Doddaballapur: Accident News Update.. Boy dies

ದೊಡ್ಡಬಳ್ಳಾಪುರ: ಭೀಕರ ಅಪಘಾತ.. ಅಂಬುಲೆನ್ಸ್ ಸಿಗದೆ ಬೀದಿಯಲ್ಲಿ ಒದ್ದಾಡಿದ ಗಾಯಾಳುಗಳು..!

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ (Accident) ಸಂಭವಿಸಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಗುಮ್ಮನಹಳ್ಳಿ ಸಮೀಪ ಇಂದು ಸಂಜೆ ಸಂಭವಿಸಿದೆ.

ತಾಲೂಕಿನ ಗುಮ್ಮನಹಳ್ಳಿ-ಲಿಂಗಧೀರನಹಳ್ಳಿ ಗೇಟ್ ನಡುವಿನ ತಿರುವಿನಲ್ಲಿ ಮುಖಾಮುಖಿಯಾದ ಸ್ಕೂಟರ್ ಮತ್ತು ಬೈಕ್ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಬೆನ್ನಲ್ಲೇ ದಾರಿ ಹೋಕರು ಅಂಬುಲೆನ್ಸ್ಗೆ ಕರೆ ಮಾಡಿ ಒಂದು ಗಂಟೆ ಕಾದರು ಸ್ಥಳಕ್ಕೆ ಬಾರದೆ ಇರುವ ಕಾರಣ, ಸುಮಾರು ಒಂದು ಗಂಟೆಗಳ ಕಾಲ ಗಾಯಗೊಂಡವರು ನಡು ರಸ್ತೆಯಲ್ಲಿಯೇ ನರಳಿದ್ದಾರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಟಿ.ವೆಂಕಟರಮಣಯ್ಯ ನೆರವು

ಘಟನೆ ಸಂಭವಿಸಿದ ದಾರಿಯಲ್ಲಿಯೇ ತೆರಳುತ್ತಿದ್ದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು, ಅಪಘಾತ ಕಂಡು ಕಾರು ನಿಲ್ಲಿಸಿ ಸ್ಥಳಕ್ಕೆ ದೌಡಾಯಿಸಿದರು, ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿ, ತಮ್ಮ ಕಾರಿನಲ್ಲಿ ಇದ್ದ ಮಗು ಸೇರಿದಂತೆ ಕುಟುಂಬಸ್ಥರ ಕೆಳಗಿಳಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲು ಮುಂದಾದರು. ಈ ವೇಳೆ 112 ವಾಹನ ಸ್ಥಳಕ್ಕೆ ಬಂದು ಗಾಯಗೊಂಡವರನ್ನು ಆಸ್ಪತ್ರೆಗೆ ಕಳಿಸಿಕೊಡಲಾಯಿತು.

ಬಳಿಕ ಅಧಿಕಾರಗಳಿಗೆ ಕರೆ ಮಾಡಿ ಟಿ.ವೆಂಕಟರಮಣಯ್ಯ ಅವರು ಸಮರ್ಪಕವಾಗಿ ಅಂಬುಲೆನ್ಸ್ ವ್ಯವಸ್ಥೆ ಮಾಡದ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

ಗಾಯಗೊಂಡವರನ್ನು ತಾಯಿ ಮತ್ತು ಮಗ ಮಧುಗಿರಿ ತಾಲೂಕಿನ ಬಿಜವಾರ ಗ್ರಾಮದವರು ಎನ್ನಲಾಗಿದ್ದು, ಇನ್ನಿಬ್ಬರು ನೇಪಾಳಿ ಮೂಲದವರು ಎನ್ನಲಾಗುತ್ತಿದೆ.

ಹೊಸಹಳ್ಳಿ ಮತ್ತು ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ನಡುವೆ ಘಟನೆ ಸಂಭವಿಸಿದ್ದು, ಯಾವ ಠಾಣೆ ವ್ಯಾಪ್ತಿಯೆಂದು ಖಚಿತವಾಗಿಲ್ಲ.

ಬಾರದ ಅಂಬುಲೆನ್ಸ್.. ಆಕ್ರೋಶ

ಇನ್ನೂ ಘಟನೆ ನಡೆದು ಗಂಟೆಗಳು ಕಳೆದರು ಸ್ಥಳಕ್ಕೆ ಅಂಬುಲೆನ್ಸ್ ಬಾರದೆ ಇರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಸಲು ವ್ಯಾಪ್ತಿಯಲ್ಲಿ ಇದ್ದ ಅಂಬುಲೆನ್ಸ್ ಮತ್ತೊಂದು ಅಪಘಾತದಲ್ಲಿ ಗಾಯಗೊಂಡವರ ಕರೆದುಕೊಂಡು ಬೆಂಗಳೂರಿಗೆ ತೆರಳಿದೆ. ಬದಲಿ ಅಂಬುಲೆನ್ಸ್ಗೆ ಕರೆ ಮಾಡಿದರು ಸ್ಥಳಕ್ಕೆ ಬರಲಿಲ್ಲವೆಂದು ಆಕ್ರೋಶ ವ್ಯಾಪಕವಾಗಿ ಕೇಳಿಬಂತು.

ಇದನ್ನೂ ಓದಿ; ದೊಡ್ಡಬಳ್ಳಾಪುರ: ಭೀಕರ ಅಪಘಾತ.. ಕೆರಳಿದ ಯುವಕರಿಂದ ಸರ್ಕಾರಿ ಆಸ್ಪತ್ರೆಗೆ ಬೇಲಿ..!

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಸೇರಿ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

[ccc_my_favorite_select_button post_id="116728"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!