 1 ಲಕ್ಷ ಡಾಲರ್ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದು ಭಾರತೀಯ ರೂಪಾಯಿ ಮೌಲ್ಯದ ಅನ್ವಯ 88 ಲಕ್ಷಕ್ಕೂ ಹೆಚ್ಚು ಫೀಸ್ ನೀಡಬೇಕಾದ ಪರಿಸ್ಥಿತಿ ಎದುರಾಗಿದೆ.

ಇದು ಒಂದು ವರ್ಷಕ್ಕೋ ಅಥವಾ ಹಲವು ವರ್ಷಗಳಿಗೂ ಎಂಬ ಕುರಿತು ಸ್ಪಷ್ಟನೆ ದೊರೆತಿಲ್ಲ. ಬದಲಿಗೆ ಈ ಫೀಸ್ ಕಂಪನಿ ನೀಡುತ್ತದೆ..? ಅಥವಾ ಅಮೇರಿಕಾದಲ್ಲಿ ಉದ್ಯೋಗ ಮಾಡುತ್ತಿರುವ ಆನಿವಾಸಿಗಳು ನೀಡಲು ಸಾಧ್ಯವೇ..? ಈ ಕಾರಣವೇ ಅಮೇರಿಕಾದಲ್ಲಿ ಉದ್ಯೋಗ ಮಾಡುತ್ತಿರುವ ಲಕ್ಷಾಂತರ ಮಂದಿ ಭಾರತಿಯರು ಉದ್ಯೋಗ ಕಳೆದುಕೊಳ್ಳುವ ಆತಂಕ ಕಾಡಲು ಮುಖ್ಯ ಕಾರಣ.

ಕೂಡಲೇ ಭಾರತದ ವಿದೇಶಾಂಗ ಸಚಿವಾಲಯ ಸುದ್ದಿಗೋಷ್ಠಿ ನಡೆಸಬೇಕಿದೆ. ಏಕೆಂದರೆ ಈ ಕಾಯ್ದೆಯಿಂದ ಭಾರತೀಯ ಇಂಜಿನಿಯರ್‌ಗಳಿಗೆ ಎಷ್ಟು ಪರಿಣಾಮ ಬೀರುತ್ತದೆ, ವಿದೇಶಾಂಗ ಸಚಿವಾಲಯದಿಂದ ಯಾವ ರೀತಿ ನೆರವು ನೀಡಲಾಗುತ್ತದೆ ಎಂಬ ಕುರಿತು ಭಾರತೀಯರಿಗೆ ಸ್ಪಷ್ಟನೆ ನೀಡಬೇಕಿದೆ.

ಅಲ್ಲದೆ H-1B ಬಿ ವಿಸಾದ ಅಡಿಯಲ್ಲಿ ಅಮೇರಿಕಾದಲ್ಲಿ ವಾಸಿಸುತ್ತಿರುವ ಭಾರತೀಯರಿಂದ ಅಮೇರಿಕಾಗೆ ಆಗುತ್ತಿರುವ ಅನುಕೂಲಗಳೇನು ಎಂಬುದನ್ನು ಮನದಟ್ಟು ಮಾಡಬೇಕಿದೆ‌. ಏಕೆಂದರೆ ಲಕ್ಷಾಂತರ ಭಾರತೀಯರಿಂದ ಅಮೇರಿಕಾದ ಆರ್ಥಿಕತೆ ಮೇಲೆ ಎಷ್ಟು ಪರಿಣಾಮ ಬೀರುತ್ತದೆ. ಈಗಾಗಲೇ ಲಕ್ಷಾಂತರ ಟ್ಯಾಕ್ಸ್ ಕಟ್ಟುವುದು, ಅಲ್ಲಿನ ಮಳಿಗೆಗಳಲ್ಲಿ ವ್ಯಾಪಾರ ವಹಿವಾಟು, ರಿಯಲ್ ಎಸ್ಟೇಟ್ ವಹಿವಾಟು, ಶಾಲೆಗಳಿಗೆ ಮಕ್ಕಳ ಫೀಸ್ ಕಟ್ಟಿರುವುದು, ಡಾಕ್ಟರ್‌ಗಳು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವ ಭಾರತೀಯ ಪ್ರತಿಭೆಗಳಿಂದ ಅಮೇರಿಕಾದ ಆಸ್ಪತ್ರೆಗಳು ಸೇರಿದಂತೆ ಅನೇಕ ಕಂಪನಿಗಳು ನಡೆಯುತ್ತಿವೆ ಎಂಬುದನ್ನು ಮನದಟ್ಟು ಮಾಡಿಕೊಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

ಕನಿಷ್ಠ ಭಾರತೀಯರಿಂದ ಅಮೇರಿಕಾಗೆ ಅನುಕೂಲವೇ ಹೊರತು, ನಷ್ಟವಾಗಿಲ್ಲ ಎಂಬ ಕುರಿತು ವಿದೇಶಾಂಗ ಸಚಿವಾಲಯ ಹೇಳುತ್ತದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.

ನೇರವಾಗಿ ಹೇಳುವುದಾದರೆ ಟ್ರಂಪ್ ನೂತನ ನೀತಿಯಿಂದಾಗಿ ಐಟಿ ಸೆಕ್ಟರ್ ‌ಗಳಲ್ಲಿ ದುಡಿಯುತ್ತಿರುವ ಭಾರತೀಯರನ್ನು ಉದ್ಯೋಗದಿಂದ ತೆಗೆಸಿ, ಅಮೇರಿಕಾದವರಿಗೆ ಮಾತ್ರ ಉದ್ಯೋಗ ಕೊಡಿಸುವ ಹುನ್ನಾರ ಅಡಗಿದೆ.

ಟ್ರಂಪ್ ಆದೇಶದಿಂದ ಭಾರತೀಯ ಸಾಫ್ಟ್‌ವೇರ್ ಇಂಜಿನಿಯರ್ ಗಳ ಬದುಕಿನಲ್ಲಿ ಬಿರುಗಾಳಿ ಎದ್ದಿದ್ದು, ಇದಕ್ಕೆ ಕೇಂದ್ರ ಸರ್ಕಾರದ ಕಳಪೆ ವಿದೇಶಾಂಗ ನೀತಿ ಕಾರಣ ಎನ್ನಲಾಗುತ್ತಿದೆ. ಏಕೆಂದರೆ ಭಾರತದ ವಿರುದ್ಧ ಟ್ರಂಪ್ ಪದೇ ಪದೇ ಪರೋಕ್ಷ ದಾಳಿ ನಡೆಸುತ್ತಿದ್ದರು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಾತನಾಡುತ್ತಿಲ್ಲ. ಬದಲಾಗಿ ಭಾರತ ನಮ್ಮ ಸ್ನೇಹಿತ ಎಂದು ಟ್ರಂಪ್ ಬರೆಯುವ ಲವ್ ಲೆಟರ್ಗೆ (ಟ್ವೀಟ್) ಉತ್ತರ ಮಾತ್ರ ನೀಡುತ್ತಾ ಕುಳಿತಿದ್ದಾರೆ ಎಂಬ ಆಕ್ರೋಶ ನೆಟ್ಟಿಗರದ್ದಾಗಿದೆ.

ಅಮೇರಿಕಾದ ಜೊತೆ ಉತ್ತಮ ಸಂಬಂಧದ ಕಾರಣ ಭಾರತೀಯರಿಗೆ ಅನುಕೂಲವಾಗಿದೆ. ಸಾಧಾರಣ ಕುಟುಂಬದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಬಳಿಕ ಅಮೇರಿಕಾದಲ್ಲಿ ಉದ್ಯೋಗಕ್ಕೆ ತೆರಳು ಕುಟುಂಬವನ್ನು ಪೋಷಿಸುತ್ತಿದ್ದಾರೆ. ಇದರಿಂದ ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಆದರೆ ಟ್ರಂಪ್ ನೂತನ ಆದೇಶದಿಂದ ಈ ಇಂಜಿನಿಯರ್‌ಗಳು ಕೆಲಸ ಕಳೆದುಕೊಂಡು ಭಾರತಕ್ಕೆ ವಾಪಸ್ ಬರಬೇಕಾದ ಅನಿವಾರ್ಯತೆ ಉಂಟಾಗಿರುವುದು ಆ ಕುಟುಂಬವನ್ನು ಸಂಕಷ್ಟಕ್ಕೆ ದೂಡಲಿದೆ. ಏಕೆಂದರೆ ಅಮೇರಿಕಾದಲ್ಲಿ ದೊರೆತಂತೆ ಉತ್ತಮ ಸಂಬಳ, ಉದ್ಯೋಗ ಭಾರತದಲ್ಲಿ ದೊರಕುವುದು ಕಷ್ಟ ಸಾಧ್ಯ.

ಕೇಂದ್ರ ಸರ್ಕಾರದ ವಿದೇಶಾಂಗ ನೀತಿ ಸಂಪೂರ್ಣವಾಗಿ ನೆಲಕಚ್ಚಿರುವುದಕ್ಕೆ ಇಂತಹ ಬೆಳವಣಿಗೆ ಸಾಕ್ಷಿಯಾಗಿದೆ. ಇದರ ಪರಿಣಾಮ ಜನಸಾಮಾನ್ಯರಿಗೆ ತಟ್ಟಲಾರಂಭಿಸಿದ್ದು, ಅವರ ಮಕ್ಕಳ ಭವಿಷ್ಯ ಮತ್ತು ಕನಸಿನ ಮೇಲೆ ಅಂಧಾಕಾರ ಕವಿಯುತ್ತಿರುಚ ಸತ್ಯವನ್ನು ಅರಿತುಕೊಳ್ಳಬೇಕೆಂದು ಹಿರಿಯ ಪತ್ರಕರ್ತ ರವೀಶ್ ಕುಮಾರ್ ಅವರು H-1B ವೀಸಾ ದಿಂದ ಭಾರತದ ಮೇಲೆ ಉಂಟಾಗಲಿರುವ ಪರಿಣಾಮವನ್ನು ವಿವರಿಸಿದ್ದಾರೆ.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!