Isha Gramotsava 2025; Heggadihalli team from Doddaballapur emerged as the runner-up in the grand finale..!

ಈಶ ಗ್ರಾಮೋತ್ಸವ 2025; ಗ್ರ್ಯಾಂಡ್ ಫಿನಾಲೆಯಲ್ಲಿ ರನ್ನರ್‌ಅಪ್ ಆಗಿ ಹೊರಹೊಮ್ಮಿದ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ತಂಡ..!

ಕೊಯಂಬತ್ತೂರು: ಈಶ ಗ್ರಾಮೋತ್ಸವದಲ್ಲಿ (Isha Gramotsava) ಆಯೋಜಿಸಲಾಗಿದ್ದ ಪುರುಷರ ವಾಲಿಬಾಲ್‌ನಲ್ಲಿ ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿಯ ಬಿ.ರಂಜಿತ್ ನೇತೃತ್ವದ ತಂಡವು ರನ್ನರ್‌ಅಪ್ ಆಗಿ ಹೊರಹೊಮ್ಮುವ ಮೂಲಕ ಕರ್ನಾಟಕದ ಗ್ರಾಮೀಣ ಆಟಗಾರರ ಶಕ್ತಿ ಹಾಗೂ ಚೈತನ್ಯವನ್ನು ತೋರ್ಪಡಿಸಿದೆ.

Isha Gramotsava 2025; Heggadihalli team from Doddaballapur emerged as the runner-up in the grand finale..!
Isha Gramotsava 2025; Heggadihalli team from Doddaballapur emerged as the runner-up in the grand finale..!

ಮಹಿಳೆಯರ ಥ್ರೋಬಾಲ್‌ನಲ್ಲಿ, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬಡಗನ್ನೂರಿನಿಂದ ಬಂದ ತಂಡವು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ದೇವರಾಯಪುರಂನಿಂದ ಬಂದ ತಂಡವನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.

ವಿಜೇತರು ರೂ.5 ಲಕ್ಷ ಬಹುಮಾನ ಪಡೆದರೆ, ರನ್ನರ್-ಅಪ್ ತಂಡ ರೂ.3 ಲಕ್ಷ ಬಹುಮಾನ ಪಡೆಯುವ ಮೂಲಕ ಈಶ ಗ್ರಾಮೋತ್ಸವದ ಎರೆಡು ತಿಂಗಳುಗಳ ಸರಣಿ ಪಂದ್ಯಾವಳಿಗಳಿಗೆ ವಿಜೃಂಭಣೆಯಿಂದ ತೆರೆ ಎಳೆಯಲಾಯಿತು.

“ಇಷ್ಟೊಂದು ಭಾರೀ ಮಟ್ಟದ ಕಾರ್ಯಕ್ರಮವನ್ನು ಸದ್ಗುರುಗಳು ಹೇಗೆ ಆಯೋಜಿಸಿದ್ದಾರೆ ಎಂಬುದನ್ನು ತಿಳಿಯಲು ನಾನು ಈಶ ಗ್ರಾಮೋತ್ಸವಕ್ಕೆ ಬಂದಿದ್ದೇನೆ” ಎಂದು 2025ರ ಈಶ ಗ್ರಾಮೋತ್ಸವದ ಅಪಾರ ವ್ಯಾಪ್ತಿ ಮತ್ತು ಭವ್ಯತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತ, ಭಾರತದ ಕಾರ್ಮಿಕ ಹಾಗೂ ಉದ್ಯೋಗ ಸಚಿವರು ಹಾಗೂ ಯುವಜನಾಂಗ ಮತ್ತು ಕ್ರೀಡಾ ಸಚಿವರಾದ ಮನ್ಸುಖ್ ಮಂಡಾವಿಯಾ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಎರಡು ತಿಂಗಳ ಅವಧಿಯಲ್ಲಿ ನಡೆದ ಈಶ ಗ್ರಾಮೋತ್ಸವದ 2025ರ ಆವೃತ್ತಿಯು ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತೆಲಂಗಾಣ ಸೇರಿದಂತೆ ಆರು ರಾಜ್ಯಗಳಲ್ಲಿ ಮತ್ತು ಮೊದಲ ಬಾರಿಗೆ ಒಡಿಶಾದಲ್ಲಿ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಿತು.

ಈ ಬಾರಿಯ ಉತ್ಸವವು 183 ಸ್ಥಳಗಳು, 5,472 ತಂಡಗಳು, 12,000 ಕ್ಕೂ ಹೆಚ್ಚು ಮಹಿಳೆಯರನ್ನು ಒಳಗೊಂಡಂತೆ ಒಟ್ಟು 63,220 ಸ್ಪರ್ಧಿಗಳು, ಮತ್ತು 35,000ಕ್ಕೂ ಹೆಚ್ಚು ಹಳ್ಳಿಗಳ ಪ್ರಾತಿನಿಧ್ಯಕ್ಕೆ ಸಾಕ್ಷಿಯಾಯಿತು.

“2028ರ ವೇಳೆಗೆ ಈಶ ಗ್ರಾಮೋತ್ಸವವು ದೇಶದ 28 ರಾಜ್ಯಗಳಲ್ಲೂ ನಡೆಯಬೇಕಾಗಿದೆ, ಇದು ನನ್ನ ಬದ್ಧತೆ. ಇದು ಕೇವಲ ಕ್ರೀಡೆಯ ವಿಷಯವಲ್ಲದೆ, ಗ್ರಾಮೀಣ ಭಾರತದಲ್ಲಿ ವಿಭಿನ್ನ ಸ್ತರದ ಜೀವನವನ್ನು ಪುನರ್ಜ್ವಲಿಸುವುದು ಮತ್ತು ಮರುಜಾಗೃತಗೊಳಿಸುವುದೇ ಇದರ ಉದ್ದೇಶ” ಎಂದು ಸಭಿಕರನ್ನುದ್ದೇಶಿಸಿ ಸದ್ಗುರುಗಳು ಹೇಳಿದರು.

2004ರಲ್ಲಿ ಸದ್ಗುರುಗಳು ಚಾಲನೆ ನೀಡಿದ ಈಶ ಗ್ರಾಮೋತ್ಸವವು ಸಾಮಾಜಿಕ ಪರಿವರ್ತನೆಗೆ ಪ್ರಬಲ ಸಾಧನವಾಗಿದೆ, ಇದರಿಂದಾಗಿ ಗ್ರಾಮೀಣ ಜನರು ವ್ಯಸನಗಳಿಂದ ಮುಕ್ತರಾಗಲು, ಜಾತಿ ವಿಭಜನೆಗಳನ್ನು ಮೀರಿ ನಿಲ್ಲಲು, ಮಹಿಳಾ ಸಬಲೀಕರಣ ಮತ್ತು ಗ್ರಾಮೀಣ ಭಾಗಗಳಲ್ಲಿ ಉತ್ಸಾಹಪೂರ್ಣ ಆಟದ ಮನೋಭಾವವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡುತ್ತದೆ. ತಂಡವನ್ನು ಗ್ರಾಮ ಪಂಚಾಯಿತಿಯ ಮಿತಿಯೊಳಗಿನ ಆಟಗಾರರೊಂದಿಗೆ ಮಾತ್ರ ರಚಿಸಬಹುದಾಗಿದ್ದು, ಇದು ಸಮುದಾಯಗಳನ್ನು ಒಗ್ಗೂಡಿಸುವ ಮೂಲಕ ಸ್ಥಳೀಯ ಹೆಮ್ಮೆಯನ್ನು ಆಚರಿಸುತ್ತದೆ.

ವೃತ್ತಿಪರ ಆಟಗಾರರಿಗಲ್ಲದೆ, ಈಶ ಗ್ರಾಮೋತ್ಸವವು ಗ್ರಾಮೀಣ ಚೈತನ್ಯದ ಸಂಭ್ರಮಾಚರಣೆಯಾಗಿದೆ. ಇದು ರೈತರು, ದಿನಗೂಲಿ ಕಾರ್ಮಿಕರು ಮತ್ತು ಗೃಹಿಣಿಯರು ಸೇರಿದಂತೆ ಜನಸಾಮಾನ್ಯ ಗ್ರಾಮೀಣ ಜನರಿಗೆ ತಮ್ಮ ದೈನಂದಿನ ಕಾರ್ಯಗಳಿಂದ ಹೊರಬಂದು ಕ್ರೀಡೆಯ ಸಂಭ್ರಮ ಮತ್ತು ಐಕ್ಯತೆಯ ಶಕ್ತಿಯನ್ನು ಆನಂದಿಸಲು ಅವಕಾಶ ನೀಡುತ್ತದೆ.

ಈಶ ಗ್ರಾಮೋತ್ಸವವನ್ನು ಆಯೋಜಿಸುವ ಈಶ ಔಟ್‌ರೀಚ್ಅನ್ನು ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದಿಂದ ‘ನ್ಯಾಷನಲ್ ಸ್ಪೋರ್ಟ್ಸ್ ಪ್ರಮೋಷನ್ ಆರ್ಗನೈಸೇಷನ್’(NSPO) ಎಂದು ಗುರುತಿಸಲಾಗಿದೆ. 2018ರಲ್ಲಿ, ಈ ಉಪಕ್ರಮವು ಬೇರುಮಟ್ಟದ ಕ್ರೀಡೆಗಳಿಗೆ ನೀಡಿದ ಅಸಾಧಾರಣ ಕೊಡುಗೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರವನ್ನು ಪಡೆಯಿತು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!