Provide information on fines imposed against mining-laden vehicles: Shobha Karandlaje

ಗಣಿಗಾರಿಕೆ ಓವರ್ ಲೋಡ್ ವಾಹನಗಳ ವಿರುದ್ಧ ದಂಡ ವಿಧಿಸಿರುವ ಮಾಹಿತಿ ನೀಡಿ : ಶೋಭಾ ಕರಂದ್ಲಾಜೆ

ಬೆಂಗಳೂರು: ನಿಗದಿಗಿಂತ ಅಧಿಕ ಪ್ರಮಾಣದಲ್ಲಿ ಜಲ್ಲಿ, ಸೈಜುಗಲ್ಲು, ಮರಳು ಮತ್ತು ಎಂ.ಸ್ಯಾಂಡ್ ಸಾಗಿಸುವ ವಾಹನಗಳ ವಿರುದ್ಧ ಕೈಗೊಂಡಿರುವ ಕ್ರಮ ಹಾಗೂ ದಂಡ ವಿಧಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅವರು ಇಂದು ನಗರದ ಬನಶಂಕರಿಯಲ್ಲಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಧಿಕಾರಿಗಳ ಕರ್ತವ್ಯ ಲೋಪದಿಂದಾಗಿ ಸರ್ಕಾರಕ್ಕೆ ಸಂದಾಯವಾಗಬೇಕಿದ್ದ ರಾಜಸ್ವ ಬರುತ್ತಿಲ್ಲ. ನಿಯಮ ಉಲ್ಲಂಘಿಸಿದ ಲಾರಿಗಳಿಗೆ ಜಿಲ್ಲಾಧಿಕಾರಿಗಳು ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ. ಆದರೆ, ಅಧಿಕಾರಿಗಳು ದಂಡ ವಸೂಲಿ ಮಾಡಲು ಮೀನಾಮೇಷ ಎಣಿಸುತ್ತಿದ್ದಾರೆ. ಇನ್ನೂ ಮುಂದೆ ಮಿತಿಮೀರಿ ಲೋಡ್ ಸಾಗಿಸುವ ವಾಹನಗಳಿಗೆ ಮುಲಾಜಿಲ್ಲದೆ ದಂಡ ಹಾಕಬೇಕು. ಆದಾಯ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕ್ರೀಡಾ ಇಲಾಖೆಯ ಅಧಿಕಾರಿಗಳು ‘ಖೇಲೋ ಇಂಡಿಯಾ’ಕ್ಕೆ ಹೆಚ್ಚು ಒತ್ತು ನೀಡುವ ಕೆಲಸ ಆಗಬೇಕು. ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಅದಕ್ಕೆ ತಕ್ಕಂತೆ ಇಲಾಖೆಯ ಅಧಿಕಾರಿಗಳು ಕೆಲಸ ಮಾಡಬೇಕು.

ತನ್ಮೂಲಕ ಮುಂದಿನ ದಿನಗಳಲ್ಲಿ ‘ಖೇಲೋ ಇಂಡಿಯಾ’ ಕ್ರೀಡಾಕೂಟಕ್ಕೆ ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಕಳಪೆ ಗುಣಮಟ್ಟದ್ದಾಗಿದ್ದು, ಕೆಲವೆಡೆ ಕಾಮಗಾರಿ ನಡೆಸದೆ ಗುತ್ತಿಗೆದಾರರು ಬಿಲ್ ಪಡೆದಿರುವ ಬಗ್ಗೆ ದೂರುಗಳು ಬಂದಿವೆ. ಸಾಕಷ್ಟು ಮನೆಗಳಿಗೆ ನಲ್ಲಿ ಸಂಪರ್ಕವನ್ನೇ ಕಲ್ಪಿಸದಿರುವುದು ಕಂಡುಬಂದಿದ್ದು, ಅಂತಹ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅವರು ತಿಳಿಸಿದರು.

ಮಹದೇವಪುರ ಕ್ಷೇತ್ರ ಹಾಗೂ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಉದ್ಘಾಟನೆಗಳಿಗೆ ಲೋಕಸಭಾ ಸದಸ್ಯರನ್ನು ಆಹ್ವಾನ ಮಾಡುವಂತೆ ಹಾಗೂ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಹಾಯಕ ಕಾರ್ಯಪಾಲ ಇಂಜನಿಯರ್ ರವರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವಂತಹ ಹಾಸ್ಟೆಲ್ ಗಳಲ್ಲಿ ಮಕ್ಕಳಿಗೆ ನೀಡುವ ಆಹಾರ ಪಾದರ್ಥಗಳ ಗುಣಮಟ್ಟವನ್ನು ಪರಿಶೀಲಿಸಿ ನಿಗದಿಪಡಿಸಿದ ಮೆನು ಚಾರ್ಟ್ ಪ್ರಕಾರ ಆಹಾರವನ್ನು ವಿತರಿಸಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಮಾತನಾಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 44 ಮೆಟ್ರಿಕ್ ನಂತರದ ಮತ್ತು 13 ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 7 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರ ನಿಗದಿಪಿಡಿಸಿರುವ ಮೆನು ಚಾರ್ಟ್ ಪ್ರಕಾರ ಆಹಾರವನ್ನು ನೀಡಲಾಗುತ್ತಿದೆ . ಅಲ್ಲದೇ, ವಿದ್ಯಾರ್ಥಿ ನಿಲಯಗಳಲ್ಲಿ ಟೇಸ್ಟ್ ರಿಜಿಸ್ಟರ್ ನ್ನು ನಿರ್ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ ಮೋಹನ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ. ಜಿ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯತೀಶ್.ಆರ್ ಅವರು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!