ಮೈಸೂರು ದಸರಾ ಉದ್ಘಾಟನೆ.. ಬಾನು ಮುಷ್ತಾಕ್ ಭಾವುಕ

Banu Mushtaq inaugurates Dasara.. emotional

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara) ಉತ್ಸವಕ್ಕೆ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಅಧಿಕೃತವಾಗಿ ಚಾಲನೆ ನೀಡಿದರು.

10.10 ಕ್ಕೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ನಡೆಸುವ ಮೂಲಕ ಬಾನು ಮುಷ್ತಾಕ್ ಐತಿಹಾಸಿಕ ಪ್ರಸಿದ್ಧ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.

ಮೈಸೂರು ದಸರಾ ಉದ್ಘಾಟನೆ.. ಬಾನು ಮುಷ್ತಾಕ್ ಭಾವುಕ

ಸಿಎಂ ಸಿದ್ದರಾಮಯ್ಯ ಸಚಿವ ಮಹದೇವಪ್ಪ ಸೇರಿದಂತೆ ಹಲವು ಗಣ್ಯರು ಈ ಐತಿಹಾಸಿಕ ದಸರಾ ಮಹೋತ್ಸವದ ಉದ್ಘಾಟನಾ ಕ್ಷಣಕ್ಕೆ ಸಾಕ್ಷಿಯಾದರು.

ಸಿಎಂ ಸಿದ್ದರಾಮಯ್ಯ ಬಾನು ಮುಷ್ತಾಕ್ ಸೇರಿದಂತೆ ಅನೇಕ ಸಚಿವರು, ಶಾಸಕರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಬಾನು ಮುಷ್ತಾಕ್ ಅವರು ಮಲ್ಲಿಗೆ ಹೂವು ಮುಡಿದು ಚಾಮುಂಡೇಶ್ವರಿ ದರ್ಶನ ಪಡೆದರು.

ಇದಕ್ಕೂ ಮೊದಲು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಪಕ್ಕದಲ್ಲಿ ನಿಂತು ದೇವಿಯ ಮಂಗಳಾರತಿ ಸ್ವೀಕರಿಸಿದರು.

ಮೈಸೂರು ದಸರಾ ಉದ್ಘಾಟನೆ.. ಬಾನು ಮುಷ್ತಾಕ್ ಭಾವುಕ

ಬಳಿಕ ಚಾಮುಂಡಿ ಪ್ರಾಧಿಕಾರದ ವತಿಯಿಂದ ಬಾನು ಮುಷ್ತಾಕ್ ಅವರಿಗೆ ನೀಲಿ ಸೀರೆ ನೀಡಿದ್ದು, ಈ ವೇಳೆ ಬಾನು ಬಾನು ಮುಷ್ತಾಕ್ ಬಾವುಕರಾಗಿ, ಸೀರೆಯಿಂದ ಕಣ್ಣೀರು ಒರೆಸಿಕೊಂಡರು.

ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಬಾನು ಮುಷ್ತಾಕ್ ಅವರು ತಿಳಿಸಿದರು.

ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ.

ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ದಸರಾ- ಶಾಂತಿಯ ಹಬ್ಬ, ಸೌಹಾರ್ದದ ಮೇಳ

ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ, ದೇಶಕ್ಕೆ ಮಾತ್ರ ಸೀಮಿತವಾಗದೇ, ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ

ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ,ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ, ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು ಎಂದರು.

ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ

ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟ ವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ, ಆದರೆ ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು

ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ ಎಂದರು.

ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ

ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ

ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ.

ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.

ಬಾಗಿನ

ಮೊರ ಅಂದರೆ ಗೊತ್ತಲ್ಲಾ. . ..
ಕೇರುತ್ತೆ ಅದು ,ಅಲ್ಲಿ
ಇಲ್ಲಿ ಮತ್ತು ಎಲ್ಲೆಲ್ಲೂ

ಆ ದಿನ. . . .
ಸೇವಂತಿಗೆ ಹೂವು ಚಳ್ಳನೆ ನಗು
ಚಿಮುಕಿಸುತ್ತಿತು.ದಿನ ತುಂಬಿದ್ದ
ಮೋಡ ಎರಡೂ ಕೈಯಲಿ ಸೊಂಟ
ಹಿಡಿದು ಬೆವರಿನಿಂದ ತೊಯ್ದು
ಉಸ್ಸೆಂದಾಗ

ಆಕಾಶ ಭೂಮಿ ಮತ್ತು ಸಮಸ್ತವೂ ಗಲಗಲ
ಅಂತ ಚಿಮ್ಮುತ್ತಿದ್ದವ್ತು.ಅಸೂಯೆಯಿಂದ ಸೂರ್ಯ
ಕೆಂಪಾಗಿದ್ದ , ನನಗಿಲ್ಲದ ವಾತ್ಸಲ್ಯದಲ್ಲಿ ಇವಳು
ಹೇಗೆ ಮಿನುಗುತ್ತಾಳೆ ಅಂತ

ಅದೇನೂ ಎಂದಿನ ದಿನವಾಗಿರಲಿಲ್ಲ
ಸಂಭ್ರಮಕೇ ದೊಡ್ಡ ಮುಳ್ಳು ಚಿಕ್ಕ ಮುಳ್ಳು
ಅಂಟಿ ಜೂಟಾಟವಾಡುತ್ತಿದ್ದವಲ್ಲಾ

ಅಚ್ಚ ಕೃಷಿಕ ಬಸವರಾಜಣ್ಣನ ಎಡ
ಹೆಗಲಿನ ವಲ್ಲಿಯೊಡನೆ ಮಣ್ಣಿನ
ಗುಣ ಹೀರಿದ್ದ ನಾನು ಬಾನು
ವಿನಿಂದ ಜಯಾ ಅಗಿದ್ದು ಹೀಗೆ
ಯಾವುದೇ ಗೋಡೆಗಳಿರಲಿಲ್ಲ ಬಿಡಿ
ಪ್ರೀತಿಯ ಒಳ ಒರತೆಗಳು
ಜಿನುಗುವುದು ಹೀಗೆ ನೋಡಿ

ಸಾಬರ ಮಗಳು ಸಾಬರ ಸೊಸೆಗೆ
ಜೀವದುಂಬಿದ ಹಸಿ ಮಣ್ಣಿನ ಬಾಗಿನ
“ಜಯಾ. . . .ನಡಿಯವ್ವ ಹಬ್ಬಕೆ ‘
ಅರಿಶಿನದ ಎಲೆ ಕಡುಬು

ಗಂಡನ ಮನೆಯ ಕಸೂತಿ ನೆರಿಗೆಗಳ
ಸದಾ ಚಿಮ್ಮುತ್ತಿದ್ದರೂಎದೆಯಾಳದಲಿ
ಪಿಸುಗುಟ್ಟಿದ್ದು ಆ ಎಲೆ ಹಸಿರು
ವಾತ್ಸಲ್ಯವ ನೆಯ್ದ ಸಾದಾ ಸೀರೆ

ಮಡಿಲಲಿ ತುಂಬಿಸಿ ಕವುಚಿದ ಮೊರವ
ಮರಳುವ ದಾರಿಯಲಿ ನಿಂತು
ಅರಳಿಮರವ ಕೇಳಿದ್ದೆ
ಹೇಗೆ ಕೊಂಡೊಯ್ಯಲಿ ಇದನು
ನನ್ನತ್ತೆ ಮನೆಗೆ ಅರಿಶಿನ ಕುಂಕುಮದೊಡನೆ

ಹೇಗೆ ಬಿಡಿಸಲಿ ಬಾಂಧವ್ಯದ ಎಳೆಗಳ
ರಂಗೋಲಿಯನು ಸಾಬರ ಮನೆ ಬಾಗಿಲಲಿ
ಕೊಡಲೇ ಯಾರಿಗಾದರೂ ದಾರಿಹೋಕರಿಗೆ?
ಕೊಡಬಹುದೇ ಆದನು ಯಾರಿಗಾದರೂ
ಆ ಒಲವನು ಬಲವನು
ಪಿತೃ ವಾತ್ಸಲ್ಯದ ಮಾತೃತ್ವವನು

ನೆನೆಸಿಕೊಂಡಾಗ ಈಗಲೂ
ಕಣ್ಣಂಚಿನಲಿ ತೇವ
ಮೊರದ ತುಂಬಾ ಬದುಕಿನ ಪಸೆಯ
ಹಸೆಯ ಬರೆದ ಬೇಸಿಗೆ ಹಕ್ಕಿಯ ವಿದಾಯ

ಬಸವರಾಜಣ್ಣ. . . .
ನೀವು ಕೊಟ್ಟ ಮೊರಹೇಳುತ್ತ
ಮಿಡಿಯುತ್ತೆ ಸಹಸ್ರ ಆರೋಪಗಳೆದುರು
ಒಂಟಿಯಾಗಿ ನಿಲ್ಲುತ್ತೆ ,ದ್ವೇಷದ ಎಲ್ಲಾ
ಭಾಷೆಗಳ ಕವುಚಿ ಹಾಕುತ್ತೆ ಮುಂಜಾವಿನ
ಹೊಂಬೆಳಕಿನೊಂದಿಗೆ ಪ್ರೀತಿಯ ನಿರ್ಮಲ
ಅಲೆಗಳು ಮೊರದ ತುಂಬಾ
ತೂರುತ್ತಿರುತ್ತವೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]